AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ

ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.

ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ
ವರ್ತಿಕಾ ಕಟಿಯಾರ್
TV9 Web
| Edited By: |

Updated on:Jun 04, 2021 | 11:49 AM

Share

ಬೆಂಗಳೂರು: ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ನಡುವೆ ಕಾನೂನು ಸಮರ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ. ಅಲ್ಲದೆ ಪ್ರಾಥಮಿಕ ವಿಚಾರಣೆ ನಡೆಸಿ ವರ್ತಿಕಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಜಿಪಿ‌ ಪ್ರವೀಣ್ ಸೂದ್ಗೆ ಆಯೋಗ ಶಿಫಾರಸ್ಸು ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವರ್ತಿಕಾ ಗಂಡನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.

ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.

ಗಂಡನ ವಿರುದ್ಧ ಮತ್ತೊಂದು ದೂರು ಕಳೆದ ಫೆಬ್ರವರಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ವರ್ತಿಕಾ ಕಟಿಯಾರ್, ತಮ್ಮ ಪತಿ ನಿತಿನ್ ಸುಭಾಶ್ ಹಾಗೂ ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದೆಹಲಿ ಪೊಲೀಸರಿಗೆ ಹಸ್ತಾಂತರವಾಗಿತ್ತು. ಈಗ ಮತ್ತೆ ಕಳೆದ ಮೇ 28ರಂದು ವಾಟ್ಸಾಪ್ ಗ್ರೂಪ್ ಕಾಲ್ನಲ್ಲಿ ಆ್ಯಸಿಡ್ ಹಾಕುವುದಾಗಿ ಆ್ಯಸಿಡ್ ದಾಳಿ, ಜೀವ ಬೆದರಿಕೆ, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರ್ತಿಕಾ ಗಂಡನ ಮೇಲೆ ಗಂಭೀರ ಆರೋಪ ಮಾಡಿದ್ದರು.

ಮೇ 29 ರಂದು ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಆಗಮಿಸಿ ದೈಹಿಕವಾಗಿ ಹಲ್ಲೆ ಮಾಡುವುದಕ್ಕೆ‌ ಸಂಚು ಮಾಡಲಾಗಿದ್ದು ನನ್ನ ಪೋಷಕರಿಗೆ ಕರೆ ಮಾಡಿ ಮನೆ ವಿಳಾಸ ತಿಳಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಈಗ ಮತ್ತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವರ್ತಿಕಾ ತನ್ನ ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ  

Published On - 11:48 am, Fri, 4 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?