Breaking News Today Live: ಅಮೆರಿಕ, ಇರಾನ್ ನಡುವೆ ಮತ್ತೆ ಹೆಚ್ಚಾಯ್ತು ಯುದ್ಧದ ಭೀತಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಜಾಗತಿಕ ಯುದ್ಧ ಭೀತಿ, ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಆತಂಕ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ವಿಭಿನ್ನ ಪ್ರಿಂಟ್ ಬಿಡುಗಡೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.

Breaking News Today Live: ಅಮೆರಿಕ, ಇರಾನ್ ನಡುವೆ ಮತ್ತೆ ಹೆಚ್ಚಾಯ್ತು ಯುದ್ಧದ ಭೀತಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Updated on: Jun 22, 2026 | 10:06 AM

LIVE NEWS & UPDATES

  • 22 Jun 2026 10:06 AM (IST)

    ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್!

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ತಡರಾತ್ರಿ ಕ್ಯಾಂಟರ್ ನಿಯಂತ್ರಣ ತಪ್ಪಿ ಶಾಲೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈ ಸ್ಥಳ ಅಪಘಾತದ ಹಾಟ್ ಸ್ಪಾಟ್ ಆಗಿದ್ದು, 15 ದಿನಗಳ ಹಿಂದೆಯೂ ಇಲ್ಲಿ ದುರಂತ ನಡೆದಿತ್ತು. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 22 Jun 2026 09:57 AM (IST)

    ಬೆಂಗಳೂರಿನಲ್ಲಿ ಇಂದು, ನಾಳೆ ವಿದ್ಯುತ್ ಕಡಿತ: ಎಲ್ಲೆಲ್ಲಿ ಪವರ್ ಕಟ್?

    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ಜೂನ್ 22 ಮತ್ತು 23 ರಂದು ತುರ್ತು ಮೂಲಸೌಕರ್ಯ ನಿರ್ವಹಣೆ ಹಾಗೂ ನಿಯತಕಾಲಿಕ ಕಾಮಗಾರಿಗಳ ಕಾರಣದಿಂದಾಗಿ ಸುದೀರ್ಘ 7 ಗಂಟೆಗಳ ಕಾಲ ವಿದ್ಯುತ್ ಕಡಿತ ಇರಲಿದೆ. ಮತ್ತಷ್ಟು ಓದಿ

  • 22 Jun 2026 09:54 AM (IST)

    ಮಾವಿಗೆ ಬೆಂಬಲ ಬೆಲೆ ಆಗ್ರಹಿಸಿ ರಸ್ತೆಯಲ್ಲಿ ಮಾವಿನ ಹಣ್ಣು ಸುರಿದು ಪ್ರತಿಭಟನೆ

    ಮಾವಿನ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ಜಿಲ್ಲಾ ಬಂದ್‌ಗೆ ಕರೆ ನೀಡಿವೆ. ಪ್ರತಿಭಟನಾಕಾರರು ರಸ್ತೆಗೆ ಮಾವಿನ ಹಣ್ಣುಗಳನ್ನು ಸುರಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 22 Jun 2026 09:52 AM (IST)

    ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ: 54 ಮಂದಿಗೆ ಗಾಯ, 18 ನಾಪತ್ತೆ

    ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 54 ಜನ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ. ಸ್ಥಾವರದಲ್ಲಿ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಈ ದುರಂತ ಸಂಭವಿಸಿದೆ ಎಂದು ಕತಾರ್ ಎನರ್ಜಿ ದೃಢಪಡಿಸಿದೆ. ಸದ್ಯ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಭರದಿಂದ ಕಾರ್ಯಾಚರಣೆ ನಡೆಸುತ್ತಿವೆ.

  • 22 Jun 2026 08:39 AM (IST)

    ಡಿಎಂಕೆ ಯೋಜನೆಗಳನ್ನು ರದ್ದುಗೊಳಿಸಿದ ಸಿಎಂ ವಿಜಯ್

    ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಹಿಂದಿನ ಡಿಎಂಕೆ ಸರ್ಕಾರದ 246 ಕೋಟಿ ರೂ. ಮೌಲ್ಯದ 46 ಯೋಜನೆಗಳನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ತಮಿಳುನಾಡಿನ ಪ್ರಮುಖ ದೇಗುಲಗಳ ಅಭಿವೃದ್ಧಿಗೆ ನೀಡಲಾಗಿದ್ದ ನಿಧಿಯೂ ಒಳಗೊಂಡಿದೆ. ಸಿಎಂ ವಿಜಯ್ ಅವರ ಈ ದಿಢೀರ್ ಮತ್ತು ದೃಢ ನಿರ್ಧಾರವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಚರ್ಚೆಗೆ ಕಾರಣವಾಗಿದೆ.

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿದ್ದು, ಡೊನಾಲ್ಡ್ ಟ್ರಂಪ್ ಅವರ ಭೀಕರ ದಾಳಿಯ ಬೆದರಿಕೆಗೆ ಇರಾನ್ ಕಠಿಣ ತಿರುಗೇಟು ನೀಡಿದೆ. ಇತ್ತ ಕರ್ನಾಟಕದಲ್ಲಿ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರವನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಸಿಎಂಗೆ ಮನವಿ ಮಾಡಲಾಗಿದ್ದು, ಜನಸಾಮಾನ್ಯರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಇನ್ನು ಸಿನಿಮಾ ಲೋಕದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಭಾರತ ಮತ್ತು ವಿದೇಶಗಳಲ್ಲಿ ಎರಡು ವಿಭಿನ್ನ ಪ್ರಿಂಟ್‌ಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 8:37 am, Mon, 22 June 26

Follow Us