‘ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ’

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ: ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ […]

ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ
ಸಾಧು ಶ್ರೀನಾಥ್​

Updated on: Nov 18, 2019 | 1:55 PM

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ:
ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ ಸತ್ಯ ಹೇಳಿದ್ದಾರಾ? ಬಾಯಿ ತಪ್ಪಿಯಾದ್ರೂ ಅವರು ಯಾವತ್ತೂ ಸತ್ಯ ಹೇಳಿಲ್ಲ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us