AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

Ramesh Jarkiholi CD Controversy: ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ರಮೇಶ್​ ಜಾರಕಿಹೊಳಿ
Skanda
| Edited By: |

Updated on:Mar 04, 2021 | 4:11 PM

Share

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Valmiki Prasannananda Swamiji letter

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಂಬಲಿಗರು ಮಾನಸಿಕ ಹಿಂಸೆ ನೀಡ್ತಿದ್ದಾರೆ, ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗ್ತೀನಿ: ದಿನೇಶ್ ಕಲ್ಲಹಳ್ಳಿ

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

Published On - 3:40 pm, Thu, 4 March 21

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು