AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Srinivas Prasad: ಬೌದ್ಧಧರ್ಮದ ವಿಧಿವಿಧಾನದಂತೆ ಶ್ರೀನಿವಾಸ ಪ್ರಸಾದ್ ಅಂತ್ಯಕ್ರಿಯೆ, ಎಲ್ಲಿ, ಯಾವಾಗ? ಇಲ್ಲಿದೆ ವಿವರ

ಸಂಸದ, ಹಿರಿಯ ಮುತ್ಸದ್ಧಿ, ದಲಿತ ನಾಯಕ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಇಂದು ವಿಧಿವಶವಾಗಿದ್ದಾರೆ. ಮೂತ್ರಕೋಶ ಸಮಸ್ಯೆದಿಂದ ಬಳಲುತ್ತಿದ್ದ ಪ್ರಸಾದ್‌ ಅಗಲಿಕೆಗೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನಾಳೆ ಮಧ್ಯಾಹ್ನದ ಬಳಿಕ ಮೈಸೂರಿನಲ್ಲೇ ಬೌದ್ಧಧರ್ಮದ ವಿಧಿವಿಧಾನದಂತೆ ಶ್ರೀನಿವಾಸ ಪ್ರಸಾದ್​ ಅಂತ್ಯಕ್ರಿಯೆ ನಡೆಯಲಿದೆ ಎಂದು ಟಿವಿ9ಗೆ ಅಂತಾರಾಷ್ಟ್ರೀಯ ಬುದ್ಧ ಭಿಕ್ಕು ಚಾರಿಟೇಬಲ್ ಟ್ರಸ್ಟ್​ ಮಾಹಿತಿ ನೀಡಿದೆ.

V Srinivas Prasad: ಬೌದ್ಧಧರ್ಮದ ವಿಧಿವಿಧಾನದಂತೆ ಶ್ರೀನಿವಾಸ ಪ್ರಸಾದ್ ಅಂತ್ಯಕ್ರಿಯೆ, ಎಲ್ಲಿ, ಯಾವಾಗ? ಇಲ್ಲಿದೆ ವಿವರ
ಶ್ರೀನಿವಾಸ ಪ್ರಸಾದ್
TV9 Web
| Edited By: |

Updated on: Apr 29, 2024 | 3:00 PM

Share

ಮೈಸೂರು, ಏಪ್ರಿಲ್​ 29: ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ (V Srinivas Prasad) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 76 ವರ್ಷದ ಶ್ರೀನಿವಾಸ್ ಪ್ರಸಾದ್​ರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 1.20ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಾಳೆ ಮಧ್ಯಾಹ್ನದ ಬಳಿಕ ಮೈಸೂರಿನಲ್ಲೇ ಬೌದ್ಧಧರ್ಮದ ವಿಧಿವಿಧಾನದಂತೆ ಶ್ರೀನಿವಾಸ ಪ್ರಸಾದ್​ ಅಂತ್ಯಕ್ರಿಯೆ (cremation) ನಡೆಯಲಿದೆ ಎಂದು ಬೋಧಿದತ್ತ ಮಾಹಿತಿ ನೀಡಲಾಗಿದೆ.

ರಾಜ್ಯ ಹಾಗೂ ಹೊರರಾಜ್ಯಗಳ ಬೌದ್ಧಭಿಕ್ಕುಗಳಿಂದ ಅಂತಿಮ ವಿಧಿವಿಧಾನ ಕಾರ್ಯಗಳು ನಡೆಯಲಿದ್ದು, ಎಂಟು ಬೌದ್ಧಭಿಕ್ಕುಗಳಿಂದ ಪಂಚಶೀಲತತ್ವ ಬೋಧನೆ, ತ್ರಿಸರಣ ಮೂಲಕ ಅಂತ್ಯಕ್ರಿಯೆ ನಡೆಯಲಿದೆ. ಬೌದ್ಧಧರ್ಮದ ಅನುಯಾಯಿ ಆಗಿದ್ದರಿಂದ ಅಹಿಂಸೆ, ಸತ್ಯದ ಸಂದೇಶದ ಮೂಲಕ ವಿಧಿವಿಧಾನ ನೆರವೇರಿಸಲಾಗುತ್ತೆ ಎಂದು ಟಿವಿ9ಗೆ ಅಂತಾರಾಷ್ಟ್ರೀಯ ಬುದ್ಧ ಭಿಕ್ಕು ಚಾರಿಟೇಬಲ್ ಟ್ರಸ್ಟ್​ ಮಾಹಿತಿ ನೀಡಿದೆ.

ಇದನ್ನೂ ಓದಿ: V Srinivas prasad death: ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್ ತಮ್ಮದೇ ಆದ ಪ್ರಾಬಲ್ಯವನ್ನು ಹೊಂದಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾರದ ಲೋಕಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: V Srinivas prasad Obituary: ಚಾಮರಾಜನಗರದಲ್ಲಿ ಕಮಲ ಅರಳಿಸಿದ ಶ್ರೀನಿವಾಸ ಪ್ರಸಾದ್ ರಾಜಕೀಯ ಪಯಣ ಇಲ್ಲಿದೆ

ತಂದೆಯ ನಿಧನದ ಸುದ್ದಿ ಕುರಿತು ಪುತ್ರಿ ಪ್ರತಿಮಾ ಪ್ರಸಾದ್ ಹಾಗೂ ಅವರ ಅಳಿಯ ಹಾಗೂ ನಂಜನಗೂಡು ಶಾಸಕ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಗಂಭೀರವಾಗಿತ್ತು. ಎಲ್ಲಾ ವೈದ್ಯರು ಅವರನ್ನ ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ನಮ್ಮನ್ನು ಅಗಲಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ನಿವಾಸಕ್ಕೆ ಕೊಂಡೊಯ್ದು ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದರು.

6 ಬಾರಿ ಸಂಸದ, 4 ಬಾರಿ ಶಾಸಕರಾಗಿದ್ದ ಶ್ರೀನಿವಾಸ ಪ್ರಸಾದ್

ರಾಜಕೀಯದಲ್ಲಿ ಸಾಕಷ್ಟು ಸೇವೆ ಸಲ್ಲಿಸಿರುವ ಶ್ರೀನಿವಾಸ್ ಪ್ರಸಾದ್ 6 ಬಾರಿ ಸಂಸದರಾಗಿ ಆಯ್ಕೆ ಆಗಿದ್ದರೆ, 4ಬಾರಿ ಶಾಸಕರಾಗಿ ಗೆದ್ದು ಬಂದಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಅಲ್ಲದೇ ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಆಹಾರ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮೈಸೂರು-ಚಾಮರಾಜನಗರ ಭಾಗದ ದಲಿತ ಸಮುದಾಯದ ಪ್ರಭಾವಿ ಲೀಡರ್ ಕೂಡ ಆಗಿದ್ದರು.

ವರದಿ: ಶಾಂತಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ