AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇಂದು ಸಹ ವಿಚಾರಣೆಗೆ ಹಾಜರಾಗಿದ್ದರು.

ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್
ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್​
Jagadisha B
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 12, 2024 | 8:42 PM

Share

ಬೆಂಗಳೂರು, ಜುಲೈ 12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation Scam) ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ (Basanagouda Daddal) ಎಸ್ಐಟಿ ಮತ್ತೆ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದೆ. ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಮೇಲೆ ಎಸ್​ಐಟಿ ಮುಂದೆ ಬಂದಿದ್ದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದರು.

ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ಮಾಡಲಾಗಿತ್ತು. ಇಂದು ಇಡಿಯಿಂದ ಅರೆಸ್ಟ್ ಭಯದಲ್ಲೇ ಎಸ್​​ಐಟಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ನಾಲ್ಕು ಗಂಟೆಗೂ ಹೆಚ್ಚು ವಿಚಾರಣೆ ಮಾಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ರಾಜ್ಯ, ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಶೀತಲ ಸಮರ

ಬೆಂಗಳೂರಿನ ಎಸ್​​ಐಟಿ ಕಚೇರಿ ಬಳಿ ಶಾಸಕ ದದ್ದಲ್​ ಪ್ರತಿಕ್ರಿಯಿಸಿದ್ದು, ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ಕೆಲ ದಾಖಲೆ ಪರಿಶೀಲಿಸಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಕೂಡ ಕೇಳಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ. ಎಸ್​​​ಐಟಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದ್ದಾರೆ.

ಇಡಿ ಕಣ್ಣು ತಪ್ಪಿಸಿ ಎಸ್​ಐಟಿ ಮುಂದೆ ಹಾಜರ: ನನ್ನನ್ನ ಅರೆಸ್ಟ್ ಮಾಡಿ ಎಂದ ಶಾಸಕ ದದ್ದಲ್

ಇಡಿ ಕಣ್ಣು ತಪ್ಪಿಸಿ ಶಾಸಕ ದದ್ದಲ್ ಎಸ್​ಐಟಿ ಮುಂದೆ ಹಾಜರಾಗಿದ್ದು, ನನ್ನನ್ನ ಅರೆಸ್ಟ್ ಮಾಡಿ ಎಂದು ಮನವಿ ಮಾಡಿದ್ದಾರೆ. ಎಸ್​ಐಟಿ ಅಧಿಕಾರಿ ಡಿವೈಎಸ್​ಪಿ ಶ್ರಿನಿವಾಸ್ ಮುಂದೆ ನನ್ನನ್ನ ಅರೆಸ್ಟ ಮಾಡುವಂತೆ ಕೇಳಿದ್ದಾರೆ. ಎಸ್​ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಬಳಿಕ ಎಸ್​ಐಟಿ ಮುಂದೆ ಬಂದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 pm, Fri, 12 July 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!