Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ

ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.

ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ಕಾನೂನು ಸಮರ; ಪತಿಯ ವಿರುದ್ಧ ಆ್ಯಸಿಡ್ ದಾಳಿ, ಜೀವ ಬೆದರಿಕೆ ದೂರು ದಾಖಲಿಸಿದ ವರ್ತಿಕಾ
ವರ್ತಿಕಾ ಕಟಿಯಾರ್
Follow us
TV9 Web
| Updated By: ಆಯೇಷಾ ಬಾನು

Updated on:Jun 04, 2021 | 11:49 AM

ಬೆಂಗಳೂರು: ಐಪಿಎಸ್-ಐಎಫ್ಎಸ್ ಅಧಿಕಾರಿ ದಂಪತಿ ನಡುವೆ ಕಾನೂನು ಸಮರ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ. ಅಲ್ಲದೆ ಪ್ರಾಥಮಿಕ ವಿಚಾರಣೆ ನಡೆಸಿ ವರ್ತಿಕಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಜಿಪಿ‌ ಪ್ರವೀಣ್ ಸೂದ್ಗೆ ಆಯೋಗ ಶಿಫಾರಸ್ಸು ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವರ್ತಿಕಾ ಗಂಡನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.

ತನ್ನ ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ಮಗನನ್ನು ನೋಡಲು ಬಿಡುತ್ತಿಲ್ಲವೆಂದು ಭಾರತೀಯ ವಿದೇಶಾಂಗ ಇಲಾಖೆ(ಐಎಫ್ಎಸ್) ಅಧಿಕಾರಿ ನಿತಿನ್ ಸುಭಾಶ್ ರಾಷ್ಟ್ರೀಯ ಮಕ್ಕಳ‌ ರಕ್ಷಣಾ ಆಯೋಗ‌ದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.

ಗಂಡನ ವಿರುದ್ಧ ಮತ್ತೊಂದು ದೂರು ಕಳೆದ ಫೆಬ್ರವರಿಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ವರ್ತಿಕಾ ಕಟಿಯಾರ್, ತಮ್ಮ ಪತಿ ನಿತಿನ್ ಸುಭಾಶ್ ಹಾಗೂ ಕುಟುಂಬಸ್ಥರು ಸೇರಿದಂತೆ 7 ಮಂದಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದೆಹಲಿ ಪೊಲೀಸರಿಗೆ ಹಸ್ತಾಂತರವಾಗಿತ್ತು. ಈಗ ಮತ್ತೆ ಕಳೆದ ಮೇ 28ರಂದು ವಾಟ್ಸಾಪ್ ಗ್ರೂಪ್ ಕಾಲ್ನಲ್ಲಿ ಆ್ಯಸಿಡ್ ಹಾಕುವುದಾಗಿ ಆ್ಯಸಿಡ್ ದಾಳಿ, ಜೀವ ಬೆದರಿಕೆ, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರ್ತಿಕಾ ಗಂಡನ ಮೇಲೆ ಗಂಭೀರ ಆರೋಪ ಮಾಡಿದ್ದರು.

ಮೇ 29 ರಂದು ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಧಿಕೃತವಾಗಿ ಬೆಂಗಳೂರಿನ ಕಚೇರಿಗೆ ಆಗಮಿಸಿ ದೈಹಿಕವಾಗಿ ಹಲ್ಲೆ ಮಾಡುವುದಕ್ಕೆ‌ ಸಂಚು ಮಾಡಲಾಗಿದ್ದು ನನ್ನ ಪೋಷಕರಿಗೆ ಕರೆ ಮಾಡಿ ಮನೆ ವಿಳಾಸ ತಿಳಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಈಗ ಮತ್ತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವರ್ತಿಕಾ ತನ್ನ ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ  

Published On - 11:48 am, Fri, 4 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ