ವಾಲ್ಮೀಕಿ ನಿಗಮ ಹಗರಣ: ಯೂನಿಯನ್ ಬ್ಯಾಂಕ್​ನ ಆರು ಹಿರಿಯ ಅಧಿಕಾರಿಗಳು ಅವ್ಯವಹಾರದಲ್ಲಿ ಭಾಗಿ?

ಇತ್ತೀಚೆಗೆ ಯೂನಿಯನ್ ಬ್ಯಾಂಕ್‌ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ 187 ಕೋಟಿ ರೂ. ಕನ್ನ ಹಾಕಿದ ಖದೀಮರಿಗೆ ಬೆವರಿಳಿಸಿದ್ದರು. ಕೇಸ್‌ನ ಮಾಹಿತಿ ಪಡೆದಿದ್ದರು. ಒಟ್ಟು ಆರು ಜನ ಯೂನಿಯನ್​ ಬ್ಯಾಂಕ್​ನ ಆಡಳಿತ ಮಂಡಳಿಯವರು ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆನ್ನಲಾಗುತ್ತಿದ್ದು, ಆರೋಪಿ ಪಟ್ಟಿಯಲ್ಲಿದ್ದಾರೆ. ಆರಕ್ಕೆ ಆರು ಸಿಬ್ಬಂದಿಗಳು ಈವರೆಗೂ ನಾಪತ್ತೆ ಆಗಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಯೂನಿಯನ್ ಬ್ಯಾಂಕ್​ನ ಆರು ಹಿರಿಯ ಅಧಿಕಾರಿಗಳು ಅವ್ಯವಹಾರದಲ್ಲಿ ಭಾಗಿ?
ವಾಲ್ಮೀಕಿ ನಿಗಮ ಹಗರಣ: ಯೂನಿಯನ್ ಬ್ಯಾಂಕ್​ನ ಆರು ಹಿರಿಯ ಅಧಿಕಾರಿಗಳು ಅವ್ಯವಹಾರದಲ್ಲಿ ಭಾಗಿ?
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 10, 2024 | 6:51 PM

ಬೆಂಗಳೂರು, ಜುಲೈ 10: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ  (Valmiki Scheduled Tribes Development Corporation) ನಡೆದಿರುವ 187 ಕೋಟಿ ರೂ. ಹಗರಣ, ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮಾಜಿ ಸಚಿವ ಬಿ. ನಾಗೇಂದ್ರ ತಲೆದಂಡವಾಗಿದೆ. ಇಂದು ಅವರ ಪಿಎ ಹರೀಶ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಯೂನಿಯನ್ ಬ್ಯಾಂಕ್​ನ (Union Bank) ಕೆಲ ಹಿರಿಯ ಅಧಿಕಾರಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಒಟ್ಟು ಆರು ಜನ ಯೂನಿಯನ್ ಬ್ಯಾಂಕ್​ನ ಆಡಳಿತ ಮಂಡಳಿಯವರು ಆರೋಪಿ ಪಟ್ಟಿಯಲ್ಲಿದ್ದು, ಈವರೆಗೆ ಎಲ್ಲರೂ ನಾಪತ್ತೆ ಆಗಿದ್ದಾರೆ ಎನ್ನಲಾಗುತ್ತಿದೆ.

ಆರೋಪಿ ಪಟ್ಟಿಯಲ್ಲಿರುವವರು ಯಾರೆಲ್ಲ?

  • ಮನಮೆಕಲೈ: ಎಂ ಡಿ, ಸಿಇಓ
  • ನಿತೇಶ್ ರಂಜನ್: ನಿರ್ದೇಶಕ
  • ರಾಮಸುಬ್ರಮಣ್ಯ: ನಿರ್ದೇಶಕ
  • ಸಂಜಯ್ ರುದ್ರ: ನಿರ್ದೇಶಕ
  • ಪಂಕಜ್ ದ್ವಿವೇದಿ: ನಿರ್ದೇಶಕ
  • ಸುಚಿ ಸ್ಮಿತಾ: ಮ್ಯಾನೇಜರ್

ಜೊತೆಗೆ ಡೆಪ್ಯೂಟಿ ಬ್ರಾಂಚ್ ಮುಖ್ಯಸ್ಥ ದೀಪ ಹಾಗೂ ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ ಎಂಬುವವರ ಹೆಸರೂ ಕೂಡ ಸಿಬಿಐ ಎಫ್ಐಆರ್​ನಲ್ಲಿ ಉಲ್ಲೇಖವಾಗಿದೆ. ಸುಚಿಸ್ಮಿತಾ ಹೆಸರು ಸಹ ಸಿಬಿಐ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಕೋಟಿ ಕೋಟಿ ಹಣ ಕ್ಯಾಶ್ ರೂಪಕ್ಕೆ ಬಂದಿದ್ದು ಹೇಗೆ ಗೊತ್ತಾ?

ವಾಲ್ಮೀಕಿ ನಿಗಮಕ್ಕೆ ಸರ್ಕಾರದಿಂದ ವರ್ಗಾವಣೆಗೊಂಡ ಕೋಟಿ ಕೋಟಿ ಹಣವನ್ನು ಹೇಗೆ ಅದನ್ನು ಸ್ವಂತಕ್ಕೆ ಬಳಿಸಿಕೊಂಡಿದ್ದಾರೆ ಎನ್ನುವುದನ್ನ ನೋಡುವುದಾದರೆ, ನೆಟ್ ಬ್ಯಾಂಕಿಂಗ್, ಆರ್​ಟಿಜಿಎಸ್, ಗೂಗಲ್ ಪೇ, ಪೋನ್ ಪೇ ಮುಖಾಂತರ ಹಣವನ್ನು ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

ಹೀಗೆ ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದಿಂದ ಬಂದಿದ್ದ ಹಣವನ್ನು ಕಡಲೆಪುರಿಯಂತೆ ಹಂಚಿ ಕ್ಯಾಶ್ ರೂಪಕ್ಕೆ ತರಲಾಗಿತ್ತು. ಬರೋಬ್ಬರಿ 94 ಕೋಟಿ 74 ಲಕ್ಷ ರೂ. ಅನ್ನು ಹಂಚಿಕೆ ಮಾಡಿ ಕ್ಯಾಶ್ ಮಾಡಿಕೊಂಡಿದ್ದಾರೆ. ಹೀಗೆ ಹಣವನ್ನ ಕಳಿಸಿದವರಿಗೆಲ್ಲ ಪುನಃ ಕ್ಯಾಶ್ ಪಡೆಯುವಾಗ ಇಂತಿಷ್ಟು ಕಮೀಷನ್ ನೀಡಿಲಾಗಿದೆ. ಈ ಬಗ್ಗೆ A9 ಸತ್ಯನಾರಾಯಣ ಇಟಕಾರಿ ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್! ಎಸ್​ಐಟಿ ತನಿಖೆಯಲ್ಲಿ ಬಯಲು

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಸಾವಿನ ಬೆನ್ನಲ್ಲೇ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಹಗರಣ ಬಟಾಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್‌ನ ವಿವಿಧ ಖಾತೆಗಳಿಗೆ 88.62 ಕೋಟಿ ರೂ. ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ