AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಮಹಾಸಭಾ ಸಭೆಯಲ್ಲಿ 5 ನಿರ್ಣಯ, ಜಾತಿಗಣತಿ ವರದಿ ಒಪ್ಪದಿರಲು ತೀರ್ಮಾನ

ಭಾರತ ವೀರಶೈವ ಮಹಾಸಭಾ ಮುಖಂಡರ ಸಭೆ ನಡೆದಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಜಾತಿಗಣತಿ ವರದಿಯನ್ನು ಒಪ್ಪದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಸಭೆಯಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದೆ. ಹಾಗಾದ್ರೆ, ಸಭೆಯಲ್ಲಿ ಕೈಗೊಂಡ ಆ ಐದು ನಿರ್ಣಯಗಳಾವುವು ಎನ್ನುವ ವಿವರ ಇಲ್ಲಿದೆ.

ವೀರಶೈವ ಮಹಾಸಭಾ ಸಭೆಯಲ್ಲಿ 5 ನಿರ್ಣಯ, ಜಾತಿಗಣತಿ ವರದಿ ಒಪ್ಪದಿರಲು ತೀರ್ಮಾನ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 22, 2024 | 9:43 PM

Share

ಬೆಂಗಳೂರು, ಅಕ್ಟೋಬರ್ 22): ವೀರಶೈವ ಲಿಂಗಾಯತ ಮಹಾಸಭಾ (Veerashaiva Lingayat Mahasabha) ಮುಖಂಡರ ಸಭೆ ಅಂತವಾಗಿದೆ. ಬೆಂಗಳೂರಿನಲ್ಲಿಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನೇತೃತ್ವದ ನಡೆದ ಸಭೆಯಲ್ಲಿ ಪ್ರಮುಖ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆ ಸಿದ್ದರಾಮಯ್ಯ ಸರ್ಕಾರ ಜಾರಿ ಮಾಡಲು ಹೊರಟಿರುವ ಜಾತಿಗಣತಿ ವರದಿಯನ್ನು ಒಪ್ಪದಿರಲು ಸಭೆ ತೀರ್ಮಾನಿಸಿದೆ. ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿ ನಡೆದಿದೆ ಎಂದು ಪ್ರತಿಪಾದಿಸಿ, ಮತ್ತೊಮ್ಮೆ ವೈಜ್ಞಾನಕ್ಕಾಗಿ ಸಮೀಕ್ಷೆ ನಡೆಸಬೇಕೆಂದು ಒತ್ತಾಯ ಮಾಡಲು ತೀರ್ಮಾನಿಸಿದೆ.

ಸಭೆಯ ಐದು ನಿರ್ಣಯಗಳು ಹೀಗಿವೆ

  1.  ಲಿಂಗಾಯತ ಸಮುದಾಯ ಜಾತಿಗಣತಿಯ ವಿರೋಧಿಗಳಲ್ಲ ಆದರೆ ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಯ ಮತ್ತು ಲೋಪಗಳಿಂದ ಕೂಡಿದ್ದು. ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಮಹಾಸಭೆ ಆಗ್ರಹಿಸುತ್ತದೆ.
  2.  ರಾಜ್ಯ ಸರ್ಕಾರದ ಪರಿಗಣನೆಯಲ್ಲಿರುವ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು, ಶ್ರೀ ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿಯು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾದುದ್ದರಿಂದ ಸ್ವೀಕಾರಕ್ಕೆ ಅರ್ಹವಲ್ಲವೆಂದು ಮಹಾಸಭೆಯು ಸ್ಪಷ್ಟವಾಗಿ ಅಭಿಪ್ರಾಯಿಸುತ್ತದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಕುರಿತಾದ ಯಾವುದೇ ಉದ್ದೇಶಿತ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮಹಾಸಭೆಯು ಆಗ್ರಹಿಸುತ್ತದೆ.
  3.  ರಾಜ್ಯ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಹಲವಾರು ಲಿಂಗಾಯತ ಉಪಪಂಗಡಗಳ ಹೆಸರಿನ ಜೊತೆಯಲ್ಲಿ “ಲಿಂಗಾಯತ” ಪದವಿಲ್ಲದೇ ಕೇವಲ ಉಪಪಂಗಡಗಳ ಹೆಸರನ್ನು ಮಾತ್ರ ನಮೂದಿಸಲಾಗಿರುತ್ತದೆ. ಆದುದರಿಂದ ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯ ಸಿವಿಲ್ ಅಪೀಲ್ ನಂ. 7241/2021 ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಆಧಾರವಾಗಿರಿಸಿಕೊಂಡು, ಎಲ್ಲಾ ಲಿಂಗಾಯತ ಉಪಪಂಗಡಗಳ ಜೊತೆಯಲ್ಲಿ “ಲಿಂಗಾಯತ” ಎಂದು ನಮೂದಿಸಿದ ಆಯ್ಕೆಯನ್ನು ಈಗಿರುವ ಪಟ್ಟಿಯಲ್ಲಿ, ಉಪಪಂಗಡಗಳಿರುವ ವರ್ಗಗಳನ್ನು ಬದಲಾಯಿಸದೇ ಸರ್ಕಾರದ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಮಹಾಸಭಾ ಮನವಿ ಮಾಡುತ್ತದೆ.
  4. ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮಾನ್ಯ ಮುಖ್ಯಮಂತ್ರಿಗಳು ಶಿಫಾರಸ್ಸು ಮಾಡಬೇಕೆಂದು ಮಹಾಸಭೆಯು ಮನವಿ ಮಾಡುತ್ತದೆ.
  5.  ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ನಮ್ಮ ಸಮುದಾಯದ ಪರವಾಗಿ ಮಹಾಸಭೆಯ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಆಶ್ವಾಸನೆಯನ್ನು ನೀಡುತ್ತೇನೆ

Published On - 9:36 pm, Tue, 22 October 24

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು