AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮದ ಸೆಕ್ಷನ್ 35ಎ ಅಡಿಯಲ್ಲಿ ಸಿಬಿಐ ತನಿಖೆಗೆ ಅವಕಾಶವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಾಲ್ಮೀಕಿ ಹಗರಣ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿಬಿಐಗೆ ತನಿಖೆ ವಹಿಸಲು ಹೈಕೋರ್ಟ್ ನಕಾರ
Ramesha M
| Edited By: |

Updated on:Nov 13, 2024 | 3:56 PM

Share

ಬೆಂಗಳೂರು, ನವೆಂಬರ್​ 13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ವಜಾಗೊಳಿಸಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಬ್ಯಾಂಕಿಂಗ್​ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್​ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್​ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ವಾಲ್ಮೀಕಿ ಹಗರಣದಲ್ಲಿ ಬಂಧನವಾಗಿದ್ದ ಶಾಸಕ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ?

ಹಗರಣದ ತನಿಖೆ ಹೊಣೆ ಸಿಬಿಐಗೆ ವರ್ಗಾಯಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಂತರ ಹೈಕೋರ್ಟ್ ಸೆಪ್ಟೆಂಬರ್ 30 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಯೂನಿಯನ್​ ಬ್ಯಾಂಕ್​ ಅರ್ಜಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಧಿಕಾರ ರಾಜ್ಯ ಪೊಲೀಸರಿಗೆ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ. ವಿ. ಆಚಾರ್ಯ, ಬ್ಯಾಂಕ್ ಸಲ್ಲಿಸಿರುವ ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆ ಎತ್ತಿದ್ದಾರೆ. ತನಿಖೆಯ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ತನಿಖೆ ಕಳಂಕಿತವೆಂದು ಯೂನಿಯನ್ ಬ್ಯಾಂಕ್ ಹೇಳಿಲ್ಲ. ಕೇವಲ ಬ್ಯಾಂಕ್ ನಿಯಂತ್ರಣ ಅಧಿನಿಯಮ ಸೆಕ್ಷನ್​ 35ಎ ಉಲ್ಲೇಖಿಸಲಾಗಿದೆ. ತನಿಖೆಯ ವ್ಯಾಪ್ತಿ ಬಗ್ಗೆ ಸುಪ್ರೀಂಕೋರ್ಟ್ ಮಾತ್ರ ತೀರ್ಮಾನಿಸಬೇಕು. ಹೀಗಾಗಿ ಅರ್ಜಿ ವಿಚಾರಣೆಗೆ ಯೋಗ್ಯವಲ್ಲವೆಂದು ವಾದಿಸಿದರು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ಇನ್ನು ಈ ಪ್ರಕರಣ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವಿನ ವಿವಾದವಾಗಿದ್ದು, ಈ ವಿಷಯದ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್‌ಗೆ ಮಾತ್ರ ಅಧಿಕಾರವಿದೆ ಹೊರತು ಹೈಕೋರ್ಟ್‌ಗೆ ಅಲ್ಲ ಎಂದು ಹೇಳಿದ್ದಾರೆ. ವಾಲ್ಮೀಕಿ ನಿಗಮದ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Wed, 13 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್