ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳ ಬಂಧನ
ವಾಲ್ಮೀಕಿ ಅಭಿವೃದ್ಧಿ ನಿಗಮ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 01, 2024 | 4:14 PM

ಬೆಂಗಳೂರು, ಜೂ. 01: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್​ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆ ನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ಏನಿದು ಪ್ರಕರಣ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

ರಾಜಿನಾಮೆ ನೀಡುವಂತೆ ಬಿಜೆಪಿ ಒತ್ತಡ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಸರ್ಕಾರ ಮೇಲೆ ಒತ್ತಡ ಹೇರಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್​ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯ ಘಟನೆ ಈಗ ನಡೆದಿದ್ದು, ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಬಿಜೆಪಿ ಮತ್ತು ಜೆಡಿಎಸ್​ ಆಗ್ರಹಿಸಿದ್ದರು. ಒಂದು ವೇಳೆ ರಾಜಿನಾಮೆ ನೀಡದಿದ್ದರೆ ಜೂನ್​ 6 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಕರೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Sat, 1 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್