AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSYಗೆ ನನ್ನ ಮೇಲೆ ದ್ವೇಷ.. ಅವರಿಗೆ ನೀಚ ಬುದ್ಧಿ ಇದೆ -ವಾಟಾಳ್​ ನಾಗರಾಜ್​ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದ್ವೇಷಿ. ಸರ್ಕಾರದ ಅನುದಾನ ಮದುವೆ, ಪ್ರೇಮ ವಿವಾಹಕ್ಕಲ್ಲ. ಕನ್ನಡ ರಾಜ್ಯೋತ್ಸವ ಆಚರಿಸಲು ಅನುದಾನ ಕೊಡ್ತಾರೆ. ಸಿಎಂ ಬಿಎಸ್‌ವೈ ಅನುದಾನ ಕೊಡಿ ಅಂದ್ರೆ ಕೊಡಲಿಲ್ಲ. ಬಿಎಸ್‌ವೈ ಸರ್ಕಾರದಿಂದ ಅನುದಾನ ತೆಗೆದುಕೊಂಡಿಲ್ಲ. ಆದರೆ, ಅವರು ಅನುದಾನ ಕೊಟ್ಟಿಲ್ಲವೆಂದು ಆಚರಣೆ ನಿಲ್ಲಿಸಿಲ್ಲ ಎಂದು ಕನ್ನಡ ಸಂಘಟನೆಗಳಿಗೆ ಸರ್ಕಾರ ಅನುದಾನ ನೀಡದ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು. ನಾವು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನಿಲ್ಲಿಸಿಲ್ಲ. ಯಡಿಯೂರಪ್ಪನವರೇ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದೀರಾ ? ಎಂದು ಸಹ ಪ್ರಶ್ನಿಸಿದರು. ಅವರು […]

BSYಗೆ ನನ್ನ ಮೇಲೆ ದ್ವೇಷ.. ಅವರಿಗೆ ನೀಚ ಬುದ್ಧಿ ಇದೆ -ವಾಟಾಳ್​ ನಾಗರಾಜ್​ ಕಿಡಿ
KUSHAL V
|

Updated on: Nov 22, 2020 | 1:34 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದ್ವೇಷಿ. ಸರ್ಕಾರದ ಅನುದಾನ ಮದುವೆ, ಪ್ರೇಮ ವಿವಾಹಕ್ಕಲ್ಲ. ಕನ್ನಡ ರಾಜ್ಯೋತ್ಸವ ಆಚರಿಸಲು ಅನುದಾನ ಕೊಡ್ತಾರೆ. ಸಿಎಂ ಬಿಎಸ್‌ವೈ ಅನುದಾನ ಕೊಡಿ ಅಂದ್ರೆ ಕೊಡಲಿಲ್ಲ. ಬಿಎಸ್‌ವೈ ಸರ್ಕಾರದಿಂದ ಅನುದಾನ ತೆಗೆದುಕೊಂಡಿಲ್ಲ. ಆದರೆ, ಅವರು ಅನುದಾನ ಕೊಟ್ಟಿಲ್ಲವೆಂದು ಆಚರಣೆ ನಿಲ್ಲಿಸಿಲ್ಲ ಎಂದು ಕನ್ನಡ ಸಂಘಟನೆಗಳಿಗೆ ಸರ್ಕಾರ ಅನುದಾನ ನೀಡದ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು. ನಾವು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನಿಲ್ಲಿಸಿಲ್ಲ. ಯಡಿಯೂರಪ್ಪನವರೇ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದೀರಾ ? ಎಂದು ಸಹ ಪ್ರಶ್ನಿಸಿದರು. ಅವರು ಅನುದಾನ ನೀಡದಿರುವುದಕ್ಕೆ ದ್ವೇಷವೇ ಕಾರಣ. ಸಿಎಂ ಯಡಿಯೂರಪ್ಪಗೆ ನನ್ನ ಮೇಲೆ ದ್ವೇಷವಿದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಕೊವಿಡ್ ವಿಚಾರದಲ್ಲಿ ಕೋಟಿ ಕೋಟಿ ಹಣ ನುಂಗಿದ್ದಾರೆ. ಬಂದ್‌ಗೂ ಅನುದಾನಕ್ಕೂ ಯಾವುದೇ ಸಂಬಂಧವಿಲ್ಲ. ನಾನು ನೀಚ ಕೆಲಸ ಮಾಡೋದಿಲ್ಲ ನಾವು ಬಂದ್‌ನಿಂದ ಹಿಂದೆ ಸರಿಯುವಂತೆ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪಗೆ ನೀಚ ಬುದ್ಧಿ ಇದೆ ಎಂದು ವಾಟಾಳ್​ ನಾಗರಾಜ್​ ಹೇಳಿದರು.

ಆದರೆ, ಯಾರು ಏನೇ ಅಪಪ್ರಚಾರ ಮಾಡಿದ್ರೂ ಹಿಂದೆ ಸರಿಯಲ್ಲ. ನಾವು ಬಂದ್‌ನಿಂದ ಹಿಂದೆ ಸರಿಯುವುದಿಲ್ಲ ಎಂದು ವಾಟಾಳ್ ನಾಗರಾಜ್​ ಹೇಳಿದರು.