AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅಜ್ಞಾನ ಸ್ಥಳಕ್ಕೆ ತರಳಿರುವ ಬಗ್ಗೆ ವರದಿಯಾಗಿದೆ. ಹಗರಣ ಸಂಬಂಧ ಶುಕ್ರವಾರ ಎಸ್​ಐಟಿ ವಿಚಾರಣೆಗೆ ಹಾಜರಾಗಿದ್ದ ಅವರು, ಇಡಿಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಡ್ರಾಮಾ ಮಾಡಿದ್ದರು. ತಮ್ಮನ್ನು ಬಂಧಿಸುವಂತೆ ಎಸ್​ಐಟಿಗೆ ದುಂಬಾಲು ಬಿದ್ದಿದ್ದರು.

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ
ಬಸನಗೌಡ‌ ದದ್ದಲ್Image Credit source: Facebook
Shivaprasad B
| Edited By: |

Updated on:Jul 13, 2024 | 12:16 PM

Share

ಬೆಂಗಳೂರು, ಜುಲೈ 13: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಶುಕ್ರವಾರ ವಿಚಾರಣೆ ಸಂಬಂಧ ಎಸ್​​ಐಟಿ ಮುಂದೆ ಹಾಜರಾಗಿದ್ದ ದದ್ದಲ್ ನಂತರ ಬೆಂಗಳೂರಿನ ನಿವಾಸಕ್ಕೆ ಬಂದೇ ಇಲ್ಲ. ಕುಟುಂಬಸ್ಥರ ಸಮೇತ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಯಲಹಂಕದ ಕೋಗಿಲು ಬಳಿ ಇರುವ ಬಸನಗೌಡ ದದ್ದಲ್ ವಿಲ್ಲಾದಲ್ಲಿ ಸದ್ಯ ಇಬ್ಬರು ಮನೆ ಕೆಲಸದವರು ಮಾತ್ರ ಇದ್ದಾರೆ.

ದದ್ದಲ್ ಕುಟುಂಬ ಸಮೇತ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮನೆ ಕೆಲಸದವರು ಮಾಹಿತಿ ನೀಡಿದ್ದಾರೆ. ಯಾವಾಗ ವಾಪಸ್ ಬರುತ್ತಾರೆ ಎಂದು ತಿಳಿಸಿಲ್ಲ ಎಂದು ಅವರು ಹೇಳಿದ್ದಾರೆ.

ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗುವ ಭೀತಿ ಎದುರಿಸುತ್ತಿರುವ ದದ್ದಲ್, ತಮ್ಮನ್ನು ಬಂಧಿಸುವಂತೆ ವಿಶೇಷ ತನಿಖಾ ತಂಡದ ಬಳಿ ಶುಕ್ರವಾರ ಮನವಿ ಮಾಡಿದ್ದರು. ಈ ಮೂಲಕ ಇಡಿ ಬಂಧನದಿಂದ ತಪ್ಪಿಸಿಕೊಳ್ಳಬಹುದೆಂಬುದು ಅವರ ಲೆಕ್ಕಾಚಾರವಾಗಿತ್ತು. ಆದರೆ ಎಸ್ಐಟಿ ಅವರನ್ನು ಬಂಧಿಸಿಲ್ಲ. ಇದಾದ ನಂತರ ಅವರು ಅಜ್ಞಾತ ತಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ

ಪ್ರಕರಣ ಸಂಬಂಧ ಶುಕ್ರವಾರ ಬೆಳಗ್ಗೆಯಿಂದಲೂ ಇಡಿ ಅಧಿಕಾರಿಗಳು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ನಾಗೇಂದ್ರರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿದ್ದರು. ಆದರೆ ರಾತ್ರಿ ವೇಳೆಗೆ ಒಂದು ಹಂತದ ವಿಚಾರಣೆ ಪೂರ್ಣಗೊಳಿಸಿದ್ದ ಇಡಿ ಅಧಿಕಾರಿಗಳು, ರಾತ್ರಿ ನಾಗೇಂದ್ರರನ್ನು ಬಂಧಿಸಿದ್ದಾರೆ. ರಾತ್ರಿಯೇ ಶಿವಾಜಿನಗರ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ದದ್ದಲ್​ಗೆ ಇಡಿ ಬಂಧನ ಭೀತಿ ಹೆಚ್ಚಾಗಿದೆ.

4.31 ಎಕರೆ ಜಮೀನು ಖರೀದಿ ಕಂಟಕ?

ವಾಲ್ಮೀಕಿ ನಿಗಮದ ಹಗರಣದ ಮಧ್ಯೆಯೇ ಶಾಸಕ ಬಸನಗೌಡ ದದ್ದಲ್ 4 ಎಕರೆ 31 ಗುಂಟೆ ಜಮೀನು ಖರೀದಿಸಿದ್ದಾರೆಂಬ ಆರೋಪವಿದೆ. ಇಡಿ ದಾಳಿ ಬಳಿಕ ಭೂಮಿ ಖರೀದಿ ವಿಚಾರ ಬಯಲಾಗಿದ್ದು, ಪುತ್ರ ತ್ರಿಶೂಲ್ ಕುಮಾರ್ ನಾಯಕ್ ಹೆಸರಿನಲ್ಲಿ ರಾಯಚೂರು ಜಿಲ್ಲೆಯ ಗುಣದಿನ್ನಿ ಗ್ರಾಮದಲ್ಲಿ ದದ್ದಲ್ ತಂದೆ ಸಿದ್ದನಗೌಡರಿಂದ ಭೂಮಿ ಖರೀದಿಸಲಾಗಿದೆಯಂತೆ. ಇದೇ ಭೂಮಿಯನ್ನ ಜೂನ್27ರಂದು ಮ್ಯೂಟೇಶನ್ ಮಾಡಿಸಿಕೊಳ್ಳಲಾಗಿದೆ. ದದ್ದಲ್​ ಭೂಮಿ ಖರೀದಿ ಕುರಿತ ಪ್ರತಿ ಟಿವಿ9ಗೆ ಲಭ್ಯವಾಗಿದ್ದು, ಈ ಪ್ರತಿಯಲ್ಲಿ 23ಲಕ್ಷದ 88 ಲಕ್ಷ ರೂಪಾಯಿ ನೀಡಿ ಭೂಮಿ ಖರೀದಿಸಿರೋದು ಉಲ್ಲೇಖವಾಗಿದೆ. ಗಣದಿನ್ನಿ ಗ್ರಾಮದ ಸರ್ವೆ ನಂಬರ್ 33/1ರಲ್ಲಾದ ಭೂಮಿ ಖರೀದಿಗೆ, ರಾಯಚೂರಿನ ಖಾಸಗಿ ಬ್ಯಾಂಕ್​ನ ಚೆಕ್ ಮೂಲಕ ಹಣ ಸಂದಾಯವಾಗಿದೆ. ಖಾಸಗಿ ಅಡಚಣೆ ಹಾಗೂ ಮನೆ ಖರ್ಚಿಗಾಗಿ ಹಣದ ಅಗತ್ಯ ಹಿನ್ನೆಲೆ ಜಮೀನು ಮಾರಾಟ ಮಾಡಿದ್ದಾಗಿ ಖರೀದಿ ಪತ್ರದಲ್ಲಿ ಮಾಲೀಕ ಉಲ್ಲೇಖಿಸಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:05 pm, Sat, 13 July 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ