ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇಂದು ಸಹ ವಿಚಾರಣೆಗೆ ಹಾಜರಾಗಿದ್ದರು.

ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್
ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 12, 2024 | 8:42 PM

ಬೆಂಗಳೂರು, ಜುಲೈ 12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation Scam) ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ (Basanagouda Daddal) ಎಸ್ಐಟಿ ಮತ್ತೆ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದೆ. ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಮೇಲೆ ಎಸ್​ಐಟಿ ಮುಂದೆ ಬಂದಿದ್ದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದರು.

ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ಮಾಡಲಾಗಿತ್ತು. ಇಂದು ಇಡಿಯಿಂದ ಅರೆಸ್ಟ್ ಭಯದಲ್ಲೇ ಎಸ್​​ಐಟಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ನಾಲ್ಕು ಗಂಟೆಗೂ ಹೆಚ್ಚು ವಿಚಾರಣೆ ಮಾಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ರಾಜ್ಯ, ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಶೀತಲ ಸಮರ

ಬೆಂಗಳೂರಿನ ಎಸ್​​ಐಟಿ ಕಚೇರಿ ಬಳಿ ಶಾಸಕ ದದ್ದಲ್​ ಪ್ರತಿಕ್ರಿಯಿಸಿದ್ದು, ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ಕೆಲ ದಾಖಲೆ ಪರಿಶೀಲಿಸಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಕೂಡ ಕೇಳಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ. ಎಸ್​​​ಐಟಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದ್ದಾರೆ.

ಇಡಿ ಕಣ್ಣು ತಪ್ಪಿಸಿ ಎಸ್​ಐಟಿ ಮುಂದೆ ಹಾಜರ: ನನ್ನನ್ನ ಅರೆಸ್ಟ್ ಮಾಡಿ ಎಂದ ಶಾಸಕ ದದ್ದಲ್

ಇಡಿ ಕಣ್ಣು ತಪ್ಪಿಸಿ ಶಾಸಕ ದದ್ದಲ್ ಎಸ್​ಐಟಿ ಮುಂದೆ ಹಾಜರಾಗಿದ್ದು, ನನ್ನನ್ನ ಅರೆಸ್ಟ್ ಮಾಡಿ ಎಂದು ಮನವಿ ಮಾಡಿದ್ದಾರೆ. ಎಸ್​ಐಟಿ ಅಧಿಕಾರಿ ಡಿವೈಎಸ್​ಪಿ ಶ್ರಿನಿವಾಸ್ ಮುಂದೆ ನನ್ನನ್ನ ಅರೆಸ್ಟ ಮಾಡುವಂತೆ ಕೇಳಿದ್ದಾರೆ. ಎಸ್​ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಬಳಿಕ ಎಸ್​ಐಟಿ ಮುಂದೆ ಬಂದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 pm, Fri, 12 July 24

ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE