AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಕೊಟ್ಟ ಲಸಿಕೆ ಯಾವುದು ಗೊತ್ತಾ?

ಕೊರೊನಾ ಲಸಿಕೆ ತಾಲೀಮಿನಲ್ಲಿ ‘ಲಸಿಕೆ’ ನೀಡುತ್ತಿರುವುದು ಸತ್ಯ. ಆದರೆ, ಅದು ಕೊರೊನಾ ಲಸಿಕೆಯಲ್ಲ. ತಾಲೀಮು ಪ್ರಕ್ರಿಯೆಯನ್ನು ಸರ್ಕಾರ ಅತಿ ಗಂಭೀರವಾಗಿ ಪರಿಗಣಿಸಿದ್ದು ಲಸಿಕೆ ವಿತರಣೆ ಹೇಗೆ ಆಗುತ್ತದೋ ಅದರಂತೆಯೇ ತಾಲೀಮು ನಡೆಸಲಾಗುತ್ತಿದೆ. ಆದಕಾರಣ ಇಲ್ಲಿ ಲಸಿಕೆಯನ್ನೂ ನೀಡಲಾಗುತ್ತಿದೆ.

ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಕೊಟ್ಟ ಲಸಿಕೆ ಯಾವುದು ಗೊತ್ತಾ?
ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಕೊಟ್ಟ ಲಸಿಕೆ ಯಾವುದು?
Skanda
| Updated By: ಸಾಧು ಶ್ರೀನಾಥ್​|

Updated on: Jan 08, 2021 | 5:55 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು 2ನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆದಿದೆ. ಲಸಿಕೆ ವಿತರಣೆ ಶುರುವಾದ ಮೇಲೆ ಪಾಲಿಸಬೇಕಾದ ಅಷ್ಟೂ ಪ್ರಕ್ರಿಯೆಗಳನ್ನು ತಾಲೀಮಿನಲ್ಲಿ ನಡೆಸುವುದರಿಂದ ಲಸಿಕೆ ನೀಡುವಾಗ ಗೊಂದಲ ಉದ್ಭವವಾಗದಂತೆ ನಿಗಾ ವಹಿಸಲಾಗುತ್ತಿದೆ. ಆದರೆ, ತಾಲೀಮು ಪ್ರಕ್ರಿಯೆಯಲ್ಲಿ ಯಾವ ಲಸಿಕೆ ನೀಡಲಾಗುತ್ತಿದೆ? ಕೊರೊನಾ ಲಸಿಕೆ ಇನ್ನೂ ಬಂದೇ ಇಲ್ಲ ಎಂದಾದಲ್ಲಿ ತಾಲೀಮಿನ ಉದ್ದೇಶ ಏನು ಎಂಬ ಪ್ರಶ್ನೆ ಇನ್ನೂ ಹಲವರಲ್ಲಿ ಉಳಿದಿದೆ.

ನಂಬಲರ್ಹ ಮೂಲಗಳ ಪ್ರಕಾರ ಕೊರೊನಾ ಲಸಿಕೆ ತಾಲೀಮಿನಲ್ಲಿ ‘ಲಸಿಕೆ’ ನೀಡುತ್ತಿರುವುದು ಸತ್ಯ. ಆದರೆ, ಅದು ಕೊರೊನಾ ಲಸಿಕೆಯಲ್ಲ. ತಾಲೀಮು ಪ್ರಕ್ರಿಯೆಯನ್ನು ಸರ್ಕಾರ ಅತಿ ಗಂಭೀರವಾಗಿ ಪರಿಗಣಿಸಿದ್ದು ಲಸಿಕೆ ವಿತರಣೆ ಹೇಗೆ ಆಗುತ್ತದೋ ಅದರಂತೆಯೇ ತಾಲೀಮು ನಡೆಸಲಾಗುತ್ತಿದೆ. ಆದಕಾರಣ ಇಲ್ಲಿ ಲಸಿಕೆಯನ್ನೂ ನೀಡಲಾಗುತ್ತಿದೆ.

ಕೊರೊನಾ ಲಸಿಕೆ ಅಲ್ಲ.. ಮತ್ಯಾವ ಲಸಿಕೆ? ತಾಲೀಮು ಪ್ರಕ್ರಿಯೆಯಲ್ಲಿ ಆರೋಗ್ಯ ಕಾರ್ಯಕರ್ತರು ಭಾಗವಹಿಸುತ್ತಿದ್ದು, ಅಲ್ಲಿರುವ ಎಲ್ಲರಿಗೂ ವೈದ್ಯಕೀಯ ವಿಚಾರಗಳ ಬಗ್ಗೆ ಮಾಹಿತಿ ಇರುತ್ತದೆ. ಆದ್ದರಿಂದ ಕೆಲ ಆಯ್ದ ಲಸಿಕೆಗಳನ್ನು ಮೊದಲೇ ನಿರ್ಧರಿಸಿದ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಈ ಲಸಿಕೆಗಳು ಯಾವುದೇ ರೀತಿಯ ಅಡ್ಡಪರಿಣಾಮವನ್ನು ಉಂಟುಮಾಡುವುದಿಲ್ಲ ಎಂಬುದನ್ನು ಮೊದಲೇ ಖಚಿತಪಡಿಸಿಕೊಂಡು ನೀಡಲಾಗುತ್ತಿದೆ.

ಹೀಗೆ ಚುಚ್ಚುಮದ್ದನ್ನೂ ತಾಲೀಮಿನಲ್ಲಿ ನೀಡುವುದರಿಂದ ಕೊರೊನಾ ಲಸಿಕೆ ವಿತರಣೆಯ ದಿನ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರಿಗೆ ಪರಿಸ್ಥಿತಿ ನಿಭಾಯಿಸುವುದು ಸುಲಭವಾಗಲಿದೆ ಎನ್ನುವುದು ತಾಲೀಮಿನಲ್ಲಿ ಭಾಗವಹಿಸಿದ ವೈದ್ಯರ ಅಭಿಪ್ರಾಯ.

ಕೊರೊನಾ ಲಸಿಕೆ ಸಾಗಣೆಗೆ ₹ 480 ಕೋಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವಾಲಯ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ