AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣ ಕಾಂಗ್ರೆಸ್​ ಸರ್ಕಾರದ ಮೊದಲ ಹಗರಣವಾಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಚಿವರು, ಶಾಸಕರ ಬುಡಕ್ಕೆ ಬಂದಿದೆ. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದು, ಇದೀಗ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಿದೆ.

ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ
ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ
Ramesha M
| Edited By: |

Updated on: Oct 09, 2024 | 7:00 PM

Share

ಬೆಂಗಳೂರು, ಅಕ್ಟೋಬರ್​ 09: ವಾಲ್ಮೀಕಿ ನಿಗಮದಲ್ಲಿನ ಹಗರಣ (Valmiki Corporation Scam) ಇಡೀ ಕರ್ನಾಟಕದಲ್ಲೇ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ ಇದೀಗ ವರದಿ ಸಲ್ಲಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದ್ದು, ಇಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್​ ಪರಿಜ್ಞಾನಕ್ಕೆ ಪಡೆದುಕೊಂಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇಡಿ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಮಾಡಿತ್ತು. ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರರೇ ಆಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿತ್ತು.

ಇದನ್ನೂ ಓದಿ: ವಾಲ್ಮಿಕಿ ನಿಗಮ ಹಗರಣ: ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ

ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಆರೋಪ ಹೊರಿಸಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿತ್ತು. ಚಾರ್ಜ್​ಶೀಟ್​ನಲ್ಲಿ ಬಿ.ನಾಗೇಂದ್ರನೇ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು. ಚಾರ್ಜ್​ಶೀಟ್​ನಲ್ಲಿ ವಾಲ್ಮೀಕಿ ನಿಗಮ ಹಗರಣದ ಸಂಪೂರ್ಣ ಮಾಹಿತಿ ಉಲ್ಲೇಖ ಮಾಡಲಾಗಿತ್ತು. ಸತ್ಯನಾರಾಯಣ ವರ್ಮಾ ಜತೆ ನಿಕಟ ಸಂಪರ್ಕ, ಹಣದ ಬಗ್ಗೆಯೂ ಉಲ್ಲೇಖಿಸಿಲಾಗಿತ್ತು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ಇಡಿ

ನಾಗೇಂದ್ರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ, 187 ಕೋಟಿ ರೂ. ವಾಲ್ಮೀಕಿ ಅವ್ಯವಹಾರದ ಪೈಕಿ 97.32 ಕೋಟಿ ರೂ. ವರ್ಗಾವಣೆ ಆಗಿತ್ತು. ನಿಗಮಕ್ಕೆ ಸೇರಿದ್ದ 12 ಕೋಟಿ ರೂ. ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದನ್ನು ಬಯಲಾಗಿತ್ತು. ಇನ್ನು ಬೆಂಗಳೂರು, ಬಳ್ಳಾರಿಯಲ್ಲಿ ಹಣ ಹಂಚಿಕೆ ಬಗ್ಗೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಮಾಡಲಾಗಿತ್ತು. ಬಿ.ನಾಗೇಂದ್ರ ಸೇರಿ ಐವರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಕೆ ಮಾಡಲಾಗಿತ್ತು.

ರಾಜ್ಯ ಸರ್ಕಾರ ರಚಿಸಿರುವ ಎಸ್​ಐಟಿ ಅಧಿಕಾರಿಗಳು ಕೂಡ ಪ್ರತ್ಯೇಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ ಇಡಿ ಮತ್ತು ಎಸ್​ಐಟಿ ಎರಡು ತಂಡಗಳ ಆರೋಪಪಟ್ಟಿಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್