AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಲ್ಲದೆ ಸಮುದ್ರಕ್ಕೆ ಬಂದಿಲ್ಲ ನೀರು! ಕಡಿಮೆಯಾಗಿದೆ ಮೀನುಗಳ ಸಂತಾನೋತ್ಪತ್ತಿ, ಕೈಕಟ್ಟಿ ಕುಳಿತ ಮೀನುಗಾರರು

ಪ್ರಸಕ್ತ ಮುಂಗಾರು-ಹಿಂಗಾರು ಋತುವಿನಲ್ಲಿ ಸರಿಯಾಗಿ ಮಳೆ ಆಗದ ಹಿನ್ನೆಲೆ ಹಳ್ಳಕೊಳ್ಳ ತುಂಬಿ ನದಿ ನೀರು ಸಮುದ್ರಕ್ಕೆ ಬಂದಿಲ್ಲ. ಇದರಿಂದ ಮೀನುಗಳ ಸಂತಾನೊತ್ಪತ್ತಿ ಪ್ರಮಾಣ ಕಡಿಮೆ ಆಗಿದೆ. ಮೀನುಗಾರರು ಎಷ್ಟೆ ಆಳಕ್ಕೆ ಹೊದ್ರು, ಮೀನು ಸಿಗುವ ಪ್ರಮಾಣ ಭಾರಿ ಕಡಿಮೆ ಆಗಿದೆ.

ಮಳೆಯಿಲ್ಲದೆ ಸಮುದ್ರಕ್ಕೆ ಬಂದಿಲ್ಲ ನೀರು! ಕಡಿಮೆಯಾಗಿದೆ ಮೀನುಗಳ ಸಂತಾನೋತ್ಪತ್ತಿ, ಕೈಕಟ್ಟಿ ಕುಳಿತ ಮೀನುಗಾರರು
ಕಡಿಮೆಯಾಗಿದೆ ಮೀನುಗಳ ಸಂತಾನೋತ್ಪತ್ತಿ, ಕೈಕಟ್ಟಿ ಕುಳಿತ ಮೀನುಗಾರರು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Mar 05, 2024 | 3:00 PM

Share

ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ ಬೆನ್ನಲ್ಲೆ, ಕೊಟ್ಯಾಂತರ ರೂಪಾಯಿ ವೆಚ್ಚದ ಬೆಳೆ ಹಾನಿ ಆಗಿ, ಮುಂದೇನು ಎಂಬ ಆತಂಕದಲ್ಲಿ ಅನ್ನದಾತ ಕಾಲ ಕಳೆಯುತ್ತಿದ್ದಾನೆ. ಇನ್ನೂ ಕೆಲವೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭ ಆಗಿದ್ದೂ, ಜೀವ ಪಣಕ್ಕಿಟ್ಟು ಕುಡಿಯುವ ನೀರಿಗಾಗಿ ಹರಸಾಹಸ ಮಾಡುವ ಪ್ರಸಂಗಗಳು ಕಾಣ ಸಿಗುತ್ತಿವೆ. ಈ ಬರಗಾಲದ ಬಿಸಿ ಸದ್ಯ ಕಡಲತೀರಕ್ಕೂ ತಟ್ಟಿದ್ದೂ, ಮೀನುಗಾರರು ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಹೌದು ಪ್ರಸಕ್ತ ಸಾಲಿನಲ್ಲಿ ಸರಿಯಾಗಿ ಮಳೆ ಆಗದ ಹಿನ್ನೆಲೆ ಹಳ್ಳಕೊಳ್ಳ ತುಂಬಿ ನದಿ ನೀರು ಸಮುದ್ರಕ್ಕೆ ಬಂದಿಲ್ಲ. ಇದರಿಂದ ಮೀನುಗಳ ಸಂತಾನೊತ್ಪತ್ತಿ ಪ್ರಮಾಣ ಕಡಿಮೆ ಆಗಿದೆ.

ಮೀನುಗಾರರು ಎಷ್ಟೆ ಆಳಕ್ಕೆ ಹೊದ್ರು, ಮೀನು ಸಿಗುವ ಪ್ರಮಾಣ ಭಾರಿ ಕಡಿಮೆ ಆಗಿದೆ. ಹೀಗಾಗಿ ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಉಂಟಾಗಿದೆ. ಕಳೆದ ಬಾರಿಗಿಂತ ಈ ಬಾರಿ ಅರ್ಧದಷ್ಟು ಮಾತ್ರ ಮೀನುಗಳು ದೊರಕಿದ್ದು ಉತ್ತಮ ಮಾರುಕಟ್ಟೆ ಬೆಲೆ ಇದ್ದರೂ ಮೀನುಗಳು ಸಿಗದೇ ಮೀನುಗಾರ ಕೈಕಟ್ಟಿ ಕೂರುವಂತಾಗಿದೆ. ಮೀನುಗಾರಿಕೆ ಪ್ರಾರಂಭದ ದಿನದಲ್ಲಿ ಜಲ್ಲಿ ಫಿಷ್ ಗಳು ಹೇರಳವಾಗಿ ದೊರೆತು ನಷ್ಟ ಹೊಂದಿದರೇ ,ಇದೀಗ ಹವಾಮಾನ ಬದಲಾವಣೆ ಮೀನುಗಳು ಬೇರಡೆ ತೆರಳುವಂತಾಗಿದ್ದು ಮೀನುಗಾರರು ಮತ್ಸ್ಯ ಬೇಟೆಗೆ ತೆರಳದೇ ಬಂದರಿನಲ್ಲಿ ಬೋಟುಗಳನ್ನು ಲಂಗುರು ಹಾಕಿದ್ದಾರೆ.

Also Read: ಈಶಾ ಫೌಂಡೇಶನ್​ಗೆ ಹೋಗುವ ಪ್ರವಾಸಿಗರಿಗೆ ಗುಡ್ ನ್ಯೂಸ್; ಬಿಎಂಟಿಸಿಯಿಂದ ವಿಶೇಷ ಪ್ಯಾಕೇಜ್

ಇನ್ನು ಹವಾಮಾನ ಬದಲಾವಣೆ ಜೊತೆ ಉತ್ತಮ ಮಳೆಯಾಗದ ಕಾರಣ ಮೀನುಗಳಿಗೆ ಬೇಕಾಗುವ ವಾತಾವರಣ ನಿರ್ಮಾಣವಾಗಿಲ್ಲ, ಆದ್ರೂ ಕಳೆದ ಬಾರಿಗಿಂತ ಈ ಬಾರಿ ಒಂದೂವರೆ ಸಾವಿರ ಟನ್ ಮಾತ್ರ ನಷ್ಟವಾಗಿದೆ. ಜನವರಿ ನಂತರ ಉತ್ತಮ ಮೀನುಗಳು ಸಿಗುವ ನಂಬಿಕೆ ಇದೆ ಎಂಬುದು ಮೀನುಗಾರಿಕಾ ಇಲಾಖೆ ಆಶಾಭಾವನೆಯಲ್ಲಿತ್ತು. ಆದ್ರೆ ಮಾರ್ಚ್ ತಿಂಗಳು ಆರಂಭವಾಗಿದ್ರೂ ಮೀನುಗಳ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗಿದ್ದರಿಂದ ಮೀನುಗಾರರು ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಒಟ್ಟಿನಲ್ಲಿ ಇತ್ತ ರೈತರು ಬೆಳೆ ಹಾನಿ ಆಗಿದೆ ಎಂದು ನಷ್ಟ ಅನುಭವಿಸಿದ್ರೆ. ಕಡಲತೀರದಲ್ಲಿ ಮೀನುಗಾರರು ಸಹ ಮತ್ಸ್ಯ ಕ್ಷಾಮದಿಂದ ನಲುಗಿ ಹೋಗಿದ್ದು, ಕಡಲಲ್ಲಿ ಬಲೆ ಬೀಸಿ ಮೀನಿನ ಬೇಟೆ ಮಾಡಬೇಕಾದವರು ಖಾಲಿ ಕೈನಲ್ಲಿ ಕೂರುವಂತೆ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:58 pm, Tue, 5 March 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ