AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ, ಹಗರಣದಲ್ಲಿ ಅವರು ಶಾಮೀಲಾಗಿರುವುದಕ್ಕೆ ಸಂಬಂಧಿಸಿ ತನಿಖಾ ಸಂಸ್ಥೆಗಳಿಗೆ ಅನೇಕ ಸಾಕ್ಷ್ಯಗಳು ದೊರೆತಿರುವುದು ತಿಳಿದುಬಂದಿದೆ. ಅವುಗಳು ಯಾವುವೆಲ್ಲ ಎಂಬ ಮಾಹಿತಿ ಇಲ್ಲಿದೆ.

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ
ನಾಗೇಂದ್ರ
ಗಣಪತಿ ಶರ್ಮಾ
|

Updated on: Jul 12, 2024 | 10:30 AM

Share

ಬೆಂಗಳೂರು, ಜುಲೈ 12: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಶಾಸಕ‌ ಬಿ ನಾಗೇಂದ್ರ ವಿರುದ್ದ ತನಿಖಾ ಸಂಸ್ಥೆಗಳಿಗೆ ಅನೇಕ‌ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ತಿಳಿದುಬಂದಿದೆ. ಹಗರಣದ ತನಿಖೆ ನಡೆಸುತ್ತಿರುವ ಎಸ್​ಐಟಿ, ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಾಗೇಂದ್ರ ವಿರುದ್ಧ ಸಾಕಷ್ಟು ಸಾಕ್ಷ್ಯ ಕಲೆ ಹಾಕಿದ್ದಾರೆ. ಈ ಪೈಕಿ ಅನೇಕ ಸಂಗತಿಗಳು ಹಗರಣದಲ್ಲಿ ನಾಗೇಂದ್ರ ಪಾತ್ರ ಇದೆ ಎಂಬುದನ್ನು ಪುಷ್ಟೀಕರಿಸಿವೆ.

ಈ ಸಾಕ್ಷ್ಯಗಳ ಆಧಾರದಲ್ಲೇ ಇ.ಡಿ ಮೂರು ಬಾರಿ ನಾಗೇಂದ್ರಗೆ ವಿಚಾರಣೆಗೆ ಬುಲಾವ್ ನೀಡಿತ್ತು ಮತ್ತು ಈಗ ವಶಕ್ಕೆ ಪಡೆಡುಕೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಸಭೆಯೇ ನಾಗೇಂದ್ರ ವಿರುದ್ಧದ ಮೊದಲ ಹಾಗೂ ಪ್ರಮುಖ ಸಾಕ್ಷಿ ಎನ್ನಲಾಗಿದೆ.

ನಾಗೇಂದ್ರ ವಿರುದ್ಧದ ಸಾಕ್ಷ್ಯಗಳು

  • ಆರೋಪಿ ಪದ್ಮನಾಭ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಅಕೌಂಟ್ ಓಪನ್ ಎಂಬ ಹೇಳಿಕೆ.
  • ಶಾಂಗ್ರಿಲಾ ಹೋಟೆಲ್ ಮೀಟಿಂಗ್ ಗೆ ನಾಗೇಂದ್ರ ಬಂದು ಹೋಗಿರೋ ಸಿಸಿಟಿವಿ ದೃಶ್ಯಾವಳಿಗಳು.
  • ಹೋಟೆಲ್​​ನಲ್ಲಿ‌ ನಡೆದ ಮಹಜರು ಪ್ರಕ್ರಿಯೆಯಿಂದ ಅನೇಕ ಸಾಕ್ಷಿ ಲಭ್ಯ.
  • ನಾಗೇಂದ್ರ ಪಿಎ ದೇವೆಂದ್ರಪ್ಪ, ಆಪ್ತ ನೆಕ್ಕುಂಟಿ ನಾಗರಾಜ್, ಸಂಬಂಧಿ ನಾಗೇಶ್ವರ್ ರಾವ್ ಈ ಸಭೆಯಲ್ಲಿ ಭಾಗಿಯಾಗಿದ್ದು.
  • ಈ ಆರೋಪಿಗಳು ಕೂಡ ತನಿಖೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಗರಣದಲ್ಲಿ ಭಾಗಿ ಎಂಬ ಹೇಳಿಕೆಗಳು
  • ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್​​ನಲ್ಲಿ “ಸಚಿವ” ಎಂಬುದು ಉಲ್ಲೇಖವಾಗಿರೋದು.
  • ಪದ್ಮನಾಭ್ ಅವರು ನಾಗೇಂದ್ರ ಆಪ್ತ ಹರೀಶ್ ಗೆ 25 ಲಕ್ಷ ರೂ. ನೀಡಿರೋದು.
  • ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
  • ಬಂಧಿತ ಇತರೆ ಆರೋಪಿಗಳ ಹೇಳಿಕೆಗಳು.
  • ಇ.ಡಿಯ 40 ಗಂಟೆಗಳ ಮೆಗಾ ದಾಳಿ. ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆ ಸಿಕ್ಕಿರೋದು.
  • ಇ.ಡಿಯಿಂದ ನಾಗೇಂದ್ರ ಆಪ್ತ ಕಾರ್ಯದರ್ಶಿ ದೇವೆಂದ್ರಪ್ಪ ಹಾಗೂ ಪಿಎ ಹರೀಶ್ ವಿಚಾರಣೆ ಹೇಳಿಕೆಗಳು.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ

ಈ ಮಧ್ಯೆ, ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

(ವರದಿ: ಪ್ರದೀಪ್ ‘ಟಿವಿ9’)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್