AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ತಿಂದ್ರೆ ಅಪಾಯ ಗ್ಯಾರಂಟಿ.. ಬೆಂಗಳೂರು ಕೆರೆ ನೀರು ಬಳಕೆ ಮಾಡಿದ ಬೆಳೆಯಲ್ಲಿ ಭಾರ ಲೋಹದ ಅಂಶ ಪತ್ತೆ

ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನು ತಿಂದ್ರೆ ಅಪಾಯ ಗ್ಯಾರಂಟಿ.. ಬೆಂಗಳೂರು ಕೆರೆ ನೀರು ಬಳಕೆ ಮಾಡಿದ ಬೆಳೆಯಲ್ಲಿ ಭಾರ ಲೋಹದ ಅಂಶ ಪತ್ತೆ
ಹಣ್ಣು ಮತ್ತು ತರಕಾರಿಗಳು (ಸಾಂದರ್ಭಿಕ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Jan 24, 2021 | 9:25 PM

Share

ಬೆಂಗಳೂರು: ನಗರದ ಕೆರೆ ನೀರು ಬಳಕೆ ಮಾಡಿಕೊಂಡು ಬೆಳೆದ ಬೆಳೆಗಳಲ್ಲಿ ಭಾರೀ ಪ್ರಮಾಣದ ಭಾರ ಲೋಹ ಇರುವುದನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಈ ವಿಚಾರ ತುಂಬಾನೇ ಆತಂಕ ಮೂಡಿಸಿದೆ.

ಬೆಂಗಳೂರು ಸುತ್ತಮುತ್ತಲ ಭಾಗದಲ್ಲಿ ಕೆರೆ ನೀರು ಬಳಕೆ ಮಾಡಿಕೊಂಡು ಬೆಳೆದ ಬೆಳೆಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಸೊಪ್ಪು, ಟೊಮ್ಯಾಟೋ, ಭತ್ತ ಹಾಗೂ ಬೀಟ್ರೂಟ್​ನಲ್ಲಿ ನಿಗದಿಪಡಿಸಿದ್ದಕ್ಕಿಂತಲೂ ಹೆಚ್ಚಿನ ಪ್ರಮಾಣದ ಭಾರ ಲೋಹದ ಅಂಶ ಕಂಡು ಬಂದಿದೆ.

ಕ್ರೋಮಿಯಂ, ಕ್ಯಾಡ್ಮಿಯಮ್ ಮತ್ತು ನಿಕಲ್ ಲೋಹಗಳು ತರಕಾರಿ ಹಾಗೂ ಸೊಪ್ಪಿನಲ್ಲಿ ಇರುವ ವಿಚಾರ ತಿಳಿದು ಬಂದಿದೆ. ಈ ರೈತರು ತಮ್ಮ ಬೆಳೆಗೆ ಕೆರೆ ನೀರನ್ನು ಬಳಕೆ ಮಾಡಿಕೊಂಡಿದ್ದಾರೆ. ಭೂಮಿಯನ್ನು ಫಲವತ್ತಾಗಿಸಲು ಸರೋವರದ ಕೆಸರನ್ನು ಕೂಡ ಸೇರಿಸಿದ್ದಾರೆ. ಕೆರೆ ನೀರು ಈಗಾಗಲೇ ಕಲುಷಿತಗೊಂಡಿದೆ. ಅದೇ ನೀರನ್ನು ಬಳಕೆ ಮಾಡಿದ್ದರಿಂದ  ಇದು ಗಿಡಗಳಿಗೂ ಸೇರಿದೆ.

ಇನ್ನು, ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾರಗೊಂಡನಹಳ್ಳಿ, ಹೊಸಕೋಟೆ, ವರ್ತೂರು, ಜಿಗಣಿ ಭಾಗದಲ್ಲಿರುವ ಕೆರೆ ನೀರು ಬಳಕೆ ಮಾಡಿ ಬೆಳೆದ ಬೆಳೆಗಳಲ್ಲಿ ಈ ಅಪಾಯಕಾರಿ ಅಂಶ ಕಾಣಿಸಿಕೊಂಡಿದೆ. ಇದನ್ನು ನಿರಂತರವಾಗಿ ಸೇವನೆ ಮಾಡುವುದರಿಂದ ಮಾರಕ ರೋಗಗಳು ಕಾಣಿಸಿಕೊಳ್ಳಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. 2017ರಲ್ಲೂ ತಜ್ಞರು ಇದೇ ಮಾದರಿಯ ಎಚ್ಚರಿಕೆ ನೀಡಿದ್ದರು.

ಆಕಳ ಹಾಲು ಕಲುಶಿತ! ಅಪಾಯಕಾರಿ ಲೋಹಗಳುಳ್ಳ ತರಕಾರಿ ಹಾಗೂ ಹುಲ್ಲನ್ನು ಸೇವನೆ ಮಾಡುವ ಹಸುಗಳಿಗೆ ಇದರ ಅಪಾಯ ತಪ್ಪಿದ್ದಲ್ಲ. ಅಷ್ಟೇ ಅಲ್ಲ, ಆಕಳಿನ ಹಾಲಿನಲ್ಲೂ ವಿಷಕಾರಿ ಅಂಶ ಸೇರಿರುವ ಸಾಧ್ಯತೆ ಇರುತ್ತದೆ. ಇದನ್ನು ಸೇವನೆ ಮಾಡಿದ ಮನುಷ್ಯನಿಗೆ ಅಪಾಯ ಎದುರಾಗಬಹುದು.

ಮನೆ ಮೇಲೆ ಬಗೆಬಗೆ ತರಕಾರಿ, ನಗುತಿವೆ ಹತ್ತಾರು ಬಗೆಯ ಸೊಪ್ಪು, ಹೂ ಗಿಡಗಳು; ತಾರಸಿ ಕೃಷಿಯ ಯಶೋಗಾಥೆಯಿದು

Follow Us
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ