AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್​ನಿಂದ ಕುಸಿದು ಬಿತ್ತು ಕೃಷಿ ಉತ್ಪನ್ನಗಳ ಬೆಲೆ; ಕೋಲಾರದ ರೈತರಲ್ಲಿ ಹೆಚ್ಚಿದ ಆತಂಕ

ಲಾಕ್​ಡೌನ್​ನಿಂದ ಕೃಷಿ ಚುಟುವಟಿಕೆಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಸರ್ಕಾರ ಸಮರ್ಥಿಸಿಕೊಂಡಿದ್ದ ನಂತರದಲ್ಲಿ ಎಪಿಎಂಸಿಗಳಿಗೆ ಕೇವಲ ಆರು ಗಂಟೆಗಳ ಕಾಲ ಮಾತ್ರ ಅವಕಾಶ ನೀಡಿರುವುದರಿಂದ ಎಪಿಎಂಸಿಗಳಿಗೆ ಬರುವ ಶೇಕಡಾ 60 ರಷ್ಟು ಕೃಷಿ ಉತ್ಪನ್ನಗಳು ಮಾರಾಟವಾಗದೆ ಉಳಿಯುತ್ತಿದ್ದು, ರೈತರು ನಷ್ಟ ಅನುಭವಿಸುವಂತಾಗಿದೆ.

ಕೊರೊನಾ ಲಾಕ್​ಡೌನ್​ನಿಂದ ಕುಸಿದು ಬಿತ್ತು ಕೃಷಿ ಉತ್ಪನ್ನಗಳ ಬೆಲೆ; ಕೋಲಾರದ ರೈತರಲ್ಲಿ ಹೆಚ್ಚಿದ ಆತಂಕ
ಕೋಲಾರದ ಎಪಿಎಂಸಿ ಮಾರುಕಟ್ಟೆ ಮುಂದೆಯೇ ಬೆಳೆದ ಬೆಳೆ ಇಡಲಾಗಿದೆ.
preethi shettigar
|

Updated on: May 04, 2021 | 7:51 AM

Share

ಕೋಲಾರ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿ ವ್ಯಾಪಿಸುತ್ತಿದ್ದು, ಕೊರೊನಾ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಇದರ ಮಧ್ಯೆ ಆಕ್ಸಿಜನ್ ಸಿಗದೆ ಜನರು ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್​ಡೌನ್ ಜಾರಿ ಮಾಡಿದೆ. ಆದರೆ ಸರ್ಕಾರದ ಈ ನಿರ್ಧಾರದಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಸಿಗದಂತಹ ಹಿನ್ನೆಲೆಯಲ್ಲಿ ಬೆಳೆಯನ್ನು ಎಪಿಎಂಸಿ ಮಾರುಕಟ್ಟೆ ಹಾಗೂ ತೋಟಗಳಲ್ಲಿಯೇ ರೈತರು ಬೆಳೆಯನ್ನು ಬಿಡುತ್ತಿರುವುದು ಕಂಡುಬಂದಿದೆ.

ಕೋಲಾರ ಜಿಲ್ಲೆಯಲ್ಲಿ ಲಾಕ್​ಡೌನ್​​ನಿಂದಾಗಿ ಹಣ್ಣು-ತರಕಾರಿಗಳ ಬೆಲೆ ಕಡಿಮೆಯಾಗಿರುವುದು ಒಂದೆಡೆಯಾದರೆ, ಎಪಿಎಂಪಿ ಮಾರುಕಟ್ಟೆಗಳು ಬೆಳಗ್ಗೆ 6 ರಿಂದ 12 ರವರೆಗೆ ಕಾರ್ಯನಿರ್ವಹಿಸಬೇಕೆಂದು ಸರ್ಕಾರ ಆದೇಶಿಸಿದೆ. ಇದರಿಂದ ಕೃಷಿ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ಸಮರ್ಪಕವಾಗಿ ಹರಾಜು ಪ್ರಕ್ರಿಯೆ ನಡೆಯದೆ ಲಕ್ಷಾಂತರ ಮೌಲ್ಯದ ಬೆಳೆ ಎಪಿಎಂಸಿಗಳಲ್ಲಿ ಉಳಿಯುವಂತಾಗಿದೆ. ಲಾಕ್​ಡೌನ್​ನಿಂದ ಕೃಷಿ ಚುಟುವಟಿಕೆಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಸರ್ಕಾರ ಸಮರ್ಥಿಸಿಕೊಂಡಿದ್ದ ನಂತರದಲ್ಲಿ ಎಪಿಎಂಸಿಗಳಿಗೆ ಕೇವಲ ಆರು ಗಂಟೆಗಳ ಕಾಲ ಮಾತ್ರ ಅವಕಾಶ ನೀಡಿರುವುದರಿಂದ ಎಪಿಎಂಸಿಗಳಿಗೆ ಬರುವ ಶೇಕಡಾ 60 ರಷ್ಟು ಕೃಷಿ ಉತ್ಪನ್ನಗಳು ಮಾರಾಟವಾಗದೆ ಉಳಿಯುತ್ತಿದ್ದು, ರೈತರು ನಷ್ಟ ಅನುಭವಿಸುವಂತಾಗಿದೆ.

ಹಾಕಿದ ಬಂಡವಾಳವೂ ಸಿಗುತ್ತಿಲ್ಲ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ರೈತರು ಬೆಳೆಯುವಂತಹ ಉತ್ಪನ್ನಗಳ ಬೆಲೆ ದಿಢೀರ್ ಕುಸಿತವಾಗಿದ್ದು, ಕೂಲಿ ಹಾಗೂ ಸಾಗಾಣಿಕೆ ವೆಚ್ಚವೂ ರೈತರಿಗೆ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಮಾರುಕಟ್ಟೆಗೆ ತಂದ ಉತ್ಪನ್ನಗಳನ್ನು ಖರೀದಿಸಲು ವರ್ತಕರು ಮಾರುಕಟ್ಟೆಗಳತ್ತ ಬರುತ್ತಿಲ್ಲ. ಇದರ ಪರಿಣಾಮ ರೈತರು ಮಾರುಕಟ್ಟೆಯಲ್ಲಿಯೇ ತಾವು ತಂದ ಉತ್ಪನ್ನಗಳನ್ನು ಬಿಟ್ಟು ಹೋಗುತ್ತಿದ್ದಾರೆ.

ಬೀದಿಗೆ ಬಿತ್ತು ಹೂವು ಬೆಳೆಗಾರರ ಸ್ಥಿತಿ ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ಜಾತ್ರೆ, ಉತ್ಸವಗಳ ಮೇಲೆ ಈಗಾಗಲೇ ಸರ್ಕಾರ ನಿಷೇದ ಹೇರಿರುವ ಹಿನ್ನೆಲೆಯಲ್ಲಿ, ದೇವಾಲಯಗಳಲ್ಲಿ ನಿತ್ಯ ಸಾಂಕೇತಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನು ಯಾವುದೇ ಸಭೆ-ಸಮಾರಂಭಗಳು ನಡೆಯದ ಪರಿಣಾಮ ಹೂವು ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಕಳೆದ ವರ್ಷದ ಲಾಕ್‌ಡೌನ್ ಸಂದರ್ಭದಲ್ಲಿಯೂ ಹೂವು ಬೆಳೆಗಾರರು ತೀವ್ರ ತೊಂದರೆ ಅನುಭವಿಸಿದ್ದರು, ಇಂದಿಗೂ ಸಾವಿರಾರು ರೈತರಿಗೆ ಸರ್ಕಾರದಿಂದ ಪರಿಹಾರ ಬಂದಿಲ್ಲ. ಇದೀಗ ಮತ್ತೆ ಲಾಕ್​ಡೌನ್​ನಿಂದಾಗಿ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದೆ ತೊಂದರೆ ಅನುಭವಿಸುವಂತಾಗಿದೆ. ದೇವಾಲಯಗಳು ಮುಚ್ಚಿದ್ದು, ಮದುವೆ, ಗೃಹಪ್ರವೇಶದಂತಹ ಸಮಾರಂಭಗಳು ನಡೆಯುತ್ತಿಲ್ಲ. ಇನ್ನು ಬೇರೆ ರಾಜ್ಯಗಳ ವರ್ತಕರೂ ಸಹ ಹೂವು ಖರೀದಿಗೆ ರಾಜ್ಯಗಳತ್ತ ಬರುತ್ತಿಲ್ಲ. ಹೀಗಾಗಿ ರೈತರು ಬೆಳೆದ ಹೂ ಬೆಳೆ ತೋಟಗಳಲ್ಲಿಯೇ ಉಳಿಯುತ್ತಿವೆ.

kolar crop

ಹೊಲದಲ್ಲೇ ಇರುವ ಹೂವು

ಟೊಮ್ಯಾಟೊ ಹಣ್ಣನ್ನು ಕೇಳುವವರಿಲ್ಲ, ಬೆಲೆಯೂ ಇಲ್ಲ ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಬೆಳೆಯುವ ಟೊಮ್ಯಾಟೊ ಬೆಲೆ ಕೆಜಿಗೆ ಕೇವಲ 2-3 ರೂಪಾಯಿಗೆ ಆಗಿದೆ. ಮಾರುಕಟ್ಟೆಗೆ ತಂದರೂ ವರ್ತಕರು ಟೊಮ್ಯಾಟೊ ಖರೀದಿಗೆ ಮುಂದಾಗುತ್ತಿಲ್ಲ. ಇದರೊಂದಿಗೆ ಪ್ರಮುಖ ಸಂಸ್ಕರಣಾ ಘಟಕಗಳು ಟೊಮ್ಯಾಟೊ ಖರೀದಿಯನ್ನು ಸ್ಥಗಿತಗೊಳಿಸಿದರಿಂದಾಗಿ ಕೋಲಾರ ಎಪಿಎಂಸಿ ಒಂದರಲ್ಲಿಯೇ ನಿತ್ಯ 15-18 ಸಾವಿರ ಬಾಕ್ಸ್ ಟೊಮ್ಯಾಟೋ ಬೆಳೆಯನ್ನು ಮಾರುಕಟ್ಟೆಯಲ್ಲೇ ಬಿಟ್ಟು ಹೋಗುವಂತ ಸ್ಥಿತಿ ಇದೆ.

kolar tomato

ಟೊಮೆಟೊ ಬೆಳೆ

ಹೋಟೆಲ್‌ಗಳು, ಬೀದಿ ಬದಿ ಅಂಡಿಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾದ ಕ್ಯಾಪ್ಸಿಕಂ, ಬಜ್ಜಿ ಮೆಣಸಿನ ಕಾಯಿ ಸೇರಿದಂತೆ ಸೌತೆಕಾಯಿ, ಖರ್ಬೂಜ, ಚಿಕ್ಕಡಿ, ಎಲೆಕೋಸ್, ಕ್ಯಾರೆಟ್, ಸೋರೆಕಾಯಿ, ಬೀಟ್‌ರೂಟ್ ಮತ್ತು ಇತರೆ ಕೃಷಿ ಉತ್ಪನ್ನಗಳು ಹರಾಜಾಗದೆ ಉಳಿಯುತ್ತಿವೆ ಎಂದು ಎಪಿಎಂಸಿ ಕಾರ್ಯದರ್ಶಿ ರವಿಕುಮಾರ್​ ಹೇಳಿದ್ದಾರೆ.

ಕೋಲಾರ ಎಪಿಎಂಸಿ ಮಾರುಕಟ್ಟೆಯಿಂದ ದೇಶದ ವಿವಿಧ ರಾಜ್ಯಗಳಿಗೆ ತರಕಾರಿ ಹಾಗೂ ಟೊಮ್ಯಾಟೊ ಸರಬರಾಜು ಮಾಡಲಾಗುತ್ತದೆ. ಆದರೆ ಈಗ ಲಾಕ್​ಡೌನ್​ ಇರುವ ಪರಿಣಾಮ ಹೊರ ರಾಜ್ಯದ ವರ್ತಕರು ಯಾರು ಬರುತ್ತಿಲ್ಲ. ಹಾಗಾಗಿ ಬೇಡಿಕೆ ಕಡಿಮೆಯಾಗಿದೆ ಎಂದು ಮಂಡಿ ಮಾಲೀಕ ಪುಟ್ಟರಾಜು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಉತ್ತಮ ಫಸಲು ಬಂದರೂ ಮಾರುಕಟ್ಟೆಯಲ್ಲಿ ಬೆಲೆ ಇಲ್ಲ; ಕೋಲಾರದಲ್ಲಿ ಆಲೂಗಡ್ಡೆ ಬೆಳೆದ ರೈತ ಕಂಗಾಲು

ಜನತಾ ಕರ್ಫ್ಯೂ ಬಿಸಿಗೆ ಬಾಡಿಹೋದ ಮಲ್ಲಿಗೆ; ಹೂವಿನ ಬೆಳೆಗೆ ಸರಿಯಾದ ಬೆಲೆ ಸಿಗದೆ ಕಂಗಾಲಾದ ಉಡುಪಿ ಬೆಳೆಗಾರರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ