ಇದನ್ನು ತಿಂದ್ರೆ ಅಪಾಯ ಗ್ಯಾರಂಟಿ.. ಬೆಂಗಳೂರು ಕೆರೆ ನೀರು ಬಳಕೆ ಮಾಡಿದ ಬೆಳೆಯಲ್ಲಿ ಭಾರ ಲೋಹದ ಅಂಶ ಪತ್ತೆ

ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನು ತಿಂದ್ರೆ ಅಪಾಯ ಗ್ಯಾರಂಟಿ.. ಬೆಂಗಳೂರು ಕೆರೆ ನೀರು ಬಳಕೆ ಮಾಡಿದ ಬೆಳೆಯಲ್ಲಿ ಭಾರ ಲೋಹದ ಅಂಶ ಪತ್ತೆ
ಹಣ್ಣು ಮತ್ತು ತರಕಾರಿಗಳು (ಸಾಂದರ್ಭಿಕ ಚಿತ್ರ)
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 24, 2021 | 9:25 PM

ಬೆಂಗಳೂರು: ನಗರದ ಕೆರೆ ನೀರು ಬಳಕೆ ಮಾಡಿಕೊಂಡು ಬೆಳೆದ ಬೆಳೆಗಳಲ್ಲಿ ಭಾರೀ ಪ್ರಮಾಣದ ಭಾರ ಲೋಹ ಇರುವುದನ್ನು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಈ ವಿಚಾರ ತುಂಬಾನೇ ಆತಂಕ ಮೂಡಿಸಿದೆ.

ಬೆಂಗಳೂರು ಸುತ್ತಮುತ್ತಲ ಭಾಗದಲ್ಲಿ ಕೆರೆ ನೀರು ಬಳಕೆ ಮಾಡಿಕೊಂಡು ಬೆಳೆದ ಬೆಳೆಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಸೊಪ್ಪು, ಟೊಮ್ಯಾಟೋ, ಭತ್ತ ಹಾಗೂ ಬೀಟ್ರೂಟ್​ನಲ್ಲಿ ನಿಗದಿಪಡಿಸಿದ್ದಕ್ಕಿಂತಲೂ ಹೆಚ್ಚಿನ ಪ್ರಮಾಣದ ಭಾರ ಲೋಹದ ಅಂಶ ಕಂಡು ಬಂದಿದೆ.

ಕ್ರೋಮಿಯಂ, ಕ್ಯಾಡ್ಮಿಯಮ್ ಮತ್ತು ನಿಕಲ್ ಲೋಹಗಳು ತರಕಾರಿ ಹಾಗೂ ಸೊಪ್ಪಿನಲ್ಲಿ ಇರುವ ವಿಚಾರ ತಿಳಿದು ಬಂದಿದೆ. ಈ ರೈತರು ತಮ್ಮ ಬೆಳೆಗೆ ಕೆರೆ ನೀರನ್ನು ಬಳಕೆ ಮಾಡಿಕೊಂಡಿದ್ದಾರೆ. ಭೂಮಿಯನ್ನು ಫಲವತ್ತಾಗಿಸಲು ಸರೋವರದ ಕೆಸರನ್ನು ಕೂಡ ಸೇರಿಸಿದ್ದಾರೆ. ಕೆರೆ ನೀರು ಈಗಾಗಲೇ ಕಲುಷಿತಗೊಂಡಿದೆ. ಅದೇ ನೀರನ್ನು ಬಳಕೆ ಮಾಡಿದ್ದರಿಂದ  ಇದು ಗಿಡಗಳಿಗೂ ಸೇರಿದೆ.

ಇನ್ನು, ಗಡ್ಡೆ-ಗೆಣಸಿಗಿಂತ ಭೂ ಮೇಲ್ಮೈನಲ್ಲಿ ಬೆಳೆಯುವ ಟೊಮ್ಯಾಟೋ ಮತ್ತಿತ್ಯಾದಿ ತರಕಾರಿಗಳಲ್ಲಿ ಹೆಚ್ಚು ಭಾರ ಲೋಹ ಕಂಡು ಬಂದಿದೆ. ವಾತಾವರಣ ಕಲುಶಿತಗೊಂಡಿದ್ದು ಇದು ತರಕಾರಿ ಮೇಲ್ಮೈ ಸೇರಿದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾರಗೊಂಡನಹಳ್ಳಿ, ಹೊಸಕೋಟೆ, ವರ್ತೂರು, ಜಿಗಣಿ ಭಾಗದಲ್ಲಿರುವ ಕೆರೆ ನೀರು ಬಳಕೆ ಮಾಡಿ ಬೆಳೆದ ಬೆಳೆಗಳಲ್ಲಿ ಈ ಅಪಾಯಕಾರಿ ಅಂಶ ಕಾಣಿಸಿಕೊಂಡಿದೆ. ಇದನ್ನು ನಿರಂತರವಾಗಿ ಸೇವನೆ ಮಾಡುವುದರಿಂದ ಮಾರಕ ರೋಗಗಳು ಕಾಣಿಸಿಕೊಳ್ಳಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. 2017ರಲ್ಲೂ ತಜ್ಞರು ಇದೇ ಮಾದರಿಯ ಎಚ್ಚರಿಕೆ ನೀಡಿದ್ದರು.

ಆಕಳ ಹಾಲು ಕಲುಶಿತ! ಅಪಾಯಕಾರಿ ಲೋಹಗಳುಳ್ಳ ತರಕಾರಿ ಹಾಗೂ ಹುಲ್ಲನ್ನು ಸೇವನೆ ಮಾಡುವ ಹಸುಗಳಿಗೆ ಇದರ ಅಪಾಯ ತಪ್ಪಿದ್ದಲ್ಲ. ಅಷ್ಟೇ ಅಲ್ಲ, ಆಕಳಿನ ಹಾಲಿನಲ್ಲೂ ವಿಷಕಾರಿ ಅಂಶ ಸೇರಿರುವ ಸಾಧ್ಯತೆ ಇರುತ್ತದೆ. ಇದನ್ನು ಸೇವನೆ ಮಾಡಿದ ಮನುಷ್ಯನಿಗೆ ಅಪಾಯ ಎದುರಾಗಬಹುದು.

ಮನೆ ಮೇಲೆ ಬಗೆಬಗೆ ತರಕಾರಿ, ನಗುತಿವೆ ಹತ್ತಾರು ಬಗೆಯ ಸೊಪ್ಪು, ಹೂ ಗಿಡಗಳು; ತಾರಸಿ ಕೃಷಿಯ ಯಶೋಗಾಥೆಯಿದು

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ