AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ
ಯತ್ನಾಳ್ ವಿರುದ್ಧ ವೀರಶೈವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ
TV9 Web
| Edited By: |

Updated on:Jul 06, 2021 | 12:39 PM

Share

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇಪದೇ ಟೀಕೆ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲಾ ವೀರಶೈವ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚಾಮರಾಜನಗರದ ವಿರಕ್ತ ಮಠದ ಮುಂಭಾಗ ವೀರಶೈವ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಕೂಡ ಲಿಂಗಾಯಿತ, ಯತ್ನಾಳ್ ಕೂಡ ಲಿಂಗಾಯಿತ. ಆದರೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಾದ ಕ್ರಮವಲ್ಲ ಎಂದು ವೀರಶೈವರು ಗೋಮುಖ ವ್ಯಾಘ್ರ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಪ್ರವಾಸಿ ಮಂದಿರಕ್ಕೆ ತೆರಳಿದ ಯತ್ನಾಳ್, ಸದ್ಯ ಪೊಲೀಸ್ ಸರ್ಪಗಾವಲಿನಲ್ಲಿ ಪ್ರವಾಸಿ ಮಂದಿರದಲ್ಲಿ ತಂಗಿದ್ದಾರೆ.

ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ; ಯತ್ನಾಳ್ ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಚಾಚಿ ನಿಲ್ಲುತ್ತಾರೆ. ವಿಜಯೇಂದ್ರ ಗ್ರಾಮ ಪಂಚಾಯಿತಿ ಸದಸ್ಯ ಸಹ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ. ಮೊನ್ನೆ ಉಸ್ತುವಾರಿ ಅರುಣ್ ಸಿಂಗ್ ಮಾಡಿದ್ದ ನಾಟಕ ನೋಡಿ, ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದರು. ಈ ರೀತಿ ಅಲ್ಲೇ ಹೇಳಿದ ಮೇಲೆ ಇಲ್ಲಿಗೆ ಏಕೆ ಬಂದರು? ಎಂದು ಪ್ರಶ್ನಸಿದ ಯತ್ನಾಳ್ ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

(Veerashaiva mahasabha condemned Yathnal on alleging on CM BS Yediyurappa)

Published On - 12:28 pm, Tue, 6 July 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ