AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರಿಬ್ರೂ ಯಾರು ಅಂತಾ ಗೊತ್ತಿಲ್ಲ.. ಅದಕ್ಕೆ ಇವರಿಗೆ ನಾಯಿಗಳು ಅಂತಾ ಹೆಸರಿಟ್ಟಿದ್ದೀನಿ -ವಾಟಾಳ್​ ಕಿಡಿ

ಅವರಿಬ್ಬರ ಬಗ್ಗೆ ಗೊತ್ತಿಲ್ಲವಾದ್ದರಿಂದ ಅವರಿಗೆ ನಾಯಿಗಳು ಅಂತ ಹೆಸರಿಟ್ಟಿದ್ದೀನಿ.. ನಾಯಿಗಳು ಬೊಗಳಿದರೆ ಜನರು ಉತ್ತರ ಕೊಡುತ್ತಾರೆ, ನಾವು ನಾಯಿಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ

ಇವರಿಬ್ರೂ ಯಾರು ಅಂತಾ ಗೊತ್ತಿಲ್ಲ.. ಅದಕ್ಕೆ ಇವರಿಗೆ ನಾಯಿಗಳು ಅಂತಾ ಹೆಸರಿಟ್ಟಿದ್ದೀನಿ -ವಾಟಾಳ್​ ಕಿಡಿ
M.P. ರೇಣುಕಾಚಾರ್ಯ (ಎಡ); ಬಸನಗೌಡ ಪಾಟೀಲ್​ ಯತ್ನಾಳ್​ (ಬಲ)
Skanda
| Edited By: |

Updated on:Nov 29, 2020 | 2:57 PM

Share

ಮೈಸೂರು: ಮರಾಠ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾ.ರಾ ಗೋವಿಂದ್ ನೇತೃತ್ವದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕೊಲಂಬಿಯಾ ಏಷ್ಯಾ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಭಾಗಿಯಾಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಡಿಸೆಂಬರ್ 5ರ ಬಂದ್​ ಕುರಿತು ಹೇಳಿಕೆ ನೀಡಿದ್ದ ಶಾಸಕರಾದ ರೇಣುಕಾಚಾರ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಈ ಸಂದರ್ಭದಲ್ಲಿ ಆಕ್ರೋಶ ಹೊರಹಾಕಿದ ವಾಟಾಳ್ ನಾಗರಾಜ್ ಅವರಿಬ್ಬರು ಯಾರು ಎಂದು ಅರ್ಥ ಆಗಿಲ್ಲ. ಮಂತ್ರಿಗಳು ಹಾಗೂ MPಗಳೇ ಈ ಬಗ್ಗೆ ಏನೂ ಮಾತಾಡುತ್ತಿಲ್ಲ. ಹಾಗಿರುವಾಗ ಇವರು ಯಾರು ಮಾತನಾಡೋಕೆ? ಎಂದು ತಮ್ಮ ಸಿಟ್ಟು ಹೊರಹಾಕಿದರು.

ಇವರಿಬ್ಬರು ಯಾರು ಅಂತಾ ನನಗೆ ಗೊತ್ತಿಲ್ಲ. ಅದಕ್ಕೆ ಇವರಿಗೆ ನಾಯಿಗಳು ಅಂತಾ ಹೆಸರಿಟ್ಟಿದ್ದೀನಿ ಎಂದು ವಾಟಾಳ್​ ನಾಗರಾಜ್​ ಕಿಡಿ ಕಾರಿದರು. ನಾಯಿಗಳು ಬೊಗಳಿದರೆ ಜನರು ಉತ್ತರ ಕೊಡುತ್ತಾರೆ. ನಾವು ನಾಯಿಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಹರಿಹಾಯ್ದರು.

ಅಂತೆಯೇ, ಯಡಿಯೂರಪ್ಪ ಅವರೇ ನೀವೂ ಸರ್ವಾಧಿಕಾರಿ ಮುಖ್ಯಮಂತ್ರಿ. ಇದುವರೆಗೂ ನಿಮ್ಮಂಥ ಸರ್ವಾಧಿಕಾರಿ ಯಾರೂ ಬಂದಿಲ್ಲ. ನಿಮಗೆ ಕನ್ನಡದ ಬಗ್ಗೆ ಯಾವುದೇ ಅಭಿಮಾನವಿಲ್ಲ ಎಂದು ಹೇಳಿದ ವಾಟಾಳ್​ ನಾಗರಾಜ್​ ಸಿ.ಎಂ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಅನಿವಾರ್ಯ ಎಂದು ಹೇಳಿದರು. ಜೊತೆಗೆ, ನಾಳೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌‌ನಲ್ಲಿ ಕರಾಳ ದಿನ ಆಚರಣೆ ಮಾಡುತ್ತೇವೆ. ಬೃಹತ್ ಕರಾಳ ದಿನಾಚರಣೆ ಆಚರಣೆಗೆ ಕನ್ನಡಪರ ಸಂಘಟನೆಗಳು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

Published On - 2:49 pm, Sun, 29 November 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ