AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ

ಇಂದು (ಜೂ.19) ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್​​ಪ್ರೆಸ್​​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿಯಾಗಿದೆ. ಬೆಳಿಗ್ಗೆ 5:45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಿದೆ.

Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ
ಧಾರವಾಡ ತಲುಪಿದ ವಂದೇ ಭಾರತ್​ ಎಕ್ಸಪ್ರೆಸ್​
ವಿವೇಕ ಬಿರಾದಾರ
|

Updated on:Jun 19, 2023 | 2:32 PM

Share

ಧಾರವಾಡ: ಇಂದು (ಜೂ.19) ಬೆಂಗಳೂರು-ಧಾರವಾಡ (Bengaluru-Dharwad) ನಡುವೆ ವಂದೇ ಭಾರತ್ ಎಕ್ಸ್​​ಪ್ರೆಸ್ (Vande Bharat Express)​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿಯಾಗಿದೆ. ಬೆಳಿಗ್ಗೆ 5:45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಿದೆ. ಈ ರೈಲು ಅಧಿಕೃತವಾಗಿ ಜೂನ್​ 26ರಿಂದ ಆರಂಭವಾಗಲಿದೆ. ರೈಲು ಧಾರವಾಡಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಅಲ್ಲದೇ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಕಂಡು ಜನರು ಸಂಭ್ರಮಿಸಿದ್ದಾರೆ.

ರೈಲು ಬೆಳಿಗ್ಗೆ 5:45 ಕ್ಕೆ ಬೆಂಗಳೂರು ಬಿಟ್ಟಿತ್ತು. ತಾಂತ್ರಿಕ ತಂಡ ಹಾಗೂ ಅಧಿಕಾರಿಗಳು ರೈಲಿನಲ್ಲಿದ್ದರು. ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಎಲ್ಲ ಬಗೆಯ ಪರೀಕ್ಷೆಗಳು ಯಶಸ್ವಿಯಾಗಿವೆ. ಇತ್ತೀಚಿಗಷ್ಟೇ ಧಾರವಾಡ-ಬೆಂಗಳೂರು ಮಧ್ಯೆ ಎಲೆಕ್ಟ್ರಿಕಲ್ ಲೈನ್ ಎಳೆಯಲಾಗಿತ್ತು. ಇದರ ಪರೀಕ್ಷೆಯನ್ನು ಮಾಡಲಾಗಿದೆ. ಎಲ್ಲವೂ ಯಶಸ್ವಿಯಾಗಿವೆ. ಇದರಿಂದಾಗಿ ನಮ್ಮ ಸಿಬ್ಬಂದಿ ಖುಷಿಯಾಗಿದ್ದಾರೆ ಎಂದು ನೈರುತ್ಯ ರೇಲ್ವೆಯ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ: Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!

ಇನ್ನು 40 ನಿಮಿಷ ಬೇಗ ಬಂದ ವಿಚಾರವಾಗಿ ಮಾತನಾಡಿ ಇದು ಪ್ರಾಯೋಗಿಕ ಸಂಚಾರ ಹೀಗಾಗಿ ಸಮಯದಲ್ಲಿ ಹೆಚ್ಚು ಕಡಿಮೆಯಾಗಿದೆ. ಮುಂದೆ ಅಧಿಕೃತವಾಗಿ ಆರಂಭವಾದಾಗ ವೇಳೆಯ ಪಾಲನೆಯಾಗಲಿದೆ. ಒಂದೇ ಬಾರಿ‌ಯ ಸಂಚಾರಕ್ಕೆ ವೇಳೆ ನಿಗದಿಪಡಿಸೋದು ಸಾಧ್ಯವಿಲ್ಲ. ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ನೀಡಲಾಗುವುದು ಎಂದರು.

ಜೂನ್ 26ಕ್ಕೆ ಮೋದಿ ಚಾಲನೆ

ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಸೂಪರ್-ಫಾಸ್ಟ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಎರಡನೇ ಹಂತದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪಾದಾರ್ಪಣೆ ಮಾಡಿದಂತಾಗುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುರುವಾರ ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣಕ್ಕೆ ಬಂದಿತ್ತು.

ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಲಿದ್ದು, ದಾವಣಗೆರೆಯಲ್ಲಿ ಮಾತ್ರ ನಿಲುಗಡೆಯಾಗಲಿದೆ. ವಂದೇ ಭಾರತ್ ರೈಲಿನಲ್ಲಿ ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವು ಸರಿಸುಮಾರು ಏಳು ಗಂಟೆಗಳು ಎಂದು ಹೇಳಲಾಗಿದೆ. ಇತರ ಸಾಮಾನ್ಯ ರೈಲುಗಳಲ್ಲಿ ಒಂಬತ್ತರಿಂದ ಹತ್ತು ಗಂಟೆಗಳು ತೆಗೆದುಕೊಳ್ಳುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Mon, 19 June 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ