AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ

ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.

ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ
ವರ್ತಿಕಾ ಕಟಿಯಾರ್
TV9 Web
| Edited By: |

Updated on:Jun 04, 2021 | 11:49 AM

Share

ಬೆಂಗಳೂರು: ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ನಡುವೆ ಕಾನೂನು ಸಮರ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ. ಅಲ್ಲದೆ ಪ್ರಾಥಮಿಕ ವಿಚಾರಣೆ ನಡೆಸಿ ವರ್ತಿಕಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಜಿಪಿ‌ ಪ್ರವೀಣ್ ಸೂದ್ಗೆ ಆಯೋಗ ಶಿಫಾರಸ್ಸು ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವರ್ತಿಕಾ ಗಂಡನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.

ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.

ಗಂಡನ ವಿರುದ್ಧ ಮತ್ತೊಂದು ದೂರು ಕಳೆದ ಫೆಬ್ರವರಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ವರ್ತಿಕಾ ಕಟಿಯಾರ್, ತಮ್ಮ ಪತಿ ನಿತಿನ್ ಸುಭಾಶ್ ಹಾಗೂ ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದೆಹಲಿ ಪೊಲೀಸರಿಗೆ ಹಸ್ತಾಂತರವಾಗಿತ್ತು. ಈಗ ಮತ್ತೆ ಕಳೆದ ಮೇ 28ರಂದು ವಾಟ್ಸಾಪ್ ಗ್ರೂಪ್ ಕಾಲ್ನಲ್ಲಿ ಆ್ಯಸಿಡ್ ಹಾಕುವುದಾಗಿ ಆ್ಯಸಿಡ್ ದಾಳಿ, ಜೀವ ಬೆದರಿಕೆ, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರ್ತಿಕಾ ಗಂಡನ ಮೇಲೆ ಗಂಭೀರ ಆರೋಪ ಮಾಡಿದ್ದರು.

ಮೇ 29 ರಂದು ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಆಗಮಿಸಿ ದೈಹಿಕವಾಗಿ ಹಲ್ಲೆ ಮಾಡುವುದಕ್ಕೆ‌ ಸಂಚು ಮಾಡಲಾಗಿದ್ದು ನನ್ನ ಪೋಷಕರಿಗೆ ಕರೆ ಮಾಡಿ ಮನೆ ವಿಳಾಸ ತಿಳಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಈಗ ಮತ್ತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವರ್ತಿಕಾ ತನ್ನ ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ  

Published On - 11:48 am, Fri, 4 June 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ