ವಾಲ್ಮೀಕಿ ನಿಗಮ ಹಗರಣ: ಈವರೆಗೆ ಬಂಧನಕ್ಕೊಳಗಾದವರು ಯಾರೆಲ್ಲ? ವಿವರ ಇಲ್ಲಿದೆ ನೋಡಿ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ಎಸ್​​ಐಟಿ ಈವರೆಗೆ ಒಟ್ಟು 11 ಜನರನ್ನು ಬಂಧಿಸಿದೆ. 6 ಮಂದಿ ತಲೆಮರೆಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯ ಒಬ್ಬರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದೆ. ಬಂಧಿತರ ಹಾಗೂ ತಲೆಮರೆಸಿಕೊಂಡವರ ವಿವರ ಇಲ್ಲಿದೆ.

ವಾಲ್ಮೀಕಿ ನಿಗಮ ಹಗರಣ: ಈವರೆಗೆ ಬಂಧನಕ್ಕೊಳಗಾದವರು ಯಾರೆಲ್ಲ? ವಿವರ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
Edited By:

Updated on: Jul 11, 2024 | 9:59 AM

ಬೆಂಗಳೂರು, ಜುಲೈ 11: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಕರ್ನಾಟಕದ ಹಲವೆಡೆ ದಾಳಿ ನಡೆಸಿ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ತಡರಾತ್ರಿ ವರೆಗೂ ಶೋಧಕಾರ್ಯ ನಡೆಸಿದ್ದರು. ನಾಗೇಂದ್ರ ಪಿಎ ಹರೀಶ್‌ನನ್ನು ವಶಕ್ಕೆ ಪಡೆದು ನಂತರ ರಾತ್ರಿ ಬಿಡುಗಡೆ ಮಾಡಿದ್ದರು.

ಬಂಧನಕ್ಕೊಳಗಾವರ ವಿವರ

  1. ಸತ್ಯನಾರಾಯಣ, ಎಫ್​ಎಫ್​ಸಿಸಿಎಲ್ ಅಧ್ಯಕ್ಷ
  2. ಸತ್ಯನಾರಾಯಣ ವರ್ಮಾ
  3. ಚಂದ್ರಮೋಹನ್
  4. ಶ್ರೀನಿವಾಸ್
  5. ಜಗದೀಶ್, ಮಧ್ಯವರ್ತಿಗಳು
  6. ಜೆಜೆ ಪದ್ಮನಾಭ್‌ – ವಾಲ್ಮೀಕಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ)
  7. ಪರಶುರಾಮ ದುರುಗಣ್ಣವರ, ನಿಗಮದ ಹಿಂದಿನ ಲೆಕ್ಕಾಧಿಕಾರಿ
  8. ನೆಕ್ಕಂಟಿ ನಾಗರಾಜ್‌, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ
  9. ನಾಗೇಶ್ವರ ರಾವ್‌, ಮಾಜಿ ಸಚಿವ ನಾಗೇಂದ್ರ ಸಂಬಂಧಿ
  10. ಸಾಯಿ ತೇಜ, ಸತ್ಯನಾರಾಯಣ ವರ್ಮಾ ಸಹಚರ
  11. ತೇಜ ತಮ್ಮಯ್ಯ

35 ಕೋಟಿ ರೂ. ಜಪ್ತಿ

ಎಸ್ಐಟಿ ಇದುವರೆಗೂ ಒಟ್ಟು 35 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣ ಜಪ್ತಿ ಮಾಡಿದೆ.

ಯೂನಿಯನ್ ಬ್ಯಾಂಕ್ ಕೆಲ ಹಿರಿಯ ಅಧಿಕಾರಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಎಸ್​ಐಟಿ ತನಿಖೆ ವೇಳೆ ಸಿದ್ಧವಾಗಿದ್ದ ಆರೋಪಿ ಸ್ಥಾನದಲ್ಲಿರುವ ಬ್ಯಾಂಕ್ ಸಿಬ್ಬಂದಿಗಳ ಪಟ್ಟಿ ಇಲ್ಲಿದೆ. ಇವರೆಲ್ಲ ಸದ್ಯ ತಲೆಮರೆಸಿಕೊಂಡಿದ್ದಾರೆ.

  • ಮನಮೆಕಲೈ, ಎಂಡಿ, ಸಿಇಓ, ಯೂನಿಯನ್ ಬ್ಯಾಂಕ್ ಅಪ್ ಇಂಡಿಯಾ.
  • ನಿತೇಶ್ ರಂಜನ್, ನಿರ್ದೇಶಕ ಯೂನಿಯನ್ ಬ್ಯಾಂಕ್ ಅಪ್ ಇಂಡಿಯಾ.
  • ರಾಮಸುಬ್ರಮಣ್ಯ ನಿರ್ದೇಶಕ, ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ.
  • ಸಂಜಯ್ ರುದ್ರ, ನಿರ್ದೇಶಕ, ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ.
  • ಪಂಕಜ್ ದ್ವಿವೇದಿ, ನಿರ್ದೇಶಕ ಯೂನಿಯನ್ ಬ್ಯಾಂಕ್ ಅಪ್ ಇಂಡಿಯಾ.
  • ಸುಚಿ ಸ್ಮಿತಾ, ಮ್ಯಾನೇಜರ್ ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್

ಈನ ಆರು ಮಂದಿ ಅಷ್ಟೇ ಅಲ್ಲದೆ, ಡೆಪ್ಯೂಟಿ ಬ್ರಾಂಚ್ ಹೆಡ್ ದೀಪಾ ಹಾಗೂ ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ ಎಂಬುವವರ ಹೆಸರೂ ಕೂಡ ಸಿಬಿಐ ಎಫ್ಐಆರ್​​ನಲ್ಲಿ ಉಲ್ಲೇಖವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us