AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇಂದು ಸಹ ವಿಚಾರಣೆಗೆ ಹಾಜರಾಗಿದ್ದರು.

ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್
ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್​
ಜಗದೀಶ ಬಿ.
| Edited By: |

Updated on:Jul 12, 2024 | 8:42 PM

Share

ಬೆಂಗಳೂರು, ಜುಲೈ 12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation Scam) ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ (Basanagouda Daddal) ಎಸ್ಐಟಿ ಮತ್ತೆ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದೆ. ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಮೇಲೆ ಎಸ್​ಐಟಿ ಮುಂದೆ ಬಂದಿದ್ದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದರು.

ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ಮಾಡಲಾಗಿತ್ತು. ಇಂದು ಇಡಿಯಿಂದ ಅರೆಸ್ಟ್ ಭಯದಲ್ಲೇ ಎಸ್​​ಐಟಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ನಾಲ್ಕು ಗಂಟೆಗೂ ಹೆಚ್ಚು ವಿಚಾರಣೆ ಮಾಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ರಾಜ್ಯ, ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಶೀತಲ ಸಮರ

ಬೆಂಗಳೂರಿನ ಎಸ್​​ಐಟಿ ಕಚೇರಿ ಬಳಿ ಶಾಸಕ ದದ್ದಲ್​ ಪ್ರತಿಕ್ರಿಯಿಸಿದ್ದು, ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ಕೆಲ ದಾಖಲೆ ಪರಿಶೀಲಿಸಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಕೂಡ ಕೇಳಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ. ಎಸ್​​​ಐಟಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದ್ದಾರೆ.

ಇಡಿ ಕಣ್ಣು ತಪ್ಪಿಸಿ ಎಸ್​ಐಟಿ ಮುಂದೆ ಹಾಜರ: ನನ್ನನ್ನ ಅರೆಸ್ಟ್ ಮಾಡಿ ಎಂದ ಶಾಸಕ ದದ್ದಲ್

ಇಡಿ ಕಣ್ಣು ತಪ್ಪಿಸಿ ಶಾಸಕ ದದ್ದಲ್ ಎಸ್​ಐಟಿ ಮುಂದೆ ಹಾಜರಾಗಿದ್ದು, ನನ್ನನ್ನ ಅರೆಸ್ಟ್ ಮಾಡಿ ಎಂದು ಮನವಿ ಮಾಡಿದ್ದಾರೆ. ಎಸ್​ಐಟಿ ಅಧಿಕಾರಿ ಡಿವೈಎಸ್​ಪಿ ಶ್ರಿನಿವಾಸ್ ಮುಂದೆ ನನ್ನನ್ನ ಅರೆಸ್ಟ ಮಾಡುವಂತೆ ಕೇಳಿದ್ದಾರೆ. ಎಸ್​ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಬಳಿಕ ಎಸ್​ಐಟಿ ಮುಂದೆ ಬಂದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 pm, Fri, 12 July 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ