AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ಇರಲಿದೆ ವಾಲಿಡಿಟಿ: ಹೊಸ ಪ್ರಯೋಗಕ್ಕೆ ಮುಂದಾದ ಆರೋಗ್ಯ ಇಲಾಖೆ

ಕೊವಿಡ್ ಬಳಿಕ ಜನರುಲ್ಲಿ ಸೆಲ್ಪ್ ಮೆಡಿಕೇಶನ್ ಹೆಚ್ಚಾಗಿದೆ. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್​ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಮೆಡಿಕಲ್ ಶಾಪ್​ಗಳು ಜನರು ಕೇಳುವ ಮಾತ್ರೆಗಳನ್ನ ವೈದ್ಯರ ಸಲಹೆ ಇಲ್ಲದೆ ನೀಡುತ್ತಿರುವುದು ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈಗ ಕಡಿವಾಣಕ್ಕೆ ಮುಂದಾಗಿದೆ.

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ಇರಲಿದೆ ವಾಲಿಡಿಟಿ: ಹೊಸ ಪ್ರಯೋಗಕ್ಕೆ ಮುಂದಾದ ಆರೋಗ್ಯ ಇಲಾಖೆ
ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ಇರಲಿದೆ ವಾಲಿಡಿಟಿ: ಹೊಸ ಪ್ರಯೋಗಕ್ಕೆ ಮುಂದಾದ ಆರೋಗ್ಯ ಇಲಾಖೆ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 31, 2024 | 10:37 PM

Share

ಬೆಂಗಳೂರು, ಆಗಸ್ಟ್​​​ 31: ಜನರ ನಡೆ ಆರೋಗ್ಯ ಇಲಾಖೆ ಹಾಗೂ ವೈದ್ಯರ (doctor’s) ಆತಂಕಕ್ಕೆ ಕಾರಣವಾಗುತ್ತಿದೆ. ಕೊವಿಡ್ ಬಳಿಕ ಜನರು ಹೆಚ್ಚಾಗಿ ಸೆಲ್ಪ್ ಮೆಡಿಕೇಶನ್ ಹಾಗೂ ಮಾತ್ರೆಗಳ ಸೇವೆನೆಗೆ ಮುಂದಾಗಿದ್ದಾರೆ. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದರು ಮೆಡಿಕಲ್ ಶಾಪ್​ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಇನ್ನು ಇತ್ತಿಚ್ಚಿಗೆ ಮಹಿಳೆಯು ಅಸುರಕ್ಷಿತ ಗರ್ಭಪಾತ ಮಾತ್ರೆಗನ್ನು ನುಂಗುತ್ತಿದ್ದು ವೈದ್ಯರ ಟೆನ್ಷನ್​ಗೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಕಡಿವಾಣಕ್ಕೆ ಹೊಸ ಅಸ್ತ್ರ ಪ್ರಯೋಗಿಸಿದೆ.

ಇತ್ತಿಚ್ಚಿಗೆ ಜನರು ಬೇಕಾಬಿಟ್ಟಿಯಾಗಿ ಮಾತ್ರ ನುಂಗಿ ವೈದ್ಯರ ಟೆನ್ಷನ್​ಗೆ ಕಾರಣವಾಗುತ್ತಿದ್ದಾರೆ. ಕೊವಿಡ್ ಬಳಿಕ ಜನರು ಸಣ್ಣಪುಟ್ಟ ಸಮಸ್ಯೆಗೂ ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಮೊರೆ ಹೋಗುತ್ತಿದ್ದಾರೆ. ತಾವೇ ಔಷಧ ಮಳಿಗೆಗೆ ಹೋಗಿ ಮಾತ್ರ ಖರೀದಿ ಮಾಡುತ್ತಿದ್ದಾರೆ. ಇನ್ನು ಔಷಧ ಮಾರಟ ಮಳಿಗೆ ಮೆಡಿಕಲ್ ಶಾಪ್​ಗಳು ಕೂಡ ಕನಿಷ್ಠ ಪ್ರಜ್ಞೆ ಇಲ್ಲದೆ ಯಾರಂದರೆ ಅವರಿಗೆ ಕೇಳಿದ ಔಷಧ ನೀಡುತ್ತಿವೆ.

ಇದನ್ನೂ ಓದಿ: ಗೈಡ್ ಲೈನ್ ಅಳವಡಿಕೆಗೆ ಪಿಜಿಗಳಿಗೆ ಡೆಡ್ ಲೈನ್ ಕೊಟ್ಟ ಪಾಲಿಕೆ, ಸೆಪ್ಟೆಂಬರ್ 15 ರೊಳಗೆ ರಿಜಿಸ್ಟರ್ ಆಗದಿದ್ರೆ ಪಿಜಿ ಬಂದ್

ಸೆಲ್ಪ್ ಮೆಡಿಕೇಶನ್ ಹಾಗೂ ಮಾತ್ರೆಗಳ ಸೇವೆನೆಗೆ ಕಂಗಾಲಾಗಿರುವ ವೈದ್ಯರು. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್​ಗಳಿಗೆ ಹೋಗಿ ವೈದ್ಯರ ಪ್ರಿಸ್ಕ್ರಿಪ್ಷನ್ ತೊರಿಸಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆಗೂ ಜನರು ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಮೊರೆ ಹೋಗುತ್ತಿದ್ದಾರೆ. ಅತಿಯಾದ ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಬಳಕೆಯಿಂದ ಮಾತ್ರೆಗಳ ರಿಜೋಲೆನ್ಸ್ ದೇಹದಲ್ಲಿ ಹೆಚ್ಚಾಗಿದ್ದು ವೈದ್ಯರು ಪರದಾಡುವ ಸ್ಥಿತಿ ಎದುರಾಗಿದೆ.

ಆ್ಯಂಟಿ ಬಯಾಟಿಕ್‌ ರಿಜೋಲೆನ್ಸ್ ಮಾತ್ರೆಗಳ ಸೇವನೆಯಿಂದ ದೇಹದಲ್ಲಿ ಡ್ರಗ್ ರೆಜಿಲೆಸನ್ಸ್ ಬಂದಿದೆ. ಇದರಿಂದ ಆ್ಯಂಟಿ ಬಯೋಟಿಕ್ ಮಾತ್ರೆ ವರ್ಕೆ ಆಗುತ್ತಿಲ್ಲ. ಹೆಚ್ಚು ರೋಗನಿರೋಧಕ ಮಾತ್ರೆಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿಯನ್ನೆ ಕಳೆದುಕೊಳ್ಳುತ್ತಿರುವ ಜನರು ಡೋಲೋ ಪ್ಯಾರೇಸಿಟಿಮಾಲ್ ಡಾರ್ಟ್ ಜನರಿಗೆ ತಗುಲುತ್ತಿಲ್ಲ. ಹೊಸ ರೋಗನಿರೋಧಕ ಮಾತ್ರೆಗಳನ್ನೆ ಅಭಿವೃದ್ಧಿ ಪಡಿಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಶೇ 70% ಜನರು ಆ್ಯಂಟಿ ಬಯಾಟಿಕ್ ಮಾತ್ರೆಗಳ ದಾಸರಾಗುತ್ತಿದ್ದು ವೈದ್ಯರು ಪರದಾಡುವಂತಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಕಡಿವಾಣಕ್ಕೆ ಮುಂದಾಗಿದೆ. ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ನಿಗದಿತ ಸಮಯ ಫಿಕ್ಸ್ ಮಾಡಲು ಮುಂದಾಗಿದ್ದು ನಂತರದ ದಿನಗಳಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರ ನೀಡುವುದಕ್ಕೆ ನಿರ್ಬಂಧಕ್ಕೆ ಮುಂದಾಗಿದೆ.

ಇದನ್ನೂ ಓದಿ: ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್

ಇನ್ನು ಔಷಧ ಮಳಿಗೆಗಳು ಕೌಂಟರ್ ಮೆಡಿಸಿನ್ ರೂಪದಲ್ಲಿ ಗರ್ಭಪಾತ ಮಾತ್ರೆ ಸೇರಿದ್ದಂತೆ ಕೆಲವು ಅಪಾಯಕಾರಿಯಾದ ಔಷಧಗಳನ್ನ ವೈದ್ಯರ ಸಲಹಾ ಚೀಟಿ ಇಲ್ಲದೆ ನೀಡಬಾರದು. ಈ ಬಗ್ಗೆ ಆರೋಗ್ಯ ಇಲಾಖೆಯ ಆದೇಶ ಇದ್ರು ಕೂಡಾ ಕೆಲವು ಔಷಧ ಮಳಿಗೆಗಳು ನಿಯಮ ಉಲ್ಲಂಘನೆ ಮಾಡ್ತೀವೆ. ಈ ಹಿನ್ನಲೆ ಎಚ್ಚೆತ್ತುಗೊಂಡಿರುವ ಆರೋಗ್ಯ ಇಲಾಖೆ ಕಾನೂನು ಬಾಹಿರವಾಗಿ ಮಾತ್ರೆಗಳನ್ನ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೌಂಟರ್ ಮೆಡಿಸಿನ ನೀಡುವ ಮೆಡಿಕಲ್ ಶಾಪ್​ಗಳ ಲೈಸೆನ್ಸ್ ರದ್ದು ಮಾಡಲು ಮುಂದಾಗಿದೆ ಹಾಗೂ ಕಾನೂನು ಶಿಕ್ಷೆಗೆ ಒಳಪಡಿಸಲು ಮುಂದಾಗಿದೆ. ಸದ್ಯ ವೈದ್ಯರು ಆರೋಗ್ಯ ಇಲಾಖೆಯ ಕ್ರಮ ಒಳೆಯದು ಅಂತಿದ್ದಾರೆ. ಇಲ್ಲದೆ ಇದ್ರೆ ಚಿಕಿತ್ಸೆ ನೀಡುವುದು ನಮಗೆ ಸಮಸ್ಯೆ ಎಂದು ಜನರಲ್ ಮೆಡಿಸಿನ್ ಡಾ ಸುರೇಶ್ ಹೇಳಿದ್ದಾರೆ.

ಒಟ್ನಲ್ಲಿ ಕೊವಿಡ್ ಬಳಿಕ ಜನರುಲ್ಲಿ ಸೆಲ್ಪ್ ಮೆಡಿಕೇಶನ್ ಹೆಚ್ಚಾಗಿದೆ. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್​ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಇನ್ನು ಇದನ್ನ ಬಂಡವಾಳ ಮಾಡಿಕೊಂಡ ಕೆಲವು ಮೆಡಿಕಲ್ ಶಾಪ್​ಗಳು ಜನರು ಕೇಳುವ ಮಾತ್ರೆಗಳನ್ನ ವೈದ್ಯರ ಸಲಹೆ ಇಲ್ಲದೆ ನೀಡುತ್ತಿರುವುದು ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈಗ ಕಡಿವಾಣಕ್ಕೆ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ