AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ ಹಣ ಗುಳಂ ಆರೋಪ, ಬ್ಯಾಂಕ್​ ಎಂಡಿ ಸೇರಿ ಹಲವರ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬರೋಬ್ಬರಿ 187.33 ಕೋಟಿ ರೂ. ಹಣ ಹಗರಣದಿಂದ ಬೇಸತ್ತು ಸೂಪರಿಂಡೆಂಟ್ ಚಂದ್ರಶೇಖರ್​ ಎಂಬುವವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಮಧ್ಯೆ ನಿಗಮದ ಅಕೌಂಟ್​ಗೆ ಹಣ ವರ್ಗಾವಣೆ ಹಿನ್ನೆಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಸೇರಿ ಹಲವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ ಹಣ ಗುಳಂ ಆರೋಪ, ಬ್ಯಾಂಕ್​ ಎಂಡಿ ಸೇರಿ ಹಲವರ ವಿರುದ್ಧ ಎಫ್​ಐಆರ್
ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ ಹಣ ಗುಳಂ ಆರೋಪ, ಬ್ಯಾಂಕ್​ ಎಂಡಿ ಸೇರಿ ಹಲವರ ವಿರುದ್ಧ ಎಫ್​ಐಆರ್
Shivaprasad B
| Edited By: |

Updated on: May 29, 2024 | 4:13 PM

Share

ಬೆಂಗಳೂರು, ಮೇ 29: ಶಿವಮೊಗ್ಗದಲ್ಲಿ (Shivamogga) ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧಿಕಾರಿ ಆತ್ಮಹತ್ಯೆ ಘಟನೆ ಈಗ ದೊಡ್ಡ ಸದ್ದು ಮಾಡುತ್ತಿದೆ. ಇತ್ತ ಪತಿ ಕಳೆದುಕೊಂಡ ಕುಟುಂಬಸ್ಥರು ತಮಗೆ ಅನ್ಯಾಯವಾಗಿದೆ, ನ್ಯಾಯಬೇಕೆಂದು ಕಣ್ಣೀರು ಹಾಕುತ್ತಿದ್ದಾರೆ. ಇದೆಲ್ಲದರ ಮಧ್ಯೆ ನಿಮಗದ ಕೋಟ್ಯಾಂತರ ರೂ. ಹಣ ಗುಳಂ ಮಾಡಿರುವ ಆರೋಪ ಕೇಳಿಬಂದಿದೆ. ಬರೋಬ್ಬರಿ 187.33 ಕೋಟಿ ರೂ. ಹಣ ನಿಗಮದ ಅಕೌಂಟ್​ಗೆ ವರ್ಗಾವಣೆ ಹಿನ್ನೆಲೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಸೇರಿದಂತೆ ಹಲವರ ವಿರುದ್ಧ ನಗರದ ಹೈಗ್ರೌಂಡ್ಸ್​​​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲಾಗಿದೆ.

ವಾಲ್ಮೀಕಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್​ ಎಂಬುವವರು ನೀಡಿದ ದೂರು ಆಧರಿಸಿ  ಯೂನಿಯನ್ ಬ್ಯಾಂಕ್​ನ ಎಂಡಿ ಹಾಗೂ ಸಿಇಒ ಮನಿಮೇಖಲೈ, ಕಾರ್ಯನಿರ್ವಾಹಕ ನಿರ್ದೇಶಕ ನಿತೇಶ್ ರಂಜನ್, ರಾಮಸುಬ್ರಹ್ಮಣ್ಯಂ, ಸಂಜಯ್ ರುದ್ರ, ಪಂಕಜ್ ದ್ವಿವೇದಿ, ಶುಚಿತಾ ಸೇರಿದಂತೆ ಬ್ಯಾಂಕ್ ಆಡಳಿತ ಮಂಡಳಿಯವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್​ನೋಟ್​ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ

ನಿಗಮ ಹೆಸರಲ್ಲಿ ವಸಂತನಗರದಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಖಾತೆ ಇತ್ತು. ಫೆ.19ರಂದು ಖಾತೆಯನ್ನು ಎಂ.ಜಿ.ರೋಡ್ ಬ್ರ್ಯಾಂಚ್​​ಗೆ ವರ್ಗಾವಣೆ ಮಾಡಲಾಗಿದೆ. ಫೆ.26ರಂದು ನಿಗಮದ ಎಂಡಿ, ಲೆಕ್ಕಾಧಿಕಾರಿಗಳು ಸಹಿ ಪಡೆದುಕೊಂಡಿದ್ದಾರೆ. ಬಳಿಕ ಸದರಿ ಖಾತೆಯಿಂದ ಮಾ.4ರಂದು 25 ಕೋಟಿ ರೂ.,  ಮಾ.6ರಂದು 25 ಕೋಟಿ ರೂ., ಮಾ.21ರಂದು 44 ಕೋಟಿ ರೂ., ಮೇ 21ರಂದು 50 ಕೋಟಿ ರೂ., ಮೇ 22ರಂದು 33 ಕೋಟಿ ರೂ. ಎಂಬಂತೆ ನಿಗಮದ ಬ್ಯಾಂಕ್​ ಖಾತೆಯಿಂದ ಒಟ್ಟು 187.33 ಕೋಟಿ ರೂ. ಹಣ ವರ್ಗಾವಣೆ ಆಗಿದೆ.

ನಿಗಮದ ಅಕೌಂಟ್​​ನಿಂದ ಬೇರೆ ಬೇರೆ ಅಕೌಂಟ್​​ಗೆ ಹಾಗೂ ಸ್ಟೇಟ್ ಹುಜುರ್ ಟ್ರೇಜರಿ ಖಾಜನೆ -02 ಯಿಂದ ನಿಗಮದ ಖಾತೆಗೆ ಹಣ ಸಂದಾಯವಾಗಿದೆ. ಈ ಮಧ್ಯೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸದರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ನಿಗಮದಿಂದ ಯಾವುದೇ ಪತ್ರ ವ್ಯವಹಾರ ನಡೆಸಿಲ್ಲ. ಆದರೂ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂ. ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಡೆತ್​ನೋಟ್​ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ; ಮೂವರು ಅಧಿಕಾರಿಗಳ ಮೇಲೆ ಎಫ್​ಐಆರ್​

ಬ್ಯಾಂಕ್ ಆಡಳಿತ ಮಂಡಳಿ ಬೇಜವಾಬ್ದಾರಿಯಿಂದ ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಅಕ್ರಮದಲ್ಲಿ ಕೆಲವು ಸರ್ಕಾರಿ ಅಧಿಕಾರಿಗಳು ಸೇರಿದಂತೆ ರಾಜಕೀಯ ಪ್ರಭಾವಿಗಳು ಭಾಗಿಯಾಗಿರುವ ಆರೋಪ ಕೂಡ ಇದೆ. ಸದ್ಯ ಎಫ್ಐಆರ್ ದಾಖಲಿಸಿಕೊಂಡು ಹೈಗ್ರೌಂಡ್ಸ್​​ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್