AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ.

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ
ಯತ್ನಾಳ್ ವಿರುದ್ಧ ವೀರಶೈವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ
Follow us
TV9 Web
| Updated By: preethi shettigar

Updated on:Jul 06, 2021 | 12:39 PM

ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇಪದೇ ಟೀಕೆ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲಾ ವೀರಶೈವ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚಾಮರಾಜನಗರದ ವಿರಕ್ತ ಮಠದ ಮುಂಭಾಗ ವೀರಶೈವ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಕೂಡ ಲಿಂಗಾಯಿತ, ಯತ್ನಾಳ್ ಕೂಡ ಲಿಂಗಾಯಿತ. ಆದರೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಾದ ಕ್ರಮವಲ್ಲ ಎಂದು ವೀರಶೈವರು ಗೋಮುಖ ವ್ಯಾಘ್ರ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಪ್ರವಾಸಿ ಮಂದಿರಕ್ಕೆ ತೆರಳಿದ ಯತ್ನಾಳ್, ಸದ್ಯ ಪೊಲೀಸ್ ಸರ್ಪಗಾವಲಿನಲ್ಲಿ ಪ್ರವಾಸಿ ಮಂದಿರದಲ್ಲಿ ತಂಗಿದ್ದಾರೆ.

ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ; ಯತ್ನಾಳ್ ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಚಾಚಿ ನಿಲ್ಲುತ್ತಾರೆ. ವಿಜಯೇಂದ್ರ ಗ್ರಾಮ ಪಂಚಾಯಿತಿ ಸದಸ್ಯ ಸಹ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ. ಮೊನ್ನೆ ಉಸ್ತುವಾರಿ ಅರುಣ್ ಸಿಂಗ್ ಮಾಡಿದ್ದ ನಾಟಕ ನೋಡಿ, ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದರು. ಈ ರೀತಿ ಅಲ್ಲೇ ಹೇಳಿದ ಮೇಲೆ ಇಲ್ಲಿಗೆ ಏಕೆ ಬಂದರು? ಎಂದು ಪ್ರಶ್ನಸಿದ ಯತ್ನಾಳ್ ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ

ಡಿಕೆಶಿಗೆ ಟಾಂಗ್: ಯಾವುದೇ ಕಾರಣಕ್ಕೂ ‘ಕೈ’ ಕೊಟ್ಟ ಶಾಸಕರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ- ಕಡ್ಡಿಮುರಿದಂಗೆ ಹೇಳಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

(Veerashaiva mahasabha condemned Yathnal on alleging on CM BS Yediyurappa)

Published On - 12:28 pm, Tue, 6 July 21

ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ