AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ