ವಾಲ್ಮೀಕಿ ಹಗರಣ; ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಸಂಬಂಧಿಕರಿಗೆ ಇಡಿ ನೋಟಿಸ್​​

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಇಡಿ ಅಧಿಕಾರಿಗಳು ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್​ನಲ್ಲಿರುವ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಅವರ ಸಂಬಂಧಿಕರಿಗೆ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ನೋಟಿಸ್ ನೀಡಿದ್ದಾರೆ. ನೆಕ್ಕಂಟಿ ನಾಗರಾಜ್​​ ಮಾವ ವೆಂಕಟೇಶ್ವರ ರಾವ್ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ.

ವಾಲ್ಮೀಕಿ ಹಗರಣ; ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಸಂಬಂಧಿಕರಿಗೆ ಇಡಿ ನೋಟಿಸ್​​
ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ
Follow us
| Updated By: ಆಯೇಷಾ ಬಾನು

Updated on:Aug 06, 2024 | 7:39 AM

ಬಳ್ಳಾರಿ, ಆಗಸ್ಟ್.06: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 89.62 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Scam) ಸಂಬಂಧಿಸಿ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಅವರ ಸಂಬಂಧಿಕರಿಗೆ ಇಡಿ (Enforcement Directorate) ನೋಟಿಸ್ ನೀಡಿದೆ. ನೆಕ್ಕಂಟಿ ನಾಗರಾಜ್​​ ಮಾವ ವೆಂಕಟೇಶ್ವರ ರಾವ್​ ಮನೆಗೆ ಇಡಿ ತಂಡ ಭೇಟಿ ನೀಡಿದ್ದು ವೆಂಕಟೇಶ್ವರ ರಾವ್ ಈಗಾಗಲೇ ಎಸ್​ಐಟಿ (SIT) ಕಸ್ಟಡಿಯಲ್ಲಿದ್ದಾರೆ.

2-3 ದಿನಗಳ ಹಿಂದೆ ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್​ಗೆ ಬಂದಿದ್ದ ಇಡಿ ಅಧಿಕಾರಿಗಳು, ನೆಕ್ಕಂಟಿ ನಾಗರಾಜ್​​ ಮಾವ ವೆಂಕಟೇಶ್ವರ ರಾವ್​ ಮನೆಗೆ ಭೇಟಿ ನೀಡಿದ್ದರು. ಸದ್ಯ ಇದೀಗ ಕೃಷ್ಣಾನಗರ ಕ್ಯಾಂಪ್​​ನ ಕೆಲವರಿಗೆ ನೋಟಿಸ್ ನೀಡಿದ್ದಾರೆ. ಹಾಗೂ ಹಣ ವಾಪಾಸ್ ನೀಡುವಂತೆ ತಾಕೀತು ಮಾಡಿದ್ದಾರೆ.

ಇನ್ನು ಕೃಷ್ಣಾನಗರದ ಕ್ಯಾಂಪ್​ನಲ್ಲಿರುವ ಸಂಬಂಧಿಕರಿಗೆ ವೆಂಕಟೇಶ್ವರ ರಾವ್​​ ಹಣ ವರ್ಗಾವಣೆ ಮಾಡಿಸಿದ್ದರು. ಶ್ರೀನಿವಾಸ ಎನ್ನುವವರು ಎಸ್ಐಟಿ ವಿಚಾರಣೆ ಹೋಗಿದ್ದು, ಹಣ ವಾಪಸ್ ನೀಡೋದಾಗಿ ಹೇಳಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಇಡಿ ಅಧಿಕಾರಿಗಳು ಕೃಷ್ಣಾನಗರದ ಕ್ಯಾಂಪ್​ಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ಇಡಿ ಮತ್ತೆ ನೋಟಿಸ್ ನೀಡಿದೆ.

ಇದನ್ನೂ ಓದಿ: ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಾಲ್ಮೀಕಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸೇರಿ 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.

ಅಕ್ರಮವಾಗಿ ನಿಗಮದ ಹಣ ದೋಚಿದ್ದ ಆರೋಪಿಗಳ ವಿರುದ್ಧ ನಕಲಿ ಖಾತೆಗಳಿಗೆ ಹಣ ವರ್ಗಾವಣೆ, ವಂಚನೆ ಕುರಿತು ಸಾಕ್ಷ್ಯಾಧಾರ, ಸಾಕ್ಷಿಗಳ ಹೇಳಿಕೆ ಮೇರೆಗೆ 3072 ಪುಟಗಳ ಆರೋಪ ಪಟ್ಟಿಯನ್ನು 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆರೋಪಿಗಳು ನಿಗಮದ ಖಾತೆಯಿಂದ ದೋಚಿದ್ದ ಹಣದ ಪೈಕಿ ನಗದು, ಚಿನ್ನಾಭರಣ ಸೇರಿ 49.96 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:39 am, Tue, 6 August 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ