Breaking News Today Live: ಅಮೆರಿಕ, ಇರಾನ್ ನಡುವೆ ಮತ್ತೆ ಹೆಚ್ಚಾಯ್ತು ಯುದ್ಧದ ಭೀತಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಜಾಗತಿಕ ಯುದ್ಧ ಭೀತಿ, ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಆತಂಕ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ವಿಭಿನ್ನ ಪ್ರಿಂಟ್ ಬಿಡುಗಡೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಡಿಎಂಕೆ ಯೋಜನೆಗಳನ್ನು ರದ್ದುಗೊಳಿಸಿದ ಸಿಎಂ ವಿಜಯ್
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಹಿಂದಿನ ಡಿಎಂಕೆ ಸರ್ಕಾರದ 246 ಕೋಟಿ ರೂ. ಮೌಲ್ಯದ 46 ಯೋಜನೆಗಳನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ತಮಿಳುನಾಡಿನ ಪ್ರಮುಖ ದೇಗುಲಗಳ ಅಭಿವೃದ್ಧಿಗೆ ನೀಡಲಾಗಿದ್ದ ನಿಧಿಯೂ ಒಳಗೊಂಡಿದೆ. ಸಿಎಂ ವಿಜಯ್ ಅವರ ಈ ದಿಢೀರ್ ಮತ್ತು ದೃಢ ನಿರ್ಧಾರವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಚರ್ಚೆಗೆ ಕಾರಣವಾಗಿದೆ.
ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿದ್ದು, ಡೊನಾಲ್ಡ್ ಟ್ರಂಪ್ ಅವರ ಭೀಕರ ದಾಳಿಯ ಬೆದರಿಕೆಗೆ ಇರಾನ್ ಕಠಿಣ ತಿರುಗೇಟು ನೀಡಿದೆ. ಇತ್ತ ಕರ್ನಾಟಕದಲ್ಲಿ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರವನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಸಿಎಂಗೆ ಮನವಿ ಮಾಡಲಾಗಿದ್ದು, ಜನಸಾಮಾನ್ಯರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಇನ್ನು ಸಿನಿಮಾ ಲೋಕದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಭಾರತ ಮತ್ತು ವಿದೇಶಗಳಲ್ಲಿ ಎರಡು ವಿಭಿನ್ನ ಪ್ರಿಂಟ್ಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - Jun 22,2026 8:37 AM




