AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ, ಹಗರಣದಲ್ಲಿ ಅವರು ಶಾಮೀಲಾಗಿರುವುದಕ್ಕೆ ಸಂಬಂಧಿಸಿ ತನಿಖಾ ಸಂಸ್ಥೆಗಳಿಗೆ ಅನೇಕ ಸಾಕ್ಷ್ಯಗಳು ದೊರೆತಿರುವುದು ತಿಳಿದುಬಂದಿದೆ. ಅವುಗಳು ಯಾವುವೆಲ್ಲ ಎಂಬ ಮಾಹಿತಿ ಇಲ್ಲಿದೆ.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ
ನಾಗೇಂದ್ರ
ಗಣಪತಿ ಶರ್ಮಾ
|

Updated on: Jul 12, 2024 | 10:30 AM

Share

ಬೆಂಗಳೂರು, ಜುಲೈ 12: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಶಾಸಕ‌ ಬಿ ನಾಗೇಂದ್ರ ವಿರುದ್ದ ತನಿಖಾ ಸಂಸ್ಥೆಗಳಿಗೆ ಅನೇಕ‌ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ತಿಳಿದುಬಂದಿದೆ. ಹಗರಣದ ತನಿಖೆ ನಡೆಸುತ್ತಿರುವ ಎಸ್​ಐಟಿ, ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಗೇಂದ್ರ ವಿರುದ್ಧ ಸಾಕಷ್ಟು ಸಾಕ್ಷ್ಯ ಕಲೆ ಹಾಕಿದ್ದಾರೆ. ಈ ಪೈಕಿ ಅನೇಕ ಸಂಗತಿಗಳು ಹಗರಣದಲ್ಲಿ ನಾಗೇಂದ್ರ ಪಾತ್ರ ಇದೆ ಎಂಬುದನ್ನು ಪುಷ್ಟೀಕರಿಸಿವೆ.

ಈ ಸಾಕ್ಷ್ಯಗಳ ಆಧಾರದಲ್ಲೇ ಇ.ಡಿ ಮೂರು ಬಾರಿ ನಾಗೇಂದ್ರಗೆ ವಿಚಾರಣೆಗೆ ಬುಲಾವ್ ನೀಡಿತ್ತು ಮತ್ತು ಈಗ ವಶಕ್ಕೆ ಪಡೆಡುಕೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಸಭೆಯೇ ನಾಗೇಂದ್ರ ವಿರುದ್ಧದ ಮೊದಲ ಹಾಗೂ ಪ್ರಮುಖ ಸಾಕ್ಷಿ ಎನ್ನಲಾಗಿದೆ.

ನಾಗೇಂದ್ರ ವಿರುದ್ಧದ ಸಾಕ್ಷ್ಯಗಳು

  • ಆರೋಪಿ ಪದ್ಮನಾಭ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಅಕೌಂಟ್ ಓಪನ್ ಎಂಬ ಹೇಳಿಕೆ.
  • ಶಾಂಗ್ರಿಲಾ ಹೋಟೆಲ್ ಮೀಟಿಂಗ್ ಗೆ ನಾಗೇಂದ್ರ ಬಂದು ಹೋಗಿರೋ ಸಿಸಿಟಿವಿ ದೃಶ್ಯಾವಳಿಗಳು.
  • ಹೋಟೆಲ್​​ನಲ್ಲಿ‌ ನಡೆದ ಮಹಜರು ಪ್ರಕ್ರಿಯೆಯಿಂದ ಅನೇಕ ಸಾಕ್ಷಿ ಲಭ್ಯ.
  • ನಾಗೇಂದ್ರ ಪಿಎ ದೇವೆಂದ್ರಪ್ಪ, ಆಪ್ತ ನೆಕ್ಕುಂಟಿ ನಾಗರಾಜ್, ಸಂಬಂಧಿ ನಾಗೇಶ್ವರ್ ರಾವ್ ಈ ಸಭೆಯಲ್ಲಿ ಭಾಗಿಯಾಗಿದ್ದು.
  • ಈ ಆರೋಪಿಗಳು ಕೂಡ ತನಿಖೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಗರಣದಲ್ಲಿ ಭಾಗಿ ಎಂಬ ಹೇಳಿಕೆಗಳು
  • ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್​​ನಲ್ಲಿ “ಸಚಿವ” ಎಂಬುದು ಉಲ್ಲೇಖವಾಗಿರೋದು.
  • ಪದ್ಮನಾಭ್ ಅವರು ನಾಗೇಂದ್ರ ಆಪ್ತ ಹರೀಶ್ ಗೆ 25 ಲಕ್ಷ ರೂ. ನೀಡಿರೋದು.
  • ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
  • ಬಂಧಿತ ಇತರೆ ಆರೋಪಿಗಳ ಹೇಳಿಕೆಗಳು.
  • ಇ.ಡಿಯ 40 ಗಂಟೆಗಳ ಮೆಗಾ ದಾಳಿ. ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆ ಸಿಕ್ಕಿರೋದು.
  • ಇ.ಡಿಯಿಂದ ನಾಗೇಂದ್ರ ಆಪ್ತ ಕಾರ್ಯದರ್ಶಿ ದೇವೆಂದ್ರಪ್ಪ ಹಾಗೂ ಪಿಎ ಹರೀಶ್ ವಿಚಾರಣೆ ಹೇಳಿಕೆಗಳು.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ

ಈ ಮಧ್ಯೆ, ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

(ವರದಿ: ಪ್ರದೀಪ್ ‘ಟಿವಿ9’)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!