Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪರನ್ನು ಕೆಳಗಿಳಿಸಬಾರದು: ಮಠಾಧೀಶರಿಂದ ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲ ಒತ್ತಾಯದ ಸಂದೇಶ ರವಾನೆ

BS Yediyurappa: ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಹುನ್ನಾರ ನಡೆಯುತ್ತಿದೆ. ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ನಡೆಯಲು ಆಗಲ್ಲ. ಕಿವಿ ಕೇಳಿಸುವುದಿಲ್ಲ, ಉಸಿರಾಡಲು ಆಗಲ್ಲವೆಂದು ಅಪಪ್ರಚಾರ ನಡೆದಿದೆ. ಕರುಣಾನಿಧಿ ವ್ಹೀಲ್​ಚೇರ್​ನಲ್ಲಿ ಕುಳಿತು ಆಡಳಿತ ಮಾಡಿಲ್ವೇ? ನಮ್ಮ ಯಡಿಯೂರಪ್ಪಗೆ ಅಷ್ಟೊಂದು ವಯಸ್ಸಾಗಿದೆಯೇ? BSY ಅಧಿಕಾರ ಪೂರ್ಣಗೊಳಿಸುವವರೆಗೆ ಅಡ್ಡಿಪಡಿಸಬಾರದು - ವೀರಶೈವ ಲಿಂಗಾಯತ ಮಠಾಧೀಶರು

ಯಡಿಯೂರಪ್ಪರನ್ನು ಕೆಳಗಿಳಿಸಬಾರದು: ಮಠಾಧೀಶರಿಂದ ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲ ಒತ್ತಾಯದ ಸಂದೇಶ ರವಾನೆ
ಕರುಣಾನಿಧಿ ವ್ಹೀಲ್​ಚೇರ್​ನಲ್ಲಿ ಕುಳಿತು ಆಡಳಿತ ಮಾಡಿಲ್ವೇ? ವೀರಶೈವ ಮಠಾಧೀಶರಿಂದ ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 14, 2021 | 3:51 PM

ತುಮಕೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್​ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿದ್ದಾರೆ.  ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಕ್ತಿಗಳು ಸಿಎಂ ಸ್ಥಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಮಾನಸಿಕವಾಗಿ ನೋವುಂಟಾಗುತ್ತಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್​ವೈ ಅವರು ಕಾರಣ ಎಂದು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಷಡಕ್ಷರಿ ಮಠದ ರುದ್ರಮುನಿ ಸ್ವಾಮಿಜಿ, ಜಂಗಮ ಮಠದ ಸಿದ್ದಲಿಂಗ ಸ್ವಾಮಿಜಿ, ಬೆಳ್ಳಾವಿ ಕಾರದ ಮಠದ ವೀರಬಸವ ಸ್ವಾಮಿಜಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ವಾಮಿಜಿಗಳು ಯಡಿಯೂರಪ್ಪ ಪರ  ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಸಂದೇಶ ರವಾನಿಸಿದ್ದಾರೆ.

ಕರುಣಾನಿಧಿ ವ್ಹೀಲ್​ಚೇರ್​ನಲ್ಲಿ ಕುಳಿತು ಆಡಳಿತ ಮಾಡಿಲ್ವೇ? ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಹುನ್ನಾರ ನಡೆಯುತ್ತಿದೆ. ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ನಡೆಯಲು ಆಗಲ್ಲ. ಕಿವಿ ಕೇಳಿಸುವುದಿಲ್ಲ, ಉಸಿರಾಡಲು ಆಗಲ್ಲವೆಂದು ಅಪಪ್ರಚಾರ ನಡೆದಿದೆ. ಕರುಣಾನಿಧಿ ವ್ಹೀಲ್​ಚೇರ್​ನಲ್ಲಿ ಕುಳಿತು ಆಡಳಿತ ಮಾಡಿಲ್ವೇ? ನಮ್ಮ ಯಡಿಯೂರಪ್ಪಗೆ ಅಷ್ಟೊಂದು ವಯಸ್ಸಾಗಿದೆಯೇ? BSY ಅಧಿಕಾರ ಪೂರ್ಣಗೊಳಿಸುವವರೆಗೆ ಅಡ್ಡಿಪಡಿಸಬಾರದು. ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರು. ಅಂಥವರನ್ನು ತುಳಿಯಲು, ಮೂಲೆಗುಂಪು ಮಾಡಲು ಪಿತೂರಿ ನಡೆದಿದೆ ಎಂದು ಮಠಾಧೀಶರು ಅಸಮಾಧಾನ ಸೂಚಿಸಿದ್ದಾರೆ.

veerashaiva lingayath pontiffs send strong signals in favour of karnataka cmbs yediyurappa 2

ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು

ಸಮುದಾಯದ ನಾಯಕನಿಗೆ ಅನ್ಯಾಯವಾದರೆ ಹೋರಾಟದ ಎಚ್ಚರಿಕೆ ಸಿಎಂ ಯಡಿಯೂರಪ್ಪಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ವೀರಶೈವ ಲಿಂಗಾಯತ ಸಮುದಾಯ ನಾಯಕನಿಗೆ ಅನ್ಯಾಯವಾಗುತ್ತಿದೆ. ಸಮುದಾಯದ ನಾಯಕನಿಗೆ ಅನ್ಯಾಯವಾದರೆ  ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ರವಾನಿಸಿದರು.

ಯಡಿಯೂರಪ್ಪ ಮುಖ ನೋಡಿ ಬಿಜೆಪಿಗೆ ಮತ ಹಾಕಿದ್ದೇವೆ. ವೀರಶೈವ ಲಿಂಗಾಯತ ಸಮುದಾಯದಿಂದ ಬಿಜೆಪಿಗೆ ಮತ ಬಿದ್ದಿದೆ. ಆದ್ದರಿಂದಲೇ ರಾಜ್ಯದಲ್ಲಿ ಬಿಜೆಪಿಗೆ 100ಕ್ಕೂ ಹೆಚ್ಚು ಸ್ಥಾನ ಬಂದಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಯಡಿಯೂರಪ್ಪರನ್ನು ಕೆಳಗಿಳಿಸದಂತೆ ವೀರಶೈವ ಲಿಂಗಾಯತ ಮಠಾಧೀಶರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

(veerashaiva lingayat pontiffs send strong signals in favour of karnataka cmbs yediyurappa)

ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ, ನನ್ನ ಜವಾಬ್ದಾರಿ ಈಗ ಜಾಸ್ತಿ ಆಗಿದೆ- ಹಾಸನದಲ್ಲಿ ಬಿಎಸ್​ ಯಡಿಯೂರಪ್ಪ ಘೋಷಣೆ

Published On - 3:44 pm, Mon, 14 June 21

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್