AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ, ಹಗರಣದಲ್ಲಿ ಅವರು ಶಾಮೀಲಾಗಿರುವುದಕ್ಕೆ ಸಂಬಂಧಿಸಿ ತನಿಖಾ ಸಂಸ್ಥೆಗಳಿಗೆ ಅನೇಕ ಸಾಕ್ಷ್ಯಗಳು ದೊರೆತಿರುವುದು ತಿಳಿದುಬಂದಿದೆ. ಅವುಗಳು ಯಾವುವೆಲ್ಲ ಎಂಬ ಮಾಹಿತಿ ಇಲ್ಲಿದೆ.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ
ನಾಗೇಂದ್ರ
Ganapathi Sharma
|

Updated on: Jul 12, 2024 | 10:30 AM

Share

ಬೆಂಗಳೂರು, ಜುಲೈ 12: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಶಾಸಕ‌ ಬಿ ನಾಗೇಂದ್ರ ವಿರುದ್ದ ತನಿಖಾ ಸಂಸ್ಥೆಗಳಿಗೆ ಅನೇಕ‌ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ತಿಳಿದುಬಂದಿದೆ. ಹಗರಣದ ತನಿಖೆ ನಡೆಸುತ್ತಿರುವ ಎಸ್​ಐಟಿ, ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಗೇಂದ್ರ ವಿರುದ್ಧ ಸಾಕಷ್ಟು ಸಾಕ್ಷ್ಯ ಕಲೆ ಹಾಕಿದ್ದಾರೆ. ಈ ಪೈಕಿ ಅನೇಕ ಸಂಗತಿಗಳು ಹಗರಣದಲ್ಲಿ ನಾಗೇಂದ್ರ ಪಾತ್ರ ಇದೆ ಎಂಬುದನ್ನು ಪುಷ್ಟೀಕರಿಸಿವೆ.

ಈ ಸಾಕ್ಷ್ಯಗಳ ಆಧಾರದಲ್ಲೇ ಇ.ಡಿ ಮೂರು ಬಾರಿ ನಾಗೇಂದ್ರಗೆ ವಿಚಾರಣೆಗೆ ಬುಲಾವ್ ನೀಡಿತ್ತು ಮತ್ತು ಈಗ ವಶಕ್ಕೆ ಪಡೆಡುಕೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಸಭೆಯೇ ನಾಗೇಂದ್ರ ವಿರುದ್ಧದ ಮೊದಲ ಹಾಗೂ ಪ್ರಮುಖ ಸಾಕ್ಷಿ ಎನ್ನಲಾಗಿದೆ.

ನಾಗೇಂದ್ರ ವಿರುದ್ಧದ ಸಾಕ್ಷ್ಯಗಳು

  • ಆರೋಪಿ ಪದ್ಮನಾಭ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಅಕೌಂಟ್ ಓಪನ್ ಎಂಬ ಹೇಳಿಕೆ.
  • ಶಾಂಗ್ರಿಲಾ ಹೋಟೆಲ್ ಮೀಟಿಂಗ್ ಗೆ ನಾಗೇಂದ್ರ ಬಂದು ಹೋಗಿರೋ ಸಿಸಿಟಿವಿ ದೃಶ್ಯಾವಳಿಗಳು.
  • ಹೋಟೆಲ್​​ನಲ್ಲಿ‌ ನಡೆದ ಮಹಜರು ಪ್ರಕ್ರಿಯೆಯಿಂದ ಅನೇಕ ಸಾಕ್ಷಿ ಲಭ್ಯ.
  • ನಾಗೇಂದ್ರ ಪಿಎ ದೇವೆಂದ್ರಪ್ಪ, ಆಪ್ತ ನೆಕ್ಕುಂಟಿ ನಾಗರಾಜ್, ಸಂಬಂಧಿ ನಾಗೇಶ್ವರ್ ರಾವ್ ಈ ಸಭೆಯಲ್ಲಿ ಭಾಗಿಯಾಗಿದ್ದು.
  • ಈ ಆರೋಪಿಗಳು ಕೂಡ ತನಿಖೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಗರಣದಲ್ಲಿ ಭಾಗಿ ಎಂಬ ಹೇಳಿಕೆಗಳು
  • ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್​​ನಲ್ಲಿ “ಸಚಿವ” ಎಂಬುದು ಉಲ್ಲೇಖವಾಗಿರೋದು.
  • ಪದ್ಮನಾಭ್ ಅವರು ನಾಗೇಂದ್ರ ಆಪ್ತ ಹರೀಶ್ ಗೆ 25 ಲಕ್ಷ ರೂ. ನೀಡಿರೋದು.
  • ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
  • ಬಂಧಿತ ಇತರೆ ಆರೋಪಿಗಳ ಹೇಳಿಕೆಗಳು.
  • ಇ.ಡಿಯ 40 ಗಂಟೆಗಳ ಮೆಗಾ ದಾಳಿ. ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆ ಸಿಕ್ಕಿರೋದು.
  • ಇ.ಡಿಯಿಂದ ನಾಗೇಂದ್ರ ಆಪ್ತ ಕಾರ್ಯದರ್ಶಿ ದೇವೆಂದ್ರಪ್ಪ ಹಾಗೂ ಪಿಎ ಹರೀಶ್ ವಿಚಾರಣೆ ಹೇಳಿಕೆಗಳು.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ

ಈ ಮಧ್ಯೆ, ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

(ವರದಿ: ಪ್ರದೀಪ್ ‘ಟಿವಿ9’)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!