AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price Hike: ಖರೀದಿದಾರರಿಗೆ ಶಾಕ್! ತರಕಾರಿ ಬೆಲೆ ಮತ್ತೆ ಏರಿಕೆ

ಸುಮಾರು ಒಂದು ತಿಂಗಳಿನಿಂದ ಖರೀದಿದಾರರಿಗೆ ತರಕಾರಿ ಬೆಲೆ ಏರಿಕೆ ಬಿಸಿ ತಟ್ಟಿದೆ. ಒಂದು ತಿಂಗಳ ಹಿಂದೆ ಇದ್ದ ದರ ಇಂದು ಇಲ್ಲ ಅಂತ ಖರೀದಿರಾರರು ಹೇಳುತ್ತಿದ್ದಾರೆ. ಅಕಾಲಿಕ ಮಳೆಯಿಂದ ಬೆಲೆ ಡಬಲ್ ಆಗಿದೆ.

Vegetable Price Hike: ಖರೀದಿದಾರರಿಗೆ ಶಾಕ್! ತರಕಾರಿ ಬೆಲೆ ಮತ್ತೆ ಏರಿಕೆ
ತರಕಾರಿಗಳು (ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on:Dec 22, 2021 | 12:58 PM

Share

ಬೆಂಗಳೂರು: ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಫಸಲು ರೈತನ ಕೈ ಸೇರುವ ಮೊದಲೇ ಬೆಳೆ ನಾಶವಾಗಿ ಹೋಗಿದೆ. ಹೆಚ್ಚು ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಮುಂದಿನ ಜೀವನ ಹೇಗೆ ಅಂತ ಚಿಂತಿಸುತ್ತಿದ್ದಾರೆ. ಈ ನಡುವೆ ತರಕಾರಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಖರೀದಿದಾರರು ಶಾಕ್ ಆಗಿದ್ದಾರೆ. ಮಾರುಕಟ್ಟೆಗೆ ಬರುವ ಖರೀದಿದಾರರು ತರಕಾರಿ ಬೆಲೆ ಕಂಡು ವಾಪಸ್ಸಾಗುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 15 ದಿನಗಳ ಕಾಲ ಸುರಿದ ನಿರಂತರ ಮಳೆಗೆ ತರಕಾರಿ ಹೊಲದಲ್ಲೇ ಕೊಳೆತು ಹೋಗಿವೆ. ಹೀಗಾಗಿ ಮಾರುಕಟ್ಟೆಗೆ ತರಕಾರಿ ಬರುವ ಪ್ರಮಾಣ ಕಡಿಮೆಯಾಗಿದೆ.

ಯಾವ ಯಾವ ತರಕಾರಿಗೆ ಬೆಲೆ ಎಷ್ಟಿದೆ? ಒಂದು ಕೆಜಿ ನವೀಲುಕೋಸು- 100 ರೂ. ಬೀನ್ಸ್- 90 ರೂ. ಮೂಲಂಗಿ- 80 ರೂ. ಕ್ಯಾಪ್ಸಿಕಂ- 80 ರೂ. ಕ್ಯಾರೆಟ್- 80 ರೂ. ಬದನೆಕಾಯಿ- 80 ರೂ. ಹೀರೆಕಾಯಿ- 80 ರೂ. ಸೋರೆಕಾಯಿ- 80 ರೂ. ಟೊಮ್ಯಾಟೋ- 120 ರೂ. ಆಗಿದೆ.

ಟೊಮ್ಯಾಟೋ ದರ ಕೇಳಿ ಗ್ರಾಹಕರು  ಕಂಗಾಲಾಗಿದ್ದಾರೆ. ಎಲ್ಲಾ ಅಡುಗೆಗೆ ಸಾಮಾನ್ಯವಾಗಿ ಟೊಮ್ಯಾಟೋ ಬಳಸುತ್ತಾರೆ. ಹೀಗಾಗಿ ಇದರ ಬಳಕೆ ಹೆಚ್ಚಾಗಿರುತ್ತದೆ. ಆದರೆ ಟೊಮ್ಯಾಟೋ ದರ ಕೇಳಿದ ಖರೀದಿದಾರರು ಮಾರುಕಟ್ಟೆಯಿಂದ ವಾಪಸ್ಸಾಗುತ್ತಿದ್ದಾರೆ.

ಸುಮಾರು ಒಂದು ತಿಂಗಳಿನಿಂದ ಖರೀದಿದಾರರಿಗೆ ತರಕಾರಿ ಬೆಲೆ ಏರಿಕೆ ಬಿಸಿ ತಟ್ಟಿದೆ. ಒಂದು ತಿಂಗಳ ಹಿಂದೆ ಇದ್ದ ದರ ಇಂದು ಇಲ್ಲ ಅಂತ ಖರೀದಿರಾರರು ಹೇಳುತ್ತಿದ್ದಾರೆ. ಅಕಾಲಿಕ ಮಳೆಯಿಂದ ಬೆಲೆ ಡಬಲ್ ಆಗಿದೆ. ಹೊಸದಾಗಿ ತರಕಾರಿ ಬೆಳೆ ರೈತರ ಕೈ ಸೇರುವವರೆಗೂ ರಾಜ್ಯದ ಜನರು ಇದೇ ಸ್ಥಿತಿಯನ್ನು ಎದುರಿಸಬೇಕು.

ಇದನ್ನೂ ಓದಿ

Anti-conversion laws ಭಾರತದಲ್ಲಿ ಧಾರ್ಮಿಕ ಮತಾಂತರವನ್ನು ರಾಜ್ಯಗಳು ಹೇಗೆ ಎದುರಿಸುತ್ತವೆ? ಯಾವ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾನೂನು ಇದೆ?

ವರ್ಷದ ಕೊನೆಯ ದಿನ ಕರ್ನಾಟಕ ಬಂದ್: ಕನ್ನಡ ಪರ ಸಂಘಟನೆಗಳ ಘೋಷಣೆ

Published On - 12:54 pm, Wed, 22 December 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು