AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್​ನಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಕುರುಬೂರ್ ಶಾಂತಕುಮಾರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಇದೀಗ ಕುರುಬೂರ್ ಶಾಂತಕುಮಾರ್ ಅವರನ್ನು ಪಂಜಾಬ್​ನಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಮಾಡಿಸಲು ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಕಲ ವ್ಯವಸ್ಥೆ ಮಾಡಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್
Kurubur Shanthakumar
ಹರೀಶ್ ಜಿ.ಆರ್​.
| Edited By: |

Updated on: Feb 15, 2025 | 12:01 PM

Share

ಬೆಂಗಳೂರು, (ಫೆಬ್ರವರಿ 15): ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಲಿಫ್ಟ್ ಮಾಡಲು ಕೇಂದ್ರ ರೈಲ್ವೆ  ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ.

ಅಪಘಾತದಲ್ಲಿ ಶಾಂತಕುಮಾರ್ ಅವರಿಗೆ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಶಾಂತಕುಮಾರ್ ಅವರನ್ನು ಏರ್​ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಪಂಜಾಬ್​ನಲ್ಲಿ ಕುರುಬೂರು ಶಾಂತಕುಮಾರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ(ಫೆಬ್ರವರಿ 14) ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಈ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ವಿವಿಧ ಬೇಡಿಕೆಗಳ ಆಗ್ರಹಿಸಿ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಇಂದು (ಫೆಬ್ರವರಿ 14) ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿತ್ತು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?