AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಕಲಬುರಗಿ ಮಾರ್ಗದ ರೈಲುಗಳು ಸೇರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯದಲ್ಲಿ ಬದಲಾವಣೆ

ನೈಋತ್ಯ ರೈಲ್ವೆ ಇಲಾಖೆಯು ಕೆಲವು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ. ಪರಿಷ್ಕತಗೊಂಡ ಹೊಸ ವೇಳಾಪಟ್ಟಿಯು ಮಾರ್ಚ್ 15ರಿಂದ ಜಾರಿಗೆ ಬರಲಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಹಾಗಾದರೆ ಯಾವೆಲ್ಲಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ಕಲಬುರಗಿ ಮಾರ್ಗದ ರೈಲುಗಳು ಸೇರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಮಯದಲ್ಲಿ ಬದಲಾವಣೆ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುImage Credit source: google
ಗಂಗಾಧರ​ ಬ. ಸಾಬೋಜಿ
|

Updated on: Mar 06, 2026 | 6:10 PM

Share

ಬೆಂಗಳೂರು, ಮಾರ್ಚ್​ 06: ನೈಋತ್ಯ ರೈಲ್ವೆ ಇಲಾಖೆ (South Western Railway) ಕೆಲವು ವಂದೇ ಭಾರತ್ (Vande Bharat) ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾಚಿಗುಡ–ಯಶವಂತಪುರ–ಕಾಚಿಗುಡ ಹಾಗೂ ಎಸ್‌ಎಂವಿಟಿ ಬೆಂಗಳೂರು–ಕಲಬುರಗಿ–ಎಸ್‌ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ಈ ಹೊಸ ವೇಳಾಪಟ್ಟಿ ಮಾರ್ಚ್ 15ರಿಂದ ಜಾರಿಗೆ ಬರಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ

ರೈಲು ಸಂಖ್ಯೆ 20704 ಯಶವಂತಪುರ ಟು ಕಾಚಿಗುಡ ವಂದೇ ಭಾರತ್ ಎಕ್ಸ್‌ಪ್ರೆಸ್​ ರೈಲು ಹಿಂದೂಪುರ ನಿಲ್ದಾಣದಲ್ಲಿ ಈಗಿರುವ 15.48/15.50 ಸಮಯದ ಬದಲು ಪರಿಷ್ಕೃತವಾಗಿ 15.55 ರಿಂದ 15.57ಕ್ಕೆ ಆಗಮಿಸಿ ನಿರ್ಗಮಿಸಲಿದೆ.

ಇದನ್ನೂ ಓದಿ: ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ

ಕಾಚಿಗುಡ ಟು ಯಶವಂತಪುರ

ಅದೇ ರೀತಿಯಲ್ಲಿ ರೈಲು ಸಂಖ್ಯೆ 20703 ಕಾಚಿಗುಡ ಟು ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್​ ಹಿಂದೂಪುರ ನಿಲ್ದಾಣದಲ್ಲಿ ಈಗಿರುವ 12.08/12.10 ಸಮಯದ ಬದಲು 12.17ರಿಂದ 12.19ಕ್ಕೆ ಆಗಮಿಸಿ ನಿರ್ಗಮಿಸಲಿದೆ.

ಕಲಬುರಗಿ ಟು ಎಸ್‌ಎಂವಿಟಿ ಬೆಂಗಳೂರು

ರೈಲು ಸಂಖ್ಯೆ 22231 ಕಲಬುರಗಿ ಟು ಎಸ್‌ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್​ ರೈಲು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದಲ್ಲಿ ಈಗಿರುವ 11/11.02 ಸಮಯದ ಬದಲು 11.13/11.15ಕ್ಕೆ ಆಗಮಿಸಲಿದೆ. ಅದೇ ರೈಲು ಯಲಹಂಕ ನಿಲ್ದಾಣದಲ್ಲಿ 12.28/12.30 ಸಮಯದ ಬದಲು 12.58/ 01 ಗಂಟೆಗೆ ಆಗಮಿಸಿ ನಿರ್ಗಮಿಸಲಿದೆ.

ಎಸ್‌ಎಂವಿಟಿ ಬೆಂಗಳೂರು ಟು ಕಲಬುರಗಿ

ಇನ್ನು ರೈಲು ಸಂಖ್ಯೆ 22232 ಎಸ್‌ಎಂವಿಟಿ ಬೆಂಗಳೂರು ಟು ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್​ ರೈಲು ಯಲಹಂಕ ನಿಲ್ದಾಣದಲ್ಲಿ ಈಗಿರುವ 15.05/15.07 ಸಮಯದ ಬದಲು 15.09/15.11ಕ್ಕೆ ಆಗಮಿಸಿ ನಿರ್ಗಮಿಸಲಿದೆ. ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದಲ್ಲಿ ಈಗಿರುವ 16.23/16.25 ಸಮಯದ ಬದಲು 16.45/16.47ಕ್ಕೆ ಆಗಮಿಸಿ ನಿರ್ಗಮಿಸಲಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ

ಪ್ರಯಾಣಿಕರು ವಂದೇ ಭಾರತ್ ಎಕ್ಸ್‌ಪ್ರೆಸ್​ ರೈಲುಗಳ ಈ ಬದಲಾವಣೆಗೊಂಡ ವೇಳಾಪಟ್ಟಿಯನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ