
ಬೆಂಗಳೂರು, ಮಾರ್ಚ್ 06: ನೈಋತ್ಯ ರೈಲ್ವೆ ಇಲಾಖೆ (South Western Railway) ಕೆಲವು ವಂದೇ ಭಾರತ್ (Vande Bharat) ಎಕ್ಸ್ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾಚಿಗುಡ–ಯಶವಂತಪುರ–ಕಾಚಿಗುಡ ಹಾಗೂ ಎಸ್ಎಂವಿಟಿ ಬೆಂಗಳೂರು–ಕಲಬುರಗಿ–ಎಸ್ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ಈ ಹೊಸ ವೇಳಾಪಟ್ಟಿ ಮಾರ್ಚ್ 15ರಿಂದ ಜಾರಿಗೆ ಬರಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರೈಲು ಸಂಖ್ಯೆ 20704 ಯಶವಂತಪುರ ಟು ಕಾಚಿಗುಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಿಂದೂಪುರ ನಿಲ್ದಾಣದಲ್ಲಿ ಈಗಿರುವ 15.48/15.50 ಸಮಯದ ಬದಲು ಪರಿಷ್ಕೃತವಾಗಿ 15.55 ರಿಂದ 15.57ಕ್ಕೆ ಆಗಮಿಸಿ ನಿರ್ಗಮಿಸಲಿದೆ.
ಇದನ್ನೂ ಓದಿ: ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್ ನ್ಯೂಸ್ ನೀಡಿದ ರೈಲ್ವೆ ಇಲಾಖೆ
ಅದೇ ರೀತಿಯಲ್ಲಿ ರೈಲು ಸಂಖ್ಯೆ 20703 ಕಾಚಿಗುಡ ಟು ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ಹಿಂದೂಪುರ ನಿಲ್ದಾಣದಲ್ಲಿ ಈಗಿರುವ 12.08/12.10 ಸಮಯದ ಬದಲು 12.17ರಿಂದ 12.19ಕ್ಕೆ ಆಗಮಿಸಿ ನಿರ್ಗಮಿಸಲಿದೆ.
ರೈಲು ಸಂಖ್ಯೆ 22231 ಕಲಬುರಗಿ ಟು ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದಲ್ಲಿ ಈಗಿರುವ 11/11.02 ಸಮಯದ ಬದಲು 11.13/11.15ಕ್ಕೆ ಆಗಮಿಸಲಿದೆ. ಅದೇ ರೈಲು ಯಲಹಂಕ ನಿಲ್ದಾಣದಲ್ಲಿ 12.28/12.30 ಸಮಯದ ಬದಲು 12.58/ 01 ಗಂಟೆಗೆ ಆಗಮಿಸಿ ನಿರ್ಗಮಿಸಲಿದೆ.
ಇನ್ನು ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು ಟು ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಯಲಹಂಕ ನಿಲ್ದಾಣದಲ್ಲಿ ಈಗಿರುವ 15.05/15.07 ಸಮಯದ ಬದಲು 15.09/15.11ಕ್ಕೆ ಆಗಮಿಸಿ ನಿರ್ಗಮಿಸಲಿದೆ. ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದಲ್ಲಿ ಈಗಿರುವ 16.23/16.25 ಸಮಯದ ಬದಲು 16.45/16.47ಕ್ಕೆ ಆಗಮಿಸಿ ನಿರ್ಗಮಿಸಲಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ
ಪ್ರಯಾಣಿಕರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಈ ಬದಲಾವಣೆಗೊಂಡ ವೇಳಾಪಟ್ಟಿಯನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ನೈಋತ್ಯ ರೈಲ್ವೆ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.