AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​, ಚಿನ್ನದಂಗಡಿಯ ಖಾತೆಗಳಿಗೆ ವರ್ಗವಾಗಿತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ

Valmiki corporation scam: ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಮಹತ್ವದ ಪ್ರಗತಿ ಕಂಡಿರುವ ಎಸ್​ಐಟಿ, ಅಕ್ರಮ ಹಣ ವರ್ಗಾವಣೆಯಾಗಿದ್ದ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮಾನನ್ನು ಹೈದರಾಬಾದ್​ನಲ್ಲಿ ಬಂಧಿಸಿತ್ತು. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಮಹತ್ವ ವಿಚಾರ ಬೆಳಕಿಗೆ ಬಂದಿದೆ.

ಬಾರ್​, ಚಿನ್ನದಂಗಡಿಯ ಖಾತೆಗಳಿಗೆ ವರ್ಗವಾಗಿತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ
ವಾಲ್ಮೀಕಿ ಅಭಿವೃದ್ಧಿ ನಿಗಮ
ವಿವೇಕ ಬಿರಾದಾರ
|

Updated on:Jun 14, 2024 | 10:47 AM

Share

ಬೆಂಗಳೂರು, ಜೂನ್​ 14: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) 94.73 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ನಕಲಿ ಖಾತೆಗಳಿಗೆ (Fake Account) ವರ್ಗಾವಣೆಯಾಗಿದ್ದ ಮೊತ್ತವನ್ನು ಮದ್ಯದಂಗಡಿಗಳು (Bar), ಚಿನ್ನಾಭರಣ ಮಾರಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ವಿಶೇಷ ತನಿಖಾ ತಂಡ (SIT) ತನಿಖೆಯಲ್ಲಿ ಬಯಲಾಗಿದೆ.

ಪ್ರಕರಣ ಸಂಬಂಧ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಬಂಧಿಸಿ ಬುಧವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಈ ವಿಚಾರ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹಿಂತಿರುಗಿಸುವಂತೆ ತೆಲಂಗಾಣ ಸಿಎಂಗೆ ಜೆಡಿಎಸ್​ ಪತ್ರ

ಈ ಆರೋಪಿಗಳು ತೆರೆದಿದ್ದ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ನಿಗಮದ ಹಣವನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಸತ್ಯನಾರಾಯಣ ವರ್ಮಾ ಸಂಬಂಧಿಕರ ಮನೆಯಲ್ಲಿ 8.21 ಕೋಟಿ ರೂ. ಪತ್ತೆಯಾಗಿದೆ. ಹಣವನ್ನು 4 ಸೂಟ್ ಕೇಸ್‌ಗಳಲ್ಲಿ ತುಂಬಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಆರೋಪಿಯ ಸಂಬಂಧಿಕರ ಮನೆಗಳಿಗೆ ತೆರಳಿ ಹಣವನ್ನು ಜಪ್ತಿ ಮಾಡಿದ್ದಾರೆ. ಅಂತೆಯೆ ವಂಚಕ ಸತ್ಯನಾರಾಯಣ ವರ್ಮಾ ಓಡಾಡುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನೂ ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪ್ರಕರಣದಲ್ಲಿ ಈವರೆಗೆ ಎಸ್​​ಐಟಿ ಅಧಿಕಾರಿಗಳು 94.73 ಕೋಟಿ ಹಣದಲ್ಲಿ ಸುಮಾರು 11.83 ಕೋಟಿ ರೂ, ನಗದು ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Fri, 14 June 24

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​