AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣ ಕಾಂಗ್ರೆಸ್​ ಸರ್ಕಾರದ ಮೊದಲ ಹಗರಣವಾಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಚಿವರು, ಶಾಸಕರ ಬುಡಕ್ಕೆ ಬಂದಿದೆ. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದು, ಇದೀಗ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಿದೆ.

ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ
ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ
Ramesha M
| Edited By: |

Updated on: Oct 09, 2024 | 7:00 PM

Share

ಬೆಂಗಳೂರು, ಅಕ್ಟೋಬರ್​ 09: ವಾಲ್ಮೀಕಿ ನಿಗಮದಲ್ಲಿನ ಹಗರಣ (Valmiki Corporation Scam) ಇಡೀ ಕರ್ನಾಟಕದಲ್ಲೇ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ ಇದೀಗ ವರದಿ ಸಲ್ಲಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದ್ದು, ಇಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್​ ಪರಿಜ್ಞಾನಕ್ಕೆ ಪಡೆದುಕೊಂಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇಡಿ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಮಾಡಿತ್ತು. ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರರೇ ಆಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿತ್ತು.

ಇದನ್ನೂ ಓದಿ: ವಾಲ್ಮಿಕಿ ನಿಗಮ ಹಗರಣ: ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ

ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಆರೋಪ ಹೊರಿಸಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿತ್ತು. ಚಾರ್ಜ್​ಶೀಟ್​ನಲ್ಲಿ ಬಿ.ನಾಗೇಂದ್ರನೇ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು. ಚಾರ್ಜ್​ಶೀಟ್​ನಲ್ಲಿ ವಾಲ್ಮೀಕಿ ನಿಗಮ ಹಗರಣದ ಸಂಪೂರ್ಣ ಮಾಹಿತಿ ಉಲ್ಲೇಖ ಮಾಡಲಾಗಿತ್ತು. ಸತ್ಯನಾರಾಯಣ ವರ್ಮಾ ಜತೆ ನಿಕಟ ಸಂಪರ್ಕ, ಹಣದ ಬಗ್ಗೆಯೂ ಉಲ್ಲೇಖಿಸಿಲಾಗಿತ್ತು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ಇಡಿ

ನಾಗೇಂದ್ರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ, 187 ಕೋಟಿ ರೂ. ವಾಲ್ಮೀಕಿ ಅವ್ಯವಹಾರದ ಪೈಕಿ 97.32 ಕೋಟಿ ರೂ. ವರ್ಗಾವಣೆ ಆಗಿತ್ತು. ನಿಗಮಕ್ಕೆ ಸೇರಿದ್ದ 12 ಕೋಟಿ ರೂ. ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದನ್ನು ಬಯಲಾಗಿತ್ತು. ಇನ್ನು ಬೆಂಗಳೂರು, ಬಳ್ಳಾರಿಯಲ್ಲಿ ಹಣ ಹಂಚಿಕೆ ಬಗ್ಗೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಮಾಡಲಾಗಿತ್ತು. ಬಿ.ನಾಗೇಂದ್ರ ಸೇರಿ ಐವರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಕೆ ಮಾಡಲಾಗಿತ್ತು.

ರಾಜ್ಯ ಸರ್ಕಾರ ರಚಿಸಿರುವ ಎಸ್​ಐಟಿ ಅಧಿಕಾರಿಗಳು ಕೂಡ ಪ್ರತ್ಯೇಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ ಇಡಿ ಮತ್ತು ಎಸ್​ಐಟಿ ಎರಡು ತಂಡಗಳ ಆರೋಪಪಟ್ಟಿಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!