AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ
ಯತ್ನಾಳ್ ವಿರುದ್ಧ ವೀರಶೈವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ
TV9 Web
| Edited By: |

Updated on:Jul 06, 2021 | 12:39 PM

Share

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇಪದೇ ಟೀಕೆ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲಾ ವೀರಶೈವ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚಾಮರಾಜನಗರದ ವಿರಕ್ತ ಮಠದ ಮುಂಭಾಗ ವೀರಶೈವ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಕೂಡ ಲಿಂಗಾಯಿತ, ಯತ್ನಾಳ್ ಕೂಡ ಲಿಂಗಾಯಿತ. ಆದರೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಾದ ಕ್ರಮವಲ್ಲ ಎಂದು ವೀರಶೈವರು ಗೋಮುಖ ವ್ಯಾಘ್ರ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಪ್ರವಾಸಿ ಮಂದಿರಕ್ಕೆ ತೆರಳಿದ ಯತ್ನಾಳ್, ಸದ್ಯ ಪೊಲೀಸ್ ಸರ್ಪಗಾವಲಿನಲ್ಲಿ ಪ್ರವಾಸಿ ಮಂದಿರದಲ್ಲಿ ತಂಗಿದ್ದಾರೆ.

ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ; ಯತ್ನಾಳ್ ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಚಾಚಿ ನಿಲ್ಲುತ್ತಾರೆ. ವಿಜಯೇಂದ್ರ ಗ್ರಾಮ ಪಂಚಾಯಿತಿ ಸದಸ್ಯ ಸಹ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ. ಮೊನ್ನೆ ಉಸ್ತುವಾರಿ ಅರುಣ್ ಸಿಂಗ್ ಮಾಡಿದ್ದ ನಾಟಕ ನೋಡಿ, ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದರು. ಈ ರೀತಿ ಅಲ್ಲೇ ಹೇಳಿದ ಮೇಲೆ ಇಲ್ಲಿಗೆ ಏಕೆ ಬಂದರು? ಎಂದು ಪ್ರಶ್ನಸಿದ ಯತ್ನಾಳ್ ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

(Veerashaiva mahasabha condemned Yathnal on alleging on CM BS Yediyurappa)

Published On - 12:28 pm, Tue, 6 July 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?