AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ, ಹಗರಣದಲ್ಲಿ ಅವರು ಶಾಮೀಲಾಗಿರುವುದಕ್ಕೆ ಸಂಬಂಧಿಸಿ ತನಿಖಾ ಸಂಸ್ಥೆಗಳಿಗೆ ಅನೇಕ ಸಾಕ್ಷ್ಯಗಳು ದೊರೆತಿರುವುದು ತಿಳಿದುಬಂದಿದೆ. ಅವುಗಳು ಯಾವುವೆಲ್ಲ ಎಂಬ ಮಾಹಿತಿ ಇಲ್ಲಿದೆ.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ
ನಾಗೇಂದ್ರ
ಗಣಪತಿ ಶರ್ಮಾ
|

Updated on: Jul 12, 2024 | 10:30 AM

Share

ಬೆಂಗಳೂರು, ಜುಲೈ 12: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಶಾಸಕ‌ ಬಿ ನಾಗೇಂದ್ರ ವಿರುದ್ದ ತನಿಖಾ ಸಂಸ್ಥೆಗಳಿಗೆ ಅನೇಕ‌ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ತಿಳಿದುಬಂದಿದೆ. ಹಗರಣದ ತನಿಖೆ ನಡೆಸುತ್ತಿರುವ ಎಸ್​ಐಟಿ, ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಗೇಂದ್ರ ವಿರುದ್ಧ ಸಾಕಷ್ಟು ಸಾಕ್ಷ್ಯ ಕಲೆ ಹಾಕಿದ್ದಾರೆ. ಈ ಪೈಕಿ ಅನೇಕ ಸಂಗತಿಗಳು ಹಗರಣದಲ್ಲಿ ನಾಗೇಂದ್ರ ಪಾತ್ರ ಇದೆ ಎಂಬುದನ್ನು ಪುಷ್ಟೀಕರಿಸಿವೆ.

ಈ ಸಾಕ್ಷ್ಯಗಳ ಆಧಾರದಲ್ಲೇ ಇ.ಡಿ ಮೂರು ಬಾರಿ ನಾಗೇಂದ್ರಗೆ ವಿಚಾರಣೆಗೆ ಬುಲಾವ್ ನೀಡಿತ್ತು ಮತ್ತು ಈಗ ವಶಕ್ಕೆ ಪಡೆಡುಕೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಸಭೆಯೇ ನಾಗೇಂದ್ರ ವಿರುದ್ಧದ ಮೊದಲ ಹಾಗೂ ಪ್ರಮುಖ ಸಾಕ್ಷಿ ಎನ್ನಲಾಗಿದೆ.

ನಾಗೇಂದ್ರ ವಿರುದ್ಧದ ಸಾಕ್ಷ್ಯಗಳು

  • ಆರೋಪಿ ಪದ್ಮನಾಭ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಅಕೌಂಟ್ ಓಪನ್ ಎಂಬ ಹೇಳಿಕೆ.
  • ಶಾಂಗ್ರಿಲಾ ಹೋಟೆಲ್ ಮೀಟಿಂಗ್ ಗೆ ನಾಗೇಂದ್ರ ಬಂದು ಹೋಗಿರೋ ಸಿಸಿಟಿವಿ ದೃಶ್ಯಾವಳಿಗಳು.
  • ಹೋಟೆಲ್​​ನಲ್ಲಿ‌ ನಡೆದ ಮಹಜರು ಪ್ರಕ್ರಿಯೆಯಿಂದ ಅನೇಕ ಸಾಕ್ಷಿ ಲಭ್ಯ.
  • ನಾಗೇಂದ್ರ ಪಿಎ ದೇವೆಂದ್ರಪ್ಪ, ಆಪ್ತ ನೆಕ್ಕುಂಟಿ ನಾಗರಾಜ್, ಸಂಬಂಧಿ ನಾಗೇಶ್ವರ್ ರಾವ್ ಈ ಸಭೆಯಲ್ಲಿ ಭಾಗಿಯಾಗಿದ್ದು.
  • ಈ ಆರೋಪಿಗಳು ಕೂಡ ತನಿಖೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಗರಣದಲ್ಲಿ ಭಾಗಿ ಎಂಬ ಹೇಳಿಕೆಗಳು
  • ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್​​ನಲ್ಲಿ “ಸಚಿವ” ಎಂಬುದು ಉಲ್ಲೇಖವಾಗಿರೋದು.
  • ಪದ್ಮನಾಭ್ ಅವರು ನಾಗೇಂದ್ರ ಆಪ್ತ ಹರೀಶ್ ಗೆ 25 ಲಕ್ಷ ರೂ. ನೀಡಿರೋದು.
  • ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
  • ಬಂಧಿತ ಇತರೆ ಆರೋಪಿಗಳ ಹೇಳಿಕೆಗಳು.
  • ಇ.ಡಿಯ 40 ಗಂಟೆಗಳ ಮೆಗಾ ದಾಳಿ. ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆ ಸಿಕ್ಕಿರೋದು.
  • ಇ.ಡಿಯಿಂದ ನಾಗೇಂದ್ರ ಆಪ್ತ ಕಾರ್ಯದರ್ಶಿ ದೇವೆಂದ್ರಪ್ಪ ಹಾಗೂ ಪಿಎ ಹರೀಶ್ ವಿಚಾರಣೆ ಹೇಳಿಕೆಗಳು.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ

ಈ ಮಧ್ಯೆ, ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

(ವರದಿ: ಪ್ರದೀಪ್ ‘ಟಿವಿ9’)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ