AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯ 3 ದಿನವೂ ಪಟಾಕಿ ಹಚ್ತೀನಿ, ಜೈಲಿಗೆ ಹಾಕಿದ್ರೂ OK -ಸರ ಸಿಡಿಸಿ ವಾಟಾಳ್​ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆ ಮೇಲೆ ಸರ್ಕಾರ ಕೆಲ ನಿರ್ಬಂಧ ಹೇರಿರುವುದನ್ನು ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಪಟಾಕಿ ಸಿಡಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ವಾಟಾಳ್ ಇಂದು ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಸರ್ಕಾರ ನಿಷೇಧ ಮಾಡಿರುವ 2 ಸಾವಿರದ ಸರಪಟಾಕಿ ಸಿಡಿಸಿ ಪ್ರತಿಭಟನೆ ನಡೆಸಿದರು. ದೀಪಾವಳಿ ಅಂದ್ರೆ ಪಟಾಕಿ ಹೊಡೆಯಲೇ ಬೇಕು. […]

ದೀಪಾವಳಿಯ 3 ದಿನವೂ ಪಟಾಕಿ ಹಚ್ತೀನಿ, ಜೈಲಿಗೆ ಹಾಕಿದ್ರೂ OK -ಸರ ಸಿಡಿಸಿ ವಾಟಾಳ್​ ಕಿಡಿ
KUSHAL V
|

Updated on: Nov 08, 2020 | 2:34 PM

Share

ಬೆಂಗಳೂರು: ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆ ಮೇಲೆ ಸರ್ಕಾರ ಕೆಲ ನಿರ್ಬಂಧ ಹೇರಿರುವುದನ್ನು ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಪಟಾಕಿ ಸಿಡಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ವಾಟಾಳ್ ಇಂದು ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಸರ್ಕಾರ ನಿಷೇಧ ಮಾಡಿರುವ 2 ಸಾವಿರದ ಸರಪಟಾಕಿ ಸಿಡಿಸಿ ಪ್ರತಿಭಟನೆ ನಡೆಸಿದರು. ದೀಪಾವಳಿ ಅಂದ್ರೆ ಪಟಾಕಿ ಹೊಡೆಯಲೇ ಬೇಕು. ಸರ್ಕಾರ ನಿರ್ಬಂಧ ಹೇರಿರೋದು ಸರಿಯಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು.

ಸರ್ಕಾರ ದೀಪಾವಳಿಗೆ ಪಟಾಕಿ ಹೊಡೆಯಬಾರದು ಅಂತಾ ಹೇಳಿದೆ. ಇದು ಇಡೀ ದೇಶದ ಹಬ್ಬ. ಸರ್ಕಾರಕ್ಕೆ ಬುದ್ಧಿಯಿಲ್ಲ. ಪಟಾಕಿ ಹೊಡೆದಿಲ್ಲ ಅಂದ್ರೆ ದೀಪಾವಳಿ ಹಬ್ಬ ಪರಿಪೂರ್ಣವಾಗಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಕಿಡಿಕಾರಿದರು. ಜನ ಇಷ್ಟು ವರ್ಷಗಳಿಂದ ಹಬ್ಬ ಮಾಡಿಕೊಂಡು ಬಂದಿದ್ದಾರೆ. ಕಣ್ಣಿಗೆ ತೊಂದರೆ ಆಗಬಹುದು. ಹಾಗಾಗಿ, ಎಚ್ಚರಿಕೆಯಿಂದ ಎಲ್ಲರೂ ಪಟಾಕಿ ಹಚ್ಚಿ. ಪಟಾಕಿ ಯುವಕರ ಹಬ್ಬ. ಸರ್ಕಾರ ಎಲ್ಲಾ ಬೋಗಸ್, ಸುಳ್ಳು ಹೇಳುತ್ತದೆ. ಅವರಿಗೆ ಬುದ್ಧಿಯಿಲ್ಲ. ಸಿಗರೇಟ್​ನಿಂದ ತೊಂದರೆ ಅಗಲ್ವಾ? ಬಾರ್​ನಲ್ಲಿ ಕುಡಿಯೋದ್ರಿಂದ ಕೊರೊನಾ ಬರಲ್ವಾ? ಸಿನಿಮಾ, ಮಾಲ್ ಎಲ್ಲಾ ಒಪೆನ್ ಮಾಡಿದ್ದಾರೆ. 3 ದಿನ ಪಟಾಕಿ ಹೊಡೆದರೆ ಬೆಂಗಳೂರು ಏನು ಹಾಳಾಗಿ ಹೋಗಲ್ಲ ಎಂದು ವಾಟಾಳ್​ ಕಿಡಿಕಾರಿದರು.

ಜೊತೆಗೆ, ಪಟಾಕಿಯಿಂದ ಕೊರೊನಾ ಬರುತ್ತೆ ಅಂತಾ ಯಡಿಯೂರಪ್ಪ ಹೇಳಿದ್ದಾರೆ. ಹಸಿರು ಪಟಾಕಿ ಅಂದ್ರೆ ಸುರ್ಸುರ್ ಬತ್ತಿ. ಅದು ಲೆಕ್ಕಕ್ಕೆ ಇಲ್ಲ. ನಾನು 3 ದಿನ ಕೂಡ ಪಟಾಕಿ ಹಚ್ಚುತ್ತೇನೆ. ನನ್ನನ್ನ ಜೈಲಿಗೆ ಹಾಕಿದ್ರು ಪರವಾಗಿಲ್ಲ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ