AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಇಂಥದ್ದೇ ಮೀಸಲಾತಿ ಕೊಡಿ ಎಂದು ಕೇಳಲ್ಲ, ಆದ್ರೆ ಮೀಸಲಾತಿ ಕೊಡಬೇಕು- ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ

ವೀರಶೈವ ಲಿಂಗಾಯತ ಒಳಪಂಗಡದಲ್ಲಿ ಜನ ಹಿಂದುಳಿದಿದ್ದಾರೆ. ಸಿಎಂ ಬಳಿ ಒಳಪಂಗಡಗಳ ಎಲ್ಲರಿಗೂ ಮೀಸಲಾತಿ ಕೇಳ್ತಿದ್ದೇವೆ. ಆದರೆ, ಇದೇ ಮೀಸಲಾತಿ ಕೊಡಿ ಎಂದು ಕೇಳ್ತಿಲ್ಲ ಎಂದು ಹೇಳಿದರು. Veerashaiva Lingayat Reservation Quota

ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಇಂಥದ್ದೇ ಮೀಸಲಾತಿ ಕೊಡಿ ಎಂದು ಕೇಳಲ್ಲ, ಆದ್ರೆ  ಮೀಸಲಾತಿ ಕೊಡಬೇಕು- ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ
ಸ್ವಾಮೀಜಿಗಳಿಂದ ಸಿಎಂ BSYಗೆ ಮನವಿ ಪತ್ರ ಸಲ್ಲಿಕೆ
KUSHAL V
| Updated By: ಸಾಧು ಶ್ರೀನಾಥ್​|

Updated on: Feb 09, 2021 | 6:02 PM

Share

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಸ್ವಾಮೀಜಿಗಳ ನಿಯೋಗವೊಂದು  ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪಗೆ ಮನವಿ ಮಾಡಿದರು.  ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಯನ್ನು ಸುಮಾರು 40ಕ್ಕೂ ಹೆಚ್ಚು ಶ್ರೀಗಳು ಭೇಟಿಯಾಗಿ ಮನವಿ ಸಲ್ಲಿಸಿದರು. ವೀರಶೈವ ಲಿಂಗಾಯತ ಸಮುದಾಯದಲ್ಲಿ 106 ಒಳಪಂಗಡಗಳಿವೆ. 32 ಒಳಪಂಗಡಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿವೆ. ಉಳಿದ 74 ಒಳಪಂಗಡಗಳನ್ನು ಮೀಸಲಾತಿಗೆ ಸೇರಿಸಬೇಕೆಂದು ಮನವಿ ಮಾಡಿದರು. ಜೊತೆಗೆ, ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು ಮನವಿ ಸಹ ಮಾಡಿದರು. (Veerashaiva Lingayat Reservation Quota)

ಇನ್ನು, ಸಿಎಂ ಭೇಟಿ ಬಳಿಕ ಮಾತನಾಡಿದು ಸಾರಂಗದೇವ ಶಿವಾಚಾರ್ಯಶ್ರೀಗಳು ವೀರಶೈವ ಲಿಂಗಾಯತ ಒಳಪಂಗಡದಲ್ಲಿ ಜನ ಹಿಂದುಳಿದಿದ್ದಾರೆ. ಸಿಎಂ ಬಳಿ ಒಳಪಂಗಡಗಳ ಎಲ್ಲರಿಗೂ ಮೀಸಲಾತಿ ಕೇಳ್ತಿದ್ದೇವೆ. ಆದರೆ, ಇದೇ ಮೀಸಲಾತಿ ಕೊಡಿ ಎಂದು ಕೇಳ್ತಿಲ್ಲ ಎಂದು ಹೇಳಿದರು.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಿ. ಪಂಚಮಸಾಲಿ ಲಿಂಗಾಯತರಿಗೆ 2A ಮೀಸಲಾತಿಗೆ ವಿರೋಧವಿಲ್ಲ. ನಮ್ಮದು ನಿಗದಿತ ಡಿಮ್ಯಾಂಡ್ ಇಲ್ಲ ಎಂದ ಶಿವಾಚಾರ್ಯ ಶ್ರೀಗಳು ಹೇಳಿದರು. ಈ ನಡುವೆ, ಮೀಸಲಾತಿ ವಿಚಾರವಾಗಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಯಡಿಯೂರಪ್ಪ ಭೇಟಿ ಬಳಿಕ ಸಾರಂಗದೇವ ಶಿವಾಚಾರ್ಯಶ್ರೀಗಳ ಹೇಳಿದರು.

BDA ಅಧ್ಯಕ್ಷ – ಆಯುಕ್ತ ಮಧ್ಯೆ ಟಾಕ್​ ವಾರ್! ರೈತರ ಸಣ್ಣ ಸೈಟ್ ವಿರುದ್ಧ ‘ಸುಪ್ರೀಂ’ಗೆ ಹೋಗ್ತಾರೆ, ಆದ್ರೆ 500 ಕೋಟಿ ರೂ ಜಾಗದ ಬಗ್ಗೆ ಯಾಕೆ ಹೋಗಿಲ್ಲ?

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ