ವಾಲ್ಮೀಕಿ ನಿಗಮದ ಹಗರಣಕ್ಕೆ ತಿರುವು: ಮತ್ತೊಬ್ಬ ಸಚಿವರ ಹೆಸರು ತಳುಕು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹು ಕೋಟಿ ರೂ. ಹಗರಣ ಪ್ರಕರಣವನ್ನು ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯಲ್ಲಿ ಸ್ಫೋಟಕ ವಿಚಾರವೊಂದು ಬಯಲಾಗಿದೆ. ಪ್ರಕರಣದ 8ನೇ ಆರೋಪಿ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಈ ವಿಚಾರ ಉಲ್ಲೇಖವಾಗಿದೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ತಿರುವು: ಮತ್ತೊಬ್ಬ ಸಚಿವರ ಹೆಸರು ತಳುಕು
ವಾಲ್ಮೀಕಿ ನಿಗಮ, ಶರಣ ಪ್ರಕಾಶ್​ ಪಾಟೀಲ್​
Follow us
|

Updated on:Jun 08, 2024 | 1:56 PM

ಬೆಂಗಳೂರು, ಜೂನ್​ 08: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) ಬಹು ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸ್ಪೋಟಕ ತಿರುವು ಪಡೆದುಕೊಂಡಿದೆ. ಹಗರಣದಲ್ಲಿ ಸಚಿವ ನಾಗೇಂದ್ರ (Minister Nagendra) ಬೆನ್ನಲ್ಲೇ ಮತ್ತೊಬ್ಬ ಸಚಿವರ ಹೆಸರು ತಳುಕು ಹಾಕಿಕೊಂಡಿದೆ. ಅಕ್ರಮದ ಸಾಕ್ಷ್ಯಗಳ ನಾಶಕ್ಕೆ ಸಚಿವ ಡಾ.ಶರಣಪ್ರಕಾಶ್​ ಪಾಟೀಲ್ (Sharan Prakash Patil)​ ಕಚೇರಿಯಲ್ಲೇ ಸಂಚು ನಡೆದಿತ್ತು ಎಂಬ ಅಂಶ ಪ್ರಕರಣದ ಎಂಟನೇ ಆರೋಪಿಯಾಗಿರುವ ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಮೂರನೇ ಅಪರ ಮುಖ್ಯ ಮೆಟ್ರೋಪಾಲ್ಟೇನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ 8ನೇ ಆರೋಪಿ ಪರ ವಕೀಲರು ಈ ಅಫಿಡವಿಟ್​​ನ್ನು ಸಲ್ಲಿಸಿದರು.

ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಮೇ 24ರಂದು ಸಭೆ ನಡೆದು, ಅಕ್ರಮದ ಸಾಕ್ಷ್ಯಗಳ ನಾಶ ಕುರಿತು ಚರ್ಚೆಯಾಗಿದೆ. ಮಾ.24ರ ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗಿನ ಕಚೇರಿ ಸಿಸಿಟಿವಿ ಫೂಟೇಜ್​ಗಳನ್ನು ವಶಪಡಿಸಿಕೊಂಡು ಸಂರಕ್ಷಿಸಲು ತನಿಖಾಧಿಕಾರಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಎಂಟನೇ ಆರೋಪಿ ಮೊರೆಯಿಟ್ಟಿದ್ದಾರೆ. ಈ ಸಭೆಯಲ್ಲಿ ಸಚಿವರಾದ ಶರಣ ಪ್ರಕಾಶ್ ಪಾಟೀಲ, ಬಿ.ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದಲ್ ಕೂಡ ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ವಾಲ್ಮೀಕಿ ನಿಗಮ ಹಗರಣ: ಇಡಿ ಮೊರೆ ಹೋದ ಬಿಜೆಪಿ

ತನಿಖೆ ನಡೆಯುತ್ತಿರುವಾಗ ಅನೇಕ ವಿಚಾರ ಬರುತ್ತದೆ: ಪರಮೇಶ್ವರ್​

ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ತಳುಕು ಹಾಕಿಕೊಂಡಿರುವ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಮಾತನಾಡಿ, ತನಿಖೆ ನಡೆಯುತ್ತಿರುವಾಗ ಅನೇಕ ವಿಚಾರ ಬರುತ್ತದೆ. ಯಾರು ಅಪರಾಧಿ ಸ್ಥಾನದಲ್ಲಿ ಇರುತ್ತಾರೆ ಅವರು ಹೇಳಿಕೆ ನೀಡುತ್ತಾರೆ. ಈ ಬಗ್ಗೆ SIT ತನಿಖೆ ಮಾಡುತ್ತೆ ಎಂದು ಹೇಳಿದರು. ಶರಣಪ್ರಕಾಶ್ ಪಾಟೀಲ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಅದನ್ನ ಪರಿಶೀಲನೆ ಮಾಡಬೇಕಾಗುತ್ತದೆ. ಅಗತ್ಯವಿದ್ದರೆ ಎಸ್​ಐಟಿ ಅಧಿಕಾರಿಗಳು ಸಹ ವಿಚಾರಣೆ ಮಾಡುತ್ತಾರೆ ಎಂದರು.

ಶರಣಪ್ರಕಾಶ್ ಪಾಟೀಲ್ ಒಬ್ಬ ಅಪ್ಪಟ ಪ್ರಾಮಾಣಿಕ ವ್ಯಕ್ತಿ: ಎಂಬಿ ಪಾಟೀಲ್​

ಸಚಿವ ಶರಣಪ್ರಕಾಶ್ ಪಾಟೀಲ್ ಒಬ್ಬ ಅಪ್ಪಟ ಪ್ರಾಮಾಣಿಕ ವ್ಯಕ್ತಿ. ಈ ಮಾತನ್ನು ಬಹಳ ಗರ್ವದಿಂದ ಹೇಳುತ್ತೇನೆ. ಸಾಕ್ಷ್ಯ ನಾಶ ಮಾಡುವಂತ ಕೆಲಸಕ್ಕೆ ಶರಣಪ್ರಕಾಶ್​ ಹೋಗುವುದಿಲ್ಲ. ದಯವಿಟ್ಟು ಶರಣಪ್ರಕಾಶ್ ಪಾಟೀಲ್ ಹೆಸರನ್ನು ತಳುಕು ಹಾಕಬೇಡಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಒಬ್ಬ ಫ್ರಾಡ್ ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Sat, 8 June 24

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ