AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ: ಅಧಿಕಾರಿಗೆ ಒತ್ತಡ ಹೇರಿರುವ ಆರೋಪ, ಇಬ್ಬರು ಇಡಿ ಆಫೀಸರ್​ ವಿರುದ್ಧ ಎಫ್​ಐಆರ್​

ಸಿಎಂ ಸಿದ್ದರಾಮಯ್ಯ, ನಾಗೇಂದ್ರ ಹೆಸರು ಹೇಳುವಂತೆ ಒತ್ತಡ ಆರೋಪ ಕೇಳಿಬಂದಿದ್ದು, ಇಡಿ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ಜಂಟಿ ನಿರ್ದೇಶಕ ಕಲ್ಲೇಶ್​ ಎಂಬುವವರು ದೂರು ಆಧರಿಸಿ ಇದೀಗ ಎಫ್​ಐಆರ್ ಹಾಕಲಾಗಿದೆ.

ವಾಲ್ಮೀಕಿ ಹಗರಣ: ಅಧಿಕಾರಿಗೆ ಒತ್ತಡ ಹೇರಿರುವ ಆರೋಪ, ಇಬ್ಬರು ಇಡಿ ಆಫೀಸರ್​ ವಿರುದ್ಧ ಎಫ್​ಐಆರ್​
ವಾಲ್ಮೀಕಿ ಹಗರಣ: ಅಧಿಕಾರಿಗೆ ಒತ್ತಡ ಹೇರಿರುವ ಆರೋಪ, ಇಬ್ಬರು ಇಡಿ ಆಫೀಸರ್​ ವಿರುದ್ಧ ಎಫ್​ಐಆರ್​
Jagadisha B
| Edited By: |

Updated on: Jul 22, 2024 | 8:45 PM

Share

ಬೆಂಗಳೂರು, ಜುಲೈ 22: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ ಜಾರಿ ನಿರ್ದೇನಾಲಯ ಇಬ್ಬರು ಅಧಿಕಾರಿಗಳಾದ ಮಿತ್ತಲ್ ಹಾಗೂ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್​​ಐಆರ್ (FIR)​ ದಾಖಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ಜಂಟಿ ನಿರ್ದೇಶಕ ಕಲ್ಲೇಶ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶೇಷಾದ್ರಿಪುರಂ ಠಾಣೆಯಲ್ಲಿ ಎನ್​​ಸಿಆರ್​ (NCR) ದಾಖಲಾಗಿದ್ದು, ವಿಲ್ಸನ್ ಗಾರ್ಡನ್ ಠಾಣೆಗೆ ವರ್ಗಾವಣೆ ಬಳಿಕ FIR ದಾಖಲಾಗಿದೆ.

ಯಾವುದೇ ತಪ್ಪು ಮಾಡದಿದ್ದರೂ ಕಾನೂನು ಬಾಹಿರವಾಗಿ ಇಡಿ ಅಧಿಕಾರಿ ವಿಚಾರಣೆ ಮಾಡಿದ್ದಾರೆ. ಬೈದು, ನನ್ನ ಮೇಲೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ

ಎಂ.ಜಿ ರೋಡ್ ಖಾತೆಗೆ ಹಣವನ್ನು ಸಿಎಂ ಸಿದ್ದರಾಮಯ್ಯ, ನಾಗೇಂದ್ರ ಮತ್ತು ಎಫ್​​ಡಿ ನಿರ್ದೇಶನದಂತೆ ಮಾಡಿರುತ್ತೇನೆಂದು ಹೇಳುವಂತೆ ಒತ್ತಡ ಇತ್ತೆಂದು ಬರೆದು ಕೊಡುವಂತೆ ಸೂಚಿಸಿದ್ದು, ಸಿಎಂ, ನಾಗೇಂದ್ರ ಸೂಚನೆ ಇತ್ತೆಂದು ಒಪ್ಪಿಕೊ. ಒಪ್ಪಿಕೊಳ್ಳದಿದ್ರೆ ಬಂಧಿಸ್ತೇವೆಂದು ಭಯ ಹುಟ್ಟಿಸಿದ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ

ಎಂ.ಜಿ.ರೋಡ್ ಬ್ಯಾಂಕ್​ ಖಾತೆಗೆ ಅನುದಾನ ಜಮಾಮಾಡಲು ನಾಗೇಂದ್ರ, ಎಫ್​ಡಿ ಇಲಾಖೆಯಿಂದ ಸೂಚನೆ ಇತ್ತೆಂದು ಒಪ್ಪಿಕೊಂಡ್ರೆ ಮಾತ್ರ ನಿನ್ನ ಬಿಡುತ್ತೇವೆ. ನಂತರ ಮಿತ್ತಲ್ ಎಂಬ ಅಧಿಕಾರಿ ಬಂದು ನನಗೆ ಬೈದಿದ್ದರು. ನೀನೊಬ್ಬ ಅಪರಾಧಿ, ನಿನ್ನನ್ನು ಈಗಲೇ ಅರೆಸ್ಟ್ ಮಾಡುತ್ತೇನೆ. ಇಡಿ ಬಗ್ಗೆ ನಿನಗೆ ಗೊತ್ತಿಲ, 2-3 ವರ್ಷ ನಿನಗೆ ಬೆಲ್ ಸಿಗಲ್ಲ. ನಿನ್ನ ಹೇಳಿಕೆಯನ್ನು ನಾನು ಓದಿದ್ದೇನೆ, ಪ್ರಯೋಜನಕ್ಕೆ ಬರಲ್ಲ. ನಿನಗೆ ಇಡಿ ಸಹಾಯ ಮಾಡಬೇಕೆಂದ್ರೆ ಬರೆದು ಕೊಡಬೇಕು. ಸಿಎಂ, ನಾಗೇಂದ್ರ ನಿರ್ದೇಶನದಂತೆ ಎಂ.ಜಿ.ರೋಡ್ ಖಾತೆಗೆ ಹಣವನ್ನು ವರ್ಗಾಯಿಸಿದ್ದೇನೆ ಎಂದು ಬರೆದುಕೊಡಲು ಒತ್ತಡ ಹೇರಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?