AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಎಸ್​​ಐಟಿಯಿಂದ ಈವರೆಗೆ 85 ಕೋಟಿ ಮೌಲ್ಯದಷ್ಟು ಮುಟ್ಟುಗೋಲು

ವಾಲ್ಮೀಕಿ ನಿಗಮದಲ್ಲಾದ ಬಹುಕೋಟಿ ಹಗರಣ ವಿಧಾನಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷಗಳು ಈ ಬಗ್ಗೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಎಸ್​ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದು, ಇದೀಗ 85 ಕೋಟಿ ರೂ. ಮೌಲ್ಯದಷ್ಟು ಎಸ್​​ಐಟಿ ಅಧಿಕಾರಿಗಳು ಮುಟ್ಟುಗೋಲು ಹಾಕಿದೆ.

ವಾಲ್ಮೀಕಿ ನಿಗಮ ಹಗರಣ: ಎಸ್​​ಐಟಿಯಿಂದ ಈವರೆಗೆ 85 ಕೋಟಿ ಮೌಲ್ಯದಷ್ಟು ಮುಟ್ಟುಗೋಲು
ವಾಲ್ಮೀಕಿ ನಿಗಮ ಹಗರಣ: ಎಸ್​​ಐಟಿಯಿಂದ ಈವರೆಗೆ 85 ಕೋಟಿ ಮೌಲ್ಯದಷ್ಟು ಮುಟ್ಟುಗೋಲು
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 19, 2024 | 6:28 PM

Share

ಬೆಂಗಳೂರು, ಜುಲೈ 19: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣದಲ್ಲಿ (Valmiki Development Corporation Scam) ಎಸ್​​ಐಟಿಯಿಂದ (SIT) ಈವರೆಗೆ 85 ಕೋಟಿ ರೂ. ಮೌಲ್ಯದಷ್ಟು ಮುಟ್ಟುಗೋಲು ಹಾಕಲಾಗಿದೆ. ನಗದು, ಬ್ಯಾಂಕ್​ನ ಹಣ ಸೇರಿದಂತೆ 2 ಕಾರುಗಳನ್ನು ಎಸ್​​ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೇರೆ ಬೇರೆ ಅಕೌಂಟ್​ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.

18 ಅಕೌಂಟ್​ಗಳಿಗೆ 89 ಕೋಟಿ ರೂ. ಹಣ ವರ್ಗಾವಣೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ 30 ಲಕ್ಷ ರೂ. ಹಣವಿತ್ತು. ಅದರಲ್ಲಿ 18 ಅಕೌಂಟ್​ಗಳಿಗೆ 89 ಕೋಟಿ ರೂ. ಹಣ ವರ್ಗಾವಣೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಕಲಾಪ ಸೋಮವಾರಕ್ಕೆ ಮುಂದೂಡಿಕೆಯಾದ್ದರಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈವರೆಗೂ 13 ಕೋಟಿ ರೂ. ಸಹ ಸೀಜ್ ಮಾಡಲಾಗಿದೆ. ರತ್ನಾಕರ ಬ್ಯಾಂಕ್ ನಿಂದ 5 ಕೋಟಿ ರೂ. ಹಣ ವಾಪಾಸ್ ಬಂದಿದೆ. ಒಟ್ಟು 85 ಕೋಟಿಗೂ ಅಧಿಕ ಹಣ ವಿವಿಧ ಹಂತದ ರಿಕವರಿಯಲ್ಲಿದೆ ಅಂತಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದೆ: ಆದ್ರೆ ಇದು ಸರ್ಕಾರಕ್ಕೆ ಸಂಬಂಧವಿಲ್ಲ ಎಂದ ಸಿಎಂ

ಬಿಜೆಪಿ-ಜೆಡಿಎಸ್​ನಿಂದ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಪ್ರಸ್ತಾಪ ಮಾಡಿದ್ದು, ನಿಯಮ 69ರಡಿ ಚರ್ಚೆಗೆ ಸ್ಪೀಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ಆ ಬಗ್ಗೆ ವಿಪಕ್ಷದವರು ಸದನದಲ್ಲಿ ಚರ್ಚಿಸಿದ್ದಾರೆ. ಮೂರು ದಿನಗಳ ಅಕ್ರಮ ಪ್ರಕರಣದ ಸದನದಲ್ಲಿ ಚರ್ಚೆ ಮಾಡಿದರು. ಯಾವುದೇ ವಿಚಾರ ಪ್ರಸ್ತಾಪ ಮಾಡಿದರೂ ಉತ್ತರ ಕೊಡುವ ಹಕ್ಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ 89 ಕೋಟಿ 65 ಲಕ್ಷ ರೂ ಅವ್ಯವಹಾರ ಆಗಿದೆ ಅಂತಾ ಇಡಿ ಇತ್ತೀಚೆಗೆ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ, ನಾಲ್ಕು ರಾಜ್ಯಗಳ 23 ಕಡೆ ದಾಳಿ ಮಾಡಿತ್ತು. 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು ನಂತ್ರ ಆ ನಕಲಿ ಖಾತೆಗಳಿಂದ ನಗದು ವಿತ್ ಡ್ರಾ ಮಾಡಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ 21 ಹಗರಣ ಪಟ್ಟಿ ಬಿಚ್ಚಿಟ್ಟ ಸಿದ್ದರಾಮಯ್ಯ: ಯಾವುವು? ಇಲ್ಲಿದೆ ನೋಡಿ

ಇದಕ್ಕೆ ಸಂಬಂಧ ಪಟ್ಟಂತೆ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಮನೆಯಲ್ಲಿ ದಾಖಲೆ ಪತ್ತೆಯಾಗಿದೆ ಅಂತಾ ಇಡಿ ಉಲ್ಲೇಖಿಸಿತ್ತು. ಜೊತೆಗೆ, ವಾಲ್ಮೀಕಿ ನಿಗಮದ ಹಣವನ್ನ ಚುನಾವಣೆಗೆ ಬಳಸಲಾಗಿದೆ ಎಂಬ ಸ್ಫೋಟಕ ಮಾಹಿತಿಯೂ ಬಹಿರಂಗವಾಗಿತ್ತು. ಅದರಲ್ಲೂ ಚುನಾವಣೆಯಲ್ಲಿ ಮದ್ಯ ಖರೀದಿ ಮಾಡಲು ಈ ಹಣ ಬಳಕೆ ಮಾಡಲಾಗಿತ್ತು. ಐಷಾರಾಮಿ ಕಾರುಗಳು, ಲ್ಯಾಂಬೋರ್ಗೀನಿ ಕಾರು ಖರೀದಿಗೆ ಹಣ ಬಳಸಿದ್ದಾರೆ ಅಂತಾ ಇಡಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ