AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Follow Us
KUSHAL V
KUSHAL V
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ